AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Crime: ಬೆಂಗಳೂರಿನಲ್ಲಿ ಲೆಹೆಂಗಾದಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 3 ಕೆಜಿ ಡ್ರಗ್ಸ್​ ವಶಕ್ಕೆ

Bengaluru Crime News: ಬೆಂಗಳೂರಿನಲ್ಲಿ ಸುಮಾರು 3 ಕೆಜಿ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನಿಂದ ಆಸ್ಟ್ರೇಲಿಯಾಕ್ಕೆ ಕಳುಹಿಸಬೇಕಾಗಿದ್ದ ಡ್ರಗ್ಸ್ ಅನ್ನು ಮೂರು ಲೆಹೆಂಗಾಗಳಲ್ಲಿ ಮರೆಮಾಚಲಾಗಿತ್ತು.

Bangalore Crime: ಬೆಂಗಳೂರಿನಲ್ಲಿ ಲೆಹೆಂಗಾದಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 3 ಕೆಜಿ ಡ್ರಗ್ಸ್​ ವಶಕ್ಕೆ
ಬೆಂಗಳೂರಿನಲ್ಲಿ ವಶಪಡಿಸಿಕೊಂಡ ಡ್ರಗ್ಸ್
TV9 Web
| Edited By: |

Updated on: Oct 23, 2021 | 2:26 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಡ್ರಗ್ ದಂಧೆ ಹೆಚ್ಚುತ್ತಲೇ ಇದೆ. ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (NCB) ಅಧಿಕಾರಿಗಳು ತಮಗೆ ಸಿಕ್ಕ ಮಾಹಿತಿಯನ್ನು ಆಧರಿಸಿ, ಬೆಂಗಳೂರಿನಲ್ಲಿ ಸುಮಾರು 3 ಕೆಜಿ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನಿಂದ ಆಸ್ಟ್ರೇಲಿಯಾಕ್ಕೆ ಕಳುಹಿಸಬೇಕಾಗಿದ್ದ ಡ್ರಗ್ಸ್ ಅನ್ನು ಮೂರು ಲೆಹೆಂಗಾಗಳಲ್ಲಿ ಮರೆಮಾಚಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ.

ಎನ್‌ಸಿಬಿ ಬೆಂಗಳೂರಿನ ವಲಯ ನಿರ್ದೇಶಕ ಅಮಿತ್ ಘಾವಟೆ ನೇತೃತ್ವದ ತಂಡ ಅಕ್ಟೋಬರ್ 21ರಂದು ಪಾರ್ಸೆಲ್ ಅನ್ನು ತಡೆಹಿಡಿದು ಮೂರು ಲೆಹೆಂಗಾಗಳಲ್ಲಿ ಇರಿಸಲಾಗಿದ್ದ ಸ್ಯೂಡೋಫೆಡ್ರಿನ್ ಎಂಬ ಸುಮಾರು 3 ಕೆಜಿ ಬಿಳಿ ಬಣ್ಣದ ಹರಳಿನ ರೂಪದಲ್ಲಿರುವ ಡ್ರಗ್ಸ್​ ಅನ್ನು ವಶಪಡಿಸಿಕೊಂಡಿದ್ದಾರೆ. ಮಡಿಚಿಟ್ಟಿದ್ದ ಲೆಹೆಂಗಾವನ್ನು ಬಿಚ್ಚಿ ನೋಡಿದಾಗ ಅವುಗಳ ಮಡಿಕೆಗಳಲ್ಲಿ ಈ ಡ್ರಗ್ಸ್​ ಅನ್ನು ಇರಿಸಲಾಗಿತ್ತು. ಬ್ಯಾಗ್ ಅನ್ನು ಸ್ಕ್ಯಾನ್ ಮಾಡಿದಾಗ ಈ ನಿಷೇಧಿತ ವಸ್ತು ಬಗ್ಗೆ ಸುಳಿವು ಸಿಕ್ಕಿತ್ತು.

ಪಾರ್ಸೆಲ್ ಅನ್ನು ಆಂಧ್ರಪ್ರದೇಶದ ನರಸಾಪುರಂನಿಂದ ಬುಕ್ ಮಾಡಲಾಗಿತ್ತು. ಆ ಪಾರ್ಸೆಲ್ ಅನ್ನು ಆಸ್ಟ್ರೇಲಿಯಾಕ್ಕೆ ಕಳುಹಿಸಬೇಕಿತ್ತು. ಆದರೆ, ಈ ಬಗ್ಗೆ ಮಾಹಿತಿ ಸಿಕ್ಕಿದ್ದರಿಂದ ಈ ಡ್ರಗ್ಸ್​ ಸಾಗಿಸುತ್ತಿದ್ದವರನ್ನು ಎನ್​ಸಿಬಿ ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಎರಡು ದಿನಗಳ ಕಾಲ ತನಿಖೆ ನಡೆಸಿದ ಚೆನ್ನೈನಲ್ಲಿರುವ ಎನ್‌ಸಿಬಿ ತಂಡಕ್ಕೆ ಮಾಹಿತಿ ನೀಡಲಾಗಿದೆ. ಪಾರ್ಸೆಲ್ ಕಳುಹಿಸಿದವರ ನಿಜವಾದ ವಿಳಾಸವನ್ನು ಗುರುತಿಸಿ ಶುಕ್ರವಾರ ಅವನನ್ನು ಬಂಧಿಸಲಾಗಿದೆ. ಪಾರ್ಸೆಲ್ ಕಳುಹಿಸಲು ನಕಲಿ ವಿಳಾಸಗಳು ಮತ್ತು ದಾಖಲೆಗಳನ್ನು ಬಳಸಿರುವುದು ಕಂಡುಬಂದಿದೆ.

ಬೆಂಗಳೂರಿನಲ್ಲಿ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಸಾಕಷ್ಟು ಜನರು ಡ್ರಗ್ಸ್​ ತೆಗೆದುಕೊಳ್ಳುತ್ತಿದ್ದಾರೆ. ಕಳೆದ 1 ವರ್ಷದಲ್ಲಿ ಬೆಂಗಳೂರಿನಲ್ಲಿ ಒಟ್ಟು 3255 ಕೆಜಿ ಡ್ರಗ್ಸ್​ ಅನ್ನು ವಶಪಡಿಸಿಕೊಳ್ಳಲಾಗಿದೆ. ಇವಿಷ್ಟು ಪೊಲೀಸರು ಮತ್ತು ಎನ್​ಸಿಬಿ ಅಧಿಕಾರಿಗಳ ಕೈಗೆ ಸಿಕ್ಕ ಡ್ರಗ್ಸ್​ ಆದರೆ ಇನ್ನು ಪೊಲೀಸರ ಗಮನಕ್ಕೆ ಬಾರದೆ ಎಷ್ಟು ಡ್ರಗ್ಸ್​ ಹರಿದಾಡಿದೆಯೋ ಗೊತ್ತಿಲ್ಲ.

ಇದನ್ನೂ ಓದಿ: ನಿಂತಿಲ್ಲ ಡ್ರಗ್ಸ್ ಹಾವಳಿ: ಡಾರ್ಕ್‌ ವೆಬ್‌ ಮಾದಕ ಜಾಲದಿಂದ ಕೊರ್ಟ್ ದಾಖಲೆಯೆಂದು ಸ್ಪೀಡ್ ಪೋಸ್ಟ್ ಮೂಲಕ ಡ್ರಗ್ಸ್ ರವಾನೆ!

ಬೆಂಗಳೂರಿನಲ್ಲಿ ದರೋಡೆ ಮಾಡುತ್ತಿದ್ದ 2 ರೌಡಿ ಗ್ಯಾಂಗ್ ಅರೆಸ್ಟ್!

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ