AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Crime: ಬೆಂಗಳೂರಿನಲ್ಲಿ ಲೆಹೆಂಗಾದಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 3 ಕೆಜಿ ಡ್ರಗ್ಸ್​ ವಶಕ್ಕೆ

Bengaluru Crime News: ಬೆಂಗಳೂರಿನಲ್ಲಿ ಸುಮಾರು 3 ಕೆಜಿ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನಿಂದ ಆಸ್ಟ್ರೇಲಿಯಾಕ್ಕೆ ಕಳುಹಿಸಬೇಕಾಗಿದ್ದ ಡ್ರಗ್ಸ್ ಅನ್ನು ಮೂರು ಲೆಹೆಂಗಾಗಳಲ್ಲಿ ಮರೆಮಾಚಲಾಗಿತ್ತು.

Bangalore Crime: ಬೆಂಗಳೂರಿನಲ್ಲಿ ಲೆಹೆಂಗಾದಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 3 ಕೆಜಿ ಡ್ರಗ್ಸ್​ ವಶಕ್ಕೆ
ಬೆಂಗಳೂರಿನಲ್ಲಿ ವಶಪಡಿಸಿಕೊಂಡ ಡ್ರಗ್ಸ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 23, 2021 | 2:26 PM

ಬೆಂಗಳೂರು: ಬೆಂಗಳೂರಿನಲ್ಲಿ ಡ್ರಗ್ ದಂಧೆ ಹೆಚ್ಚುತ್ತಲೇ ಇದೆ. ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (NCB) ಅಧಿಕಾರಿಗಳು ತಮಗೆ ಸಿಕ್ಕ ಮಾಹಿತಿಯನ್ನು ಆಧರಿಸಿ, ಬೆಂಗಳೂರಿನಲ್ಲಿ ಸುಮಾರು 3 ಕೆಜಿ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನಿಂದ ಆಸ್ಟ್ರೇಲಿಯಾಕ್ಕೆ ಕಳುಹಿಸಬೇಕಾಗಿದ್ದ ಡ್ರಗ್ಸ್ ಅನ್ನು ಮೂರು ಲೆಹೆಂಗಾಗಳಲ್ಲಿ ಮರೆಮಾಚಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ.

ಎನ್‌ಸಿಬಿ ಬೆಂಗಳೂರಿನ ವಲಯ ನಿರ್ದೇಶಕ ಅಮಿತ್ ಘಾವಟೆ ನೇತೃತ್ವದ ತಂಡ ಅಕ್ಟೋಬರ್ 21ರಂದು ಪಾರ್ಸೆಲ್ ಅನ್ನು ತಡೆಹಿಡಿದು ಮೂರು ಲೆಹೆಂಗಾಗಳಲ್ಲಿ ಇರಿಸಲಾಗಿದ್ದ ಸ್ಯೂಡೋಫೆಡ್ರಿನ್ ಎಂಬ ಸುಮಾರು 3 ಕೆಜಿ ಬಿಳಿ ಬಣ್ಣದ ಹರಳಿನ ರೂಪದಲ್ಲಿರುವ ಡ್ರಗ್ಸ್​ ಅನ್ನು ವಶಪಡಿಸಿಕೊಂಡಿದ್ದಾರೆ. ಮಡಿಚಿಟ್ಟಿದ್ದ ಲೆಹೆಂಗಾವನ್ನು ಬಿಚ್ಚಿ ನೋಡಿದಾಗ ಅವುಗಳ ಮಡಿಕೆಗಳಲ್ಲಿ ಈ ಡ್ರಗ್ಸ್​ ಅನ್ನು ಇರಿಸಲಾಗಿತ್ತು. ಬ್ಯಾಗ್ ಅನ್ನು ಸ್ಕ್ಯಾನ್ ಮಾಡಿದಾಗ ಈ ನಿಷೇಧಿತ ವಸ್ತು ಬಗ್ಗೆ ಸುಳಿವು ಸಿಕ್ಕಿತ್ತು.

ಪಾರ್ಸೆಲ್ ಅನ್ನು ಆಂಧ್ರಪ್ರದೇಶದ ನರಸಾಪುರಂನಿಂದ ಬುಕ್ ಮಾಡಲಾಗಿತ್ತು. ಆ ಪಾರ್ಸೆಲ್ ಅನ್ನು ಆಸ್ಟ್ರೇಲಿಯಾಕ್ಕೆ ಕಳುಹಿಸಬೇಕಿತ್ತು. ಆದರೆ, ಈ ಬಗ್ಗೆ ಮಾಹಿತಿ ಸಿಕ್ಕಿದ್ದರಿಂದ ಈ ಡ್ರಗ್ಸ್​ ಸಾಗಿಸುತ್ತಿದ್ದವರನ್ನು ಎನ್​ಸಿಬಿ ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಎರಡು ದಿನಗಳ ಕಾಲ ತನಿಖೆ ನಡೆಸಿದ ಚೆನ್ನೈನಲ್ಲಿರುವ ಎನ್‌ಸಿಬಿ ತಂಡಕ್ಕೆ ಮಾಹಿತಿ ನೀಡಲಾಗಿದೆ. ಪಾರ್ಸೆಲ್ ಕಳುಹಿಸಿದವರ ನಿಜವಾದ ವಿಳಾಸವನ್ನು ಗುರುತಿಸಿ ಶುಕ್ರವಾರ ಅವನನ್ನು ಬಂಧಿಸಲಾಗಿದೆ. ಪಾರ್ಸೆಲ್ ಕಳುಹಿಸಲು ನಕಲಿ ವಿಳಾಸಗಳು ಮತ್ತು ದಾಖಲೆಗಳನ್ನು ಬಳಸಿರುವುದು ಕಂಡುಬಂದಿದೆ.

ಬೆಂಗಳೂರಿನಲ್ಲಿ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಸಾಕಷ್ಟು ಜನರು ಡ್ರಗ್ಸ್​ ತೆಗೆದುಕೊಳ್ಳುತ್ತಿದ್ದಾರೆ. ಕಳೆದ 1 ವರ್ಷದಲ್ಲಿ ಬೆಂಗಳೂರಿನಲ್ಲಿ ಒಟ್ಟು 3255 ಕೆಜಿ ಡ್ರಗ್ಸ್​ ಅನ್ನು ವಶಪಡಿಸಿಕೊಳ್ಳಲಾಗಿದೆ. ಇವಿಷ್ಟು ಪೊಲೀಸರು ಮತ್ತು ಎನ್​ಸಿಬಿ ಅಧಿಕಾರಿಗಳ ಕೈಗೆ ಸಿಕ್ಕ ಡ್ರಗ್ಸ್​ ಆದರೆ ಇನ್ನು ಪೊಲೀಸರ ಗಮನಕ್ಕೆ ಬಾರದೆ ಎಷ್ಟು ಡ್ರಗ್ಸ್​ ಹರಿದಾಡಿದೆಯೋ ಗೊತ್ತಿಲ್ಲ.

ಇದನ್ನೂ ಓದಿ: ನಿಂತಿಲ್ಲ ಡ್ರಗ್ಸ್ ಹಾವಳಿ: ಡಾರ್ಕ್‌ ವೆಬ್‌ ಮಾದಕ ಜಾಲದಿಂದ ಕೊರ್ಟ್ ದಾಖಲೆಯೆಂದು ಸ್ಪೀಡ್ ಪೋಸ್ಟ್ ಮೂಲಕ ಡ್ರಗ್ಸ್ ರವಾನೆ!

ಬೆಂಗಳೂರಿನಲ್ಲಿ ದರೋಡೆ ಮಾಡುತ್ತಿದ್ದ 2 ರೌಡಿ ಗ್ಯಾಂಗ್ ಅರೆಸ್ಟ್!

Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ