AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore: ಚಾಕು ತೋರಿಸಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ

ಊರಿನ ಜನರು ಗಣೇಶನ ವಿಗ್ರಹವನ್ನು ವಿಸರ್ಜನೆ ಮಾಡಲು ಹೋಗಿದ್ದರು. ಈ ವೇಳೆ ಆರ್ಚ್​ ಲೈಟ್​ ಸ್ವಿಚ್​ ಆಫ್ ಮಾಡಲು ತೆರಳಿದ್ದ ಮಹಿಳೆಗೆ ಚಾಕು ತೋರಿಸಿದ ಕಾಮುಕನೊಬ್ಬ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ.

Bangalore: ಚಾಕು ತೋರಿಸಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ
ಬೆಂಗಳೂರಿನಲ್ಲಿ ಮಹಿಳೆ ಮೇಲೆ ಅತ್ಯಾರಕ್ಕೆ ಯತ್ನ ನಡೆಸಿದ ಆರೋಪಿ
TV9 Web
| Edited By: |

Updated on: Sep 16, 2022 | 1:25 PM

Share

ಬೆಂಗಳೂರು: ಆರ್ಚ್​ ಲೈಟ್​ ಸ್ವಿಚ್​ ಆಫ್ ಮಾಡಲು ತೆರಳಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶಾಂತಲಾನಗರದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶನ ವಿಗ್ರಹವನ್ನು ವಿಸರ್ಜನೆ ಮಾಡಲು ಜನರು ತೆರಳಿದ್ದಾರೆ. ಈ ವೇಳೆ ವಿಲಿಯಮ್​ ಪ್ರಕಾಶ್ ಎಂಬಾತ ಆರ್ಚ್​ ಲೈಟ್​ ಸ್ವಿಚ್​ ಆಫ್ ಮಾಡಲು ತೆರಳಿದ್ದ ಮಹಿಳೆಗೆ ಚಾಕು ತೋರಿಸಿ ಅತ್ಯಾಚಾರಕ್ಕೆ ಯತ್ನಿಸಿರುವುದು ತಿಳಿದುಬಂದಿದೆ.

ಅಶೋಕನಗರ ಠಾಣಾ ವ್ಯಾಪ್ತಿಯ ಶಾಂತಲಾನಗರದಲ್ಲಿ ಜನರು ಗಣೇಶನನ್ನು ಕೂರಿಸಿದ್ದರು. ಅದರಂತೆ ಸೆ.10ರ ರಾತ್ರಿ ಜನರು ವಿಗ್ರಹ ವಿಸರ್ಜನೆಗೆ ತೆರಳಿದ್ದರು. ಅದರಂತೆ 9.30ರ ಸುಮಾರಿಗೆ ಆರ್ಚ್​ ಲೈಟ್​ ಸ್ವಿಚ್​ ಆಫ್ ಮಾಡಲು ಮಹಿಳೆಯೊಬ್ಬರು ತೆರಳಿದ್ದಾರೆ. ಈ ವೇಳೆ ಹಿಂಬದಿಯಿಂದ ಬಂದ ವಿಲಿಯಮ್​ ಪ್ರಕಾಶ್, ಚಾಕು ತೋರಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಪ್ರತಿರೋಧವೊಡ್ಡಿದ ಮಹಿಳೆ ಕಾಮುಕನನ್ನು ದೂರ ತಳ್ಳಿ ತಪ್ಪಿಸಿಕೊಂಡು ಬಂದಿದ್ದಾರೆ.

ಕೃತ್ಯಕ್ಕೆ ಯತ್ನಿಸಿದ್ದ ವೇಳೆ ಆರೋಪಿ ಬೆದರಿಕೆ ಹಾಕಿದ್ದ ಹಿನ್ನೆಲೆ ಆತನಿಗೆ ಹೆದರಿ ಮಹಿಳೆ ಇಷ್ಟು ದಿನ ಯಾರ ಬಳಿಯೂ ಹೇಳದೆ, ದೂರು ಕೂಡ ನೀಡದೆ ಸುಮ್ಮನಿದ್ದರು. ಸದ್ಯ ಕೆಲವು ಸಾಮಾಜಿಕ ಕಾರ್ಯಕರ್ತರ ಸಹಾಯದಿಂದ ಮಹಿಳೆ ಪೊಲೀಸ್ ಠಾಣೆ ಮೆಟ್ಟಿಲೇರಿ ದೂರು ದಾಖಲಿಸಿದ್ದಾರೆ. ಅದರಂತೆ ಅಶೋಕನಗರ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ಘಟನಾ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದು, ಮಹಿಳೆಯಿಂದ ಹೆಚ್ಚಿನ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ದಯಾಮರಣಕ್ಕೆ ಅರ್ಜಿ ಸಲ್ಲಿಸಿದ ಕೃಷಿ ಇಲಾಖೆಯ ನಿವೃತ್ತ ಅಧಿಕಾರಿ

ಮಂಡ್ಯ: ಗ್ಯಾರೇಜ್ ಸಿಬ್ಬಂದಿಯ ಕಿರುಕುಳಕ್ಕೆ ಬೇಸತ್ತ ಕೃಷಿ ಇಲಾಖೆಯ ನಿವೃತ್ತ ಅಧಿಕಾರಿಯೊಬ್ಬರು ದಯಾಮರಣ ಕೋರಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದಾರೆ. ಕೃಷಿ ಇಲಾಖೆಯ ನಿವೃತ್ತ ಅಧಿಕಾರಿ ಹೆಚ್.ಜಿ.ಕುಟ್ಟಪ್ಪ ಮತ್ತು ಅವರ ಪತ್ನಿ ವಾಸವಿರುವ ಮನೆಯ ಸಮೀಪದಲ್ಲಿ ವ್ಯಕ್ತಿಯೊಬ್ಬರು ಗ್ಯಾರೇಜ್ ತೆರೆದಿದ್ದಾರೆ. ಇಲ್ಲಿನ ಸಿಬ್ಬಂದಿ ನಿತ್ಯವು ಕಿರುಕುಳ ನೀಡುತ್ತಿದ್ದು, ಈ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಎಸ್​ಪಿ ಅವರಿಗೆ ವೃದ್ಧ ದಂಪತಿ ಹಲವು ಬಾರಿ ದೂರು ನೀಡಿದ್ದಾರೆ. ಆದರೆ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆ ದಯಾಮರಣ ಕೋರಿ ರಾಜ್ಯಲಾಪರಿಗೆ ಅರ್ಜಿ ಸಲ್ಲಿಸಿದ್ದಾರೆ.

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ