AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime: ಹೀಗೊಬ್ಬ ಕಮರ್ಷಿಯಲ್ ಕಳ್ಳ; ಜೈಲಿಗೆ ಹೋಗಿ ಬಂದರೂ ಬುದ್ಧಿ ಕಲಿಯದ ಆರೋಪಿ

Bangalore: ಜೈಲಿಗೆ ಹೋಗಿ ಬಂದರೂ ಬುದ್ಧಿ ಕಲಿಯದ ಆರೋಪಿಯೊಬ್ಬ ಕಮರ್ಷಿಯಲ್ ಕಾಂಪ್ಲೆಕ್ಸ್​ಗಳಿಗೆ ನುಗ್ಗಿ ತನ್ನ ಕೈಚಳಕವನ್ನು ತೋರಿಸಿ ಇದೀಗ ಮತ್ತೆ ಪೊಲೀಸರ ಅತಿಥಿಯಾಗಿದ್ದಾನೆ.

Crime: ಹೀಗೊಬ್ಬ ಕಮರ್ಷಿಯಲ್ ಕಳ್ಳ; ಜೈಲಿಗೆ ಹೋಗಿ ಬಂದರೂ ಬುದ್ಧಿ ಕಲಿಯದ ಆರೋಪಿ
ಮನೆಗಳ್ಳತನ ಮಾಡುತ್ತಿದ್ದ ಆರೋಪಿ ಚೇತನ್ ಮತ್ತು ಕಮರ್ಷಿಯಲ್ ಕಳ್ಳ ಗೊಲ್ಲರಂಗಪ್ಪ
TV9 Web
| Edited By: |

Updated on:Oct 02, 2022 | 1:53 PM

Share

ಬೆಂಗಳೂರು: ಜೈಲಿಗೆ ಹೋಗಿ ಬಂದರೂ ಬುದ್ಧಿ ಕಲಿಯದ ಆರೋಪಿಯೊಬ್ಬ ಕಳ್ಳತನದ ಚಾಳಿ ಬಿಡದೆ ಅದರಲ್ಲಿ ತೊಡಗಿಕೊಂಡು ಇದೀಗ ಮತ್ತೆ ಪೊಲೀಸರ ಅತಿಥಿಯಾಗಿದ್ದಾನೆ. ಗೊಲ್ಲರಂಗಪ್ಪ (40) ಎಂಬ ಆರೋಪಿ ಈ ಮೊದಲು ಶ್ರೀಗಂಧದ ಮರಗಳನ್ನು ಕಳ್ಳತನ ಮಾಡಿ ಮರಾಟದಲ್ಲಿ ತೊಡಗಿದ್ದನು. ಅದರಂತೆ 5 ವರ್ಷ ಸಜೆ ಅನುಭವಿಸಿದ್ದ ಈತ ಜೈಲಿನಿಂದ ಬಿಡುಗಡೆಯಾದ ನಂತರ ಬೇರೊಂದು ರೂಪದಲ್ಲಿ ಕಳ್ಳತನಕ್ಕೆ ಮುಂದಾಗಿದ್ದಾನೆ. ಶ್ರೀಗಂಧದ ಮರಗಳ ಕಳ್ಳತನ ಬಿಟ್ಟು ಕಮರ್ಷಿಯಲ್ ಕಾಂಪ್ಲೆಕ್ಸ್​ಗಳಿಗೆ ನುಗ್ಗಿ ತನ್ನ ಕೈಚಳಕವನ್ನು ತೋರಿಸಲು ಪ್ರಾರಂಭಿಸಿದನು. ಹೀಗೆ ಅನೇಕ ಪ್ರಕರಣಗಳಲ್ಲಿ ತೊಡಗಿದ್ದ ಗೊಲ್ಲರಂಗಪ್ಪನನ್ನು ಇದೀಗ ಸದಾಶಿವನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಈತನ ಬಂಧನದಿಂದ 8 ಪ್ರಕರಣಗಳು ಬೆಳಕಿಗೆ ಬಂದಿದ್ದು, ಆರೋಪಿಯ ಬಳಿಯಿಂದ 10 ಸಾವಿರ ರೂಪಾಯಿ ವಶಕ್ಕೆ ಪಡೆದಿದ್ದಾರೆ.

ಹುಕ್ಕಾ ಬಾರ್​​ ಮೇಲೆ ಸಿಸಿಬಿ ಪೊಲೀಸರ ದಾಳಿ

ಇಂದಿರಾನಗರ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ನಡೆಸುತ್ತಿದ್ದ ಹುಕ್ಕಾ ಬಾರ್​​ ಮೇಲೆ ಸಿಸಿಬಿ ಪೊಲೀಸರ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅದರಂತೆ ಹುಕ್ಕಾ ಬಾರ್ ಮಾಲೀಕ‌, ಮ್ಯಾನೇಜರ್ ಹಾಗೂ ಕ್ಯಾಶಿಯರ್ ವಿರುದ್ಧ ಪ್ರಕರಣವನ್ನು ದಾಖಲಿಸಿದ ಸಿಸಿಬಿ ಪೊಲೀಸರು, ಸುಮಾರು 70 ಸಾವಿರ ಮೌಲ್ಯದ ಹುಕ್ಕಾ ತಯಾರಿಸುವ ಪರಿಕರಗಳು, ಹುಕ್ಕಾ ಫ್ಲೇವರ್​​ಗಳು ಸೇರಿದಂತೆ ಎರಡೂವರೆ ಸಾವಿರ ನಗದು ಜಪ್ತಿ ಮಾಡಿದ್ದಾರೆ. ಇಂದಿರಾನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೊಬೈಲ್ ಕಳವು ಮಾಡಿ ಮಾರಾಟ

ಮೊಬೈಲ್ ಫೋನ್‌ಗಳನ್ನ ಕಳವು ಮಾಡಿದ ನಂತರ ಅದನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ  ಪ್ರಕರಣ ನಗರದಲ್ಲಿ ಬೆಳಕಿಗೆ ಬಂದಿದ್ದು, ಶೇಷಾದ್ರಿಪುರಂ ಠಾಣಾ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ರಹೀಂ ಪಾಶಾ (29) ಬಂಧಿತ ಆರೋಪಿಯಾಗಿದ್ದಾನೆ. ಸ್ಲಂ ಬೋರ್ಡ್ ಬಳಿ ಅನುಮಾಸ್ಪದವಾಗಿ ಮೊಬೈಲ್ ಮಾರಾಟದಲ್ಲಿ ತೊಡಗಿದ್ದ ರಹೀಂನನ್ನು ತಡೆದ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದಾಗ ಕಳ್ಳತನ ಬಗ್ಗೆ ತಿಳಿದುಬಂದಿದೆ. ಹೀಗಾಗಿ ರಹೀಂನನ್ನು ವಶಕ್ಕೆ ಪಡೆದ ಪೊಲೀಸರು, ಬಂಧಿತನಿಂದ 40 ಸಾವಿರ ಮೌಲ್ಯದ 8 ಮೊಬೈಲ್ ಫೋನ್‌ಗಳು ವಶಕ್ಕೆ ಪಡೆದಿದ್ದಾರೆ.

ಕನ್ನ ಕಳವು ಆರೋಪಿಯ ಬಂಧನ

ಹಾಡುಹಗಲೇ ಮನೆಗಳ್ಳತನ ಮಾಡಿ ಪರಾರಿಯಾಗಿದ್ದ ಆಸಾಮಿಯನ್ನು ಮಹದೇವಪುರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿದ ಬಂಧಿಸಿದ್ದಾರೆ. ಚೇತನ್ ಕುಮಾರ್(23) ಬಂಧಿತ ಆರೋಪಿ. ಮಹದೇವಪುರ ಠಾಣಾ ವ್ಯಾಪ್ತಿಯ ಅಬ್ಬಯ್ಯ ಲೇಔಟ್​ನಲ್ಲಿ ಕೈಚಳಕ ತೋರಿಸಿದ್ದ ಆರೋಪಿ, ಮನೆಯ ಬಾಗಿಲಿನ ಲಾಕ್ ಮುರಿದು ಚಿನ್ನಾಭರಣ ದೋಚಿದ್ದನು. ಈ ಹಿಂದೆ ಸಹಚರನ ಜೊತೆ ಸೇರಿ ಬಸ್​ನಲ್ಲಿ ಚಿನ್ನದ ಸರ ಎಗರಿಸಿದ್ದನು. ಸದ್ಯ ಈತನ ಬಂಧನದಿಂದ ಎರಡು ಪ್ರಕರಣಗಳು ಬೆಳಕಿಗೆ ಬಂದಿದ್ದು, ಎಂಟು ಲಕ್ಷ ಮೌಲ್ಯದ 164 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:51 pm, Sun, 2 October 22

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು