AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime: ಹೀಗೊಬ್ಬ ಕಮರ್ಷಿಯಲ್ ಕಳ್ಳ; ಜೈಲಿಗೆ ಹೋಗಿ ಬಂದರೂ ಬುದ್ಧಿ ಕಲಿಯದ ಆರೋಪಿ

Bangalore: ಜೈಲಿಗೆ ಹೋಗಿ ಬಂದರೂ ಬುದ್ಧಿ ಕಲಿಯದ ಆರೋಪಿಯೊಬ್ಬ ಕಮರ್ಷಿಯಲ್ ಕಾಂಪ್ಲೆಕ್ಸ್​ಗಳಿಗೆ ನುಗ್ಗಿ ತನ್ನ ಕೈಚಳಕವನ್ನು ತೋರಿಸಿ ಇದೀಗ ಮತ್ತೆ ಪೊಲೀಸರ ಅತಿಥಿಯಾಗಿದ್ದಾನೆ.

Crime: ಹೀಗೊಬ್ಬ ಕಮರ್ಷಿಯಲ್ ಕಳ್ಳ; ಜೈಲಿಗೆ ಹೋಗಿ ಬಂದರೂ ಬುದ್ಧಿ ಕಲಿಯದ ಆರೋಪಿ
ಮನೆಗಳ್ಳತನ ಮಾಡುತ್ತಿದ್ದ ಆರೋಪಿ ಚೇತನ್ ಮತ್ತು ಕಮರ್ಷಿಯಲ್ ಕಳ್ಳ ಗೊಲ್ಲರಂಗಪ್ಪ
TV9 Web
| Updated By: Rakesh Nayak Manchi|

Updated on:Oct 02, 2022 | 1:53 PM

Share

ಬೆಂಗಳೂರು: ಜೈಲಿಗೆ ಹೋಗಿ ಬಂದರೂ ಬುದ್ಧಿ ಕಲಿಯದ ಆರೋಪಿಯೊಬ್ಬ ಕಳ್ಳತನದ ಚಾಳಿ ಬಿಡದೆ ಅದರಲ್ಲಿ ತೊಡಗಿಕೊಂಡು ಇದೀಗ ಮತ್ತೆ ಪೊಲೀಸರ ಅತಿಥಿಯಾಗಿದ್ದಾನೆ. ಗೊಲ್ಲರಂಗಪ್ಪ (40) ಎಂಬ ಆರೋಪಿ ಈ ಮೊದಲು ಶ್ರೀಗಂಧದ ಮರಗಳನ್ನು ಕಳ್ಳತನ ಮಾಡಿ ಮರಾಟದಲ್ಲಿ ತೊಡಗಿದ್ದನು. ಅದರಂತೆ 5 ವರ್ಷ ಸಜೆ ಅನುಭವಿಸಿದ್ದ ಈತ ಜೈಲಿನಿಂದ ಬಿಡುಗಡೆಯಾದ ನಂತರ ಬೇರೊಂದು ರೂಪದಲ್ಲಿ ಕಳ್ಳತನಕ್ಕೆ ಮುಂದಾಗಿದ್ದಾನೆ. ಶ್ರೀಗಂಧದ ಮರಗಳ ಕಳ್ಳತನ ಬಿಟ್ಟು ಕಮರ್ಷಿಯಲ್ ಕಾಂಪ್ಲೆಕ್ಸ್​ಗಳಿಗೆ ನುಗ್ಗಿ ತನ್ನ ಕೈಚಳಕವನ್ನು ತೋರಿಸಲು ಪ್ರಾರಂಭಿಸಿದನು. ಹೀಗೆ ಅನೇಕ ಪ್ರಕರಣಗಳಲ್ಲಿ ತೊಡಗಿದ್ದ ಗೊಲ್ಲರಂಗಪ್ಪನನ್ನು ಇದೀಗ ಸದಾಶಿವನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಈತನ ಬಂಧನದಿಂದ 8 ಪ್ರಕರಣಗಳು ಬೆಳಕಿಗೆ ಬಂದಿದ್ದು, ಆರೋಪಿಯ ಬಳಿಯಿಂದ 10 ಸಾವಿರ ರೂಪಾಯಿ ವಶಕ್ಕೆ ಪಡೆದಿದ್ದಾರೆ.

ಹುಕ್ಕಾ ಬಾರ್​​ ಮೇಲೆ ಸಿಸಿಬಿ ಪೊಲೀಸರ ದಾಳಿ

ಇಂದಿರಾನಗರ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ನಡೆಸುತ್ತಿದ್ದ ಹುಕ್ಕಾ ಬಾರ್​​ ಮೇಲೆ ಸಿಸಿಬಿ ಪೊಲೀಸರ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅದರಂತೆ ಹುಕ್ಕಾ ಬಾರ್ ಮಾಲೀಕ‌, ಮ್ಯಾನೇಜರ್ ಹಾಗೂ ಕ್ಯಾಶಿಯರ್ ವಿರುದ್ಧ ಪ್ರಕರಣವನ್ನು ದಾಖಲಿಸಿದ ಸಿಸಿಬಿ ಪೊಲೀಸರು, ಸುಮಾರು 70 ಸಾವಿರ ಮೌಲ್ಯದ ಹುಕ್ಕಾ ತಯಾರಿಸುವ ಪರಿಕರಗಳು, ಹುಕ್ಕಾ ಫ್ಲೇವರ್​​ಗಳು ಸೇರಿದಂತೆ ಎರಡೂವರೆ ಸಾವಿರ ನಗದು ಜಪ್ತಿ ಮಾಡಿದ್ದಾರೆ. ಇಂದಿರಾನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೊಬೈಲ್ ಕಳವು ಮಾಡಿ ಮಾರಾಟ

ಮೊಬೈಲ್ ಫೋನ್‌ಗಳನ್ನ ಕಳವು ಮಾಡಿದ ನಂತರ ಅದನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ  ಪ್ರಕರಣ ನಗರದಲ್ಲಿ ಬೆಳಕಿಗೆ ಬಂದಿದ್ದು, ಶೇಷಾದ್ರಿಪುರಂ ಠಾಣಾ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ರಹೀಂ ಪಾಶಾ (29) ಬಂಧಿತ ಆರೋಪಿಯಾಗಿದ್ದಾನೆ. ಸ್ಲಂ ಬೋರ್ಡ್ ಬಳಿ ಅನುಮಾಸ್ಪದವಾಗಿ ಮೊಬೈಲ್ ಮಾರಾಟದಲ್ಲಿ ತೊಡಗಿದ್ದ ರಹೀಂನನ್ನು ತಡೆದ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದಾಗ ಕಳ್ಳತನ ಬಗ್ಗೆ ತಿಳಿದುಬಂದಿದೆ. ಹೀಗಾಗಿ ರಹೀಂನನ್ನು ವಶಕ್ಕೆ ಪಡೆದ ಪೊಲೀಸರು, ಬಂಧಿತನಿಂದ 40 ಸಾವಿರ ಮೌಲ್ಯದ 8 ಮೊಬೈಲ್ ಫೋನ್‌ಗಳು ವಶಕ್ಕೆ ಪಡೆದಿದ್ದಾರೆ.

ಕನ್ನ ಕಳವು ಆರೋಪಿಯ ಬಂಧನ

ಹಾಡುಹಗಲೇ ಮನೆಗಳ್ಳತನ ಮಾಡಿ ಪರಾರಿಯಾಗಿದ್ದ ಆಸಾಮಿಯನ್ನು ಮಹದೇವಪುರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿದ ಬಂಧಿಸಿದ್ದಾರೆ. ಚೇತನ್ ಕುಮಾರ್(23) ಬಂಧಿತ ಆರೋಪಿ. ಮಹದೇವಪುರ ಠಾಣಾ ವ್ಯಾಪ್ತಿಯ ಅಬ್ಬಯ್ಯ ಲೇಔಟ್​ನಲ್ಲಿ ಕೈಚಳಕ ತೋರಿಸಿದ್ದ ಆರೋಪಿ, ಮನೆಯ ಬಾಗಿಲಿನ ಲಾಕ್ ಮುರಿದು ಚಿನ್ನಾಭರಣ ದೋಚಿದ್ದನು. ಈ ಹಿಂದೆ ಸಹಚರನ ಜೊತೆ ಸೇರಿ ಬಸ್​ನಲ್ಲಿ ಚಿನ್ನದ ಸರ ಎಗರಿಸಿದ್ದನು. ಸದ್ಯ ಈತನ ಬಂಧನದಿಂದ ಎರಡು ಪ್ರಕರಣಗಳು ಬೆಳಕಿಗೆ ಬಂದಿದ್ದು, ಎಂಟು ಲಕ್ಷ ಮೌಲ್ಯದ 164 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:51 pm, Sun, 2 October 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!