AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Online cheating: ಒಟಿಪಿ ಪಡೆದು ಬ್ಯಾಂಕ್ ಖಾತೆಗಳಿಂದ ಹಣ ಎಗರಿಸುತ್ತಿದ್ದ ಖತರ್ನಾಕ್​ ಆಸಾಮಿಗಳು ಅರೆಸ್ಟ್

ಶಿವಪ್ರಸಾದ್ ಮತ್ತು ಪಂಕಜ್ ಚೌಧರಿ ಆರೋಪಿಗಳಿಬ್ಬರೂ ಡೆಬಿಟ್ ಕಾರ್ಡ್ ನಂಬರ್, ಸಿವಿವಿ, ಎಕ್ಸ್ಪೈರಿ ಡೇಟ್ ಮತ್ತು ಓಟಿಪಿ ಪಡೆದು ಜನರ ಅಕೌಂಟ್ ಗಳಿಂದ ಹಣ ಎಗರಿಸುತ್ತಿದ್ದರು. ವಂಚನೆ ಮಾಡಿ ಪಡೆಯುತ್ತಿದ್ದ ಹಣವನ್ನ ನಕಲಿ ಖಾತೆಗೆ ಹಾಕಿಕೊಳ್ಳುತ್ತಿದ್ದರು ಆರೋಪಿಗಳು. ಬಂಧಿತ ಆರೋಪಿಗಳಿಂದ 22 ಸಾವಿರ ನಗದು ಮತ್ತು 9 ಮೊಬೈಲ್ ಗಳನ್ನು ವಶಕ್ಕೆ ಪಡೆಯಲಾಗಿದೆ.

Online cheating: ಒಟಿಪಿ ಪಡೆದು ಬ್ಯಾಂಕ್ ಖಾತೆಗಳಿಂದ ಹಣ ಎಗರಿಸುತ್ತಿದ್ದ ಖತರ್ನಾಕ್​ ಆಸಾಮಿಗಳು ಅರೆಸ್ಟ್
ಆರೋಪಿಗಳಾದ ಪಂಕಜ್ ಚೌಧರಿ ಮತ್ತು ಶಿವಪ್ರಸಾದ್ ಅರೆಸ್ಟ್
TV9 Web
| Edited By: |

Updated on: Feb 26, 2022 | 11:33 AM

Share

ಬೆಂಗಳೂರು: ಒಟಿಪಿ ಪಡೆದು ಬ್ಯಾಂಕ್ ಖಾತೆಗಳಿಂದ ಹಣ ಎಗರಿಸುತ್ತಿದ್ದ ಶಿವಪ್ರಸಾದ್ ಮತ್ತು ಪಂಕಜ್ ಚೌಧರಿ ಎಂಬಿಬ್ಬರು ಖತರ್ನಾಕ್​ ಆಸಾಮಿಗಳನ್ನು ಬೆಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಿಬಿಎಂಪಿ ವಾರ್ಡ್ ಕಚೇರಿಯಿಂದ ಕರೆ ಮಾಡುತ್ತಿರುವುದಾಗಿ ನಂಬಿಸಿ ವಂಚಿಸುತ್ತಿದ್ದ ಆರೋಪಿಗಳಿಬ್ಬರನ್ನೂ ಈಶಾನ್ಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.

ಶಿವಪ್ರಸಾದ್ ಮತ್ತು ಪಂಕಜ್ ಚೌಧರಿ ಆರೋಪಿಗಳಿಬ್ಬರೂ ಡೆಬಿಟ್ ಕಾರ್ಡ್ ನಂಬರ್, ಸಿವಿವಿ, ಎಕ್ಸ್ಪೈರಿ ಡೇಟ್ ಮತ್ತು ಓಟಿಪಿ ಪಡೆದು ಜನರ ಅಕೌಂಟ್ ಗಳಿಂದ ಹಣ ಎಗರಿಸುತ್ತಿದ್ದರು. ವಂಚನೆ ಮಾಡಿ ಪಡೆಯುತ್ತಿದ್ದ ಹಣವನ್ನ ನಕಲಿ ಖಾತೆಗೆ ಹಾಕಿಕೊಳ್ಳುತ್ತಿದ್ದರು ಆರೋಪಿಗಳು. ಜೊತೆಗೆ ಅನ್ಲೈನ್ ಮೂಲಕ ಮೊಬೈಲ್ ಖರೀದಿಸಿ ಓಎಲ್ ಎಕ್ಸ್ ನಲ್ಲಿ ಮಾರಾಟ ಮಾಡುತ್ತಿದ್ದರು. ಕೃತ್ಯಕ್ಕೆ ನಕಲಿ ಸಿಮ್ ಕಾರ್ಡ್ ಗಳನ್ನ ಬಳಕೆ ಮಾಡುತ್ತಿದ್ದರು. ಬಂಧಿತ ಆರೋಪಿಗಳಿಂದ 22 ಸಾವಿರ ನಗದು ಮತ್ತು 9 ಮೊಬೈಲ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ಡೆಬಿಟ್ ಕಾರ್ಡ್ ನಂಬರ್, ಸಿವಿವಿ, ಎಕ್ಸ್ಪೈರಿ ಡೇಟ್ ಮತ್ತು ಓಟಿಪಿ ಪಡೆದು ವಂಚನೆ ಎಸಗುತ್ತಿದ್ದರು. ಬಂಧಿತ ಆರೋಪಿಗಳ ವಿರುದ್ಧ ವಿವಿಧ ಠಾಣೆಯಲ್ಲಿ ದಾಖಲಾಗಿದ್ದ ಒಟ್ಟು 8 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಈಶಾನ್ಯ ವಿಭಾಗದ ಸಿಇಎನ್ ಠಾಣೆಯ 3 ಪ್ರಕರಣ, ಕೇಂದ್ರ ವಿಭಾಗದ 1 ಪ್ರಕರಣ, ಪಶ್ಚಿಮ ವಿಭಾಗದ 1 ಪ್ರಕರಣ, ದಕ್ಷಿಣ ವಿಭಾಗದ 1 ಪ್ರಕರಣ, ಮತ್ತು ರಾಯಚೂರು ಸಿಇಎನ್ ಠಾಣೆಯ 2 ಪ್ರಕರಣಗಳು ಪತ್ತೆಯಾಗಿವೆ. ಈಶಾನ್ಯ ವಿಭಾಗದ ಸಿಇಎನ್ ಪೊಲೀಸರು ಅವರಿಬ್ಬರನ್ನೂ ಬಂಧಿಸಿ, ಮತ್ತಷ್ಟು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಬೆಂಗಳೂರು ಪೊಲೀಸರು ಪ್ರಾಣದ ಹಂಗು ಬಿಟ್ಟು ಬದುಕಿಸಿದ್ದ ಹಳೆ ಕಳ್ಳ ಮತ್ತೆ ಕಳ್ಳತನಕ್ಕೆ ಇಳಿದ, ಆಮೇಲೆ ಏನಾಯ್ತು? ಬೆಂಗಳೂರು: ರಾಜಧಾನಿ ಬೆಂಗಳೂರು ಪೊಲೀಸರು ತಮ್ಮ ಪ್ರಾಣದ ಹಂಗು ಬಿಟ್ಟು ಆರೋಪಿಯೊಬ್ಬನನ್ನು ಬದುಕಿಸಿದ್ದರು. ಆದರೆ ಅವನು ಮತ್ತೆ ಕಳ್ಳತನಕ್ಕೆ ಇಳಿದಿದ್ದಾನೆ. ಜೈಲು ಸೇರಿ ಬಿಡುಗಡೆಯಾದ ಬಳಿಕ ತನ್ನ ಕುಕೃತ್ಯಗಳನ್ನು ಬಿಡದ ಕಳ್ಳ ಮಾರಾಕಾಸ್ತ್ರ ತೋರಿಸಿ ವಸೂಲಿಗೆ ಯತ್ನಿಸಿದ್ದ. ಅವನಿಗೆ ಮತ್ತೊಬ್ಬ ಸಾಥ್​ ನೀಡಿದ್ದ. ಇದೀಗ ಇಬ್ಬರೂ ಆರೋಪಿಗಳನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ.

ಫೆಬ್ರವರಿ 20ರಂದು ಲಾಂಗ್ ಬೀಸಿ ಅಂಗಡಿಗಳಲ್ಲಿ ಸುಲಿಗೆಗೆ ಯತ್ನಿಸಿದ್ದ ಹಳೆ ಕಳ್ಳ ಮಜರ್ ಮತ್ತು ಸೈಯದ್ ಮಾಜ್​ನನ್ನು ಕೆ.ಜೆ. ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ದರೋಡೆಗೆ ಯತ್ನಿಸಿದ್ದ ವೈರಲ್ ವಿಡಿಯೋವನ್ನು ಆಧರಿಸಿ ಹಿರಿಯ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದರು. ತನಿಖೆ ವೇಳೆ ಮಜರ್​ ಬಳಿ 25 ಗ್ರಾಂ ಎಂಡಿಎಂಎ ಡ್ರಗ್ಸ್​ ಪತ್ತೆಯಾಗಿದೆ.

ಹಳೆ ಕಳ್ಳ ಮಜರ್ ಮತ್ತು ಸೈಯದ್ ಮಾಜ್ ಜೋಡಿ ದೊಡ್ಡ ತಲವಾರ್ ಹಿಡಿದು ಅಂಗಡಿಯಲ್ಲಿ ಹಣ ವಸೂಲಿಗೆ ಇಳಿದಿದ್ದರು. ಆರೋಪಿ ಮಜರ್ ಅಂಗಡಿಯೊಂದರಲ್ಲಿ ಲಾಂಗ್ ಬೀಸಿದ್ದ. ಕೆ ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಫೆಬ್ರವರಿ 20 ರಂದು ಘಟನೆ ನಡೆದಿತ್ತು. ಆರೋಪಿ ವಸೂಲಿಗೆ ಯತ್ನಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ವಸೂಲಿ ಯತ್ನದ ವಿಡಿಯೋವನ್ನ ಟ್ವಿಟರ್ ನಲ್ಲಿ ಷೇರ್ ಮಾಡಿ ಪೊಲೀಸರಿಗೆ ಟ್ಯಾಗ್ ಸಹ ಮಾಡಲಾಗಿತ್ತು. ಕೂಡಲೇ ಆರೋಪಿಗಳ ಪತ್ತೆ ಹಚ್ಚುವಂತೆ ಹಿರಿಯ ಅಧಿಕಾರಿಗಳು ಪೊಲೀಸರಿಗೆ ಸೂಚಿಸಿದ್ದರು.

ಕೇಸ್ ದಾಖಲಿಸಿಕೊಂಡು, ಕಾರ್ಚಾಚರಣೆ ನಡೆಸಿದ ಪೊಲೀಸರು ಇಬ್ಬರೂ ಆರೋಪಿಗಳನ್ನ ಬಂಧಿಸಿದ್ದಾರೆ. ತನಿಖೆ ವೇಳೆ ಆರೋಪಿಗಳ ಮೇಲೆ ಎರಡು ಸುಲಿಗೆ ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ. ತನಿಖೆಯ ವೇಳೆ ಆರೋಪಿ ಮಜರ್ ಬಳಿ 25 ಗ್ರಾಂ ಎಂಡಿಎಂಎ ಮಾದಕವಸ್ತು ಡ್ರಗ್ಸ್ ಸಹ ಪತ್ತೆಯಾಗಿದೆ. ಕೆ ಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ವರ್ಷ ಏನಾಗಿತ್ತು ಅಂದರೆ… ಸರಗಳ್ಳತನ ಕೇಸ್ ನಲ್ಲಿ ಮಜರ್ ಕಳೆದ ವರ್ಷ ಸಿಕ್ಕಿಬಿದಿದ್ದ. ತಮಿಳುನಾಡಿನಲ್ಲಿ ಎಸ್ಕೇಪ್ ಆಗಲು ಹೋಗಿ ಮಜರ್ ಬಾವಿಗೆ ಬಿದಿದ್ದ. ಆ ವೇಳೆ ಪೇದೆಯೋರ್ವರು ಬಾವಿಗೆ ಹಾರಿ ಕಳ್ಳ ಮಜರ್ ನನ್ನು ರಕ್ಷಣೆ ಮಾಡಿದ್ದರು. ಯಲಹಂಕ ಪೇದೆ ತಮ್ಮ ಪ್ರಾಣದ ಹಂಗು ತೊರೆದು ಮಜರ್ ನನ್ನು ಬದುಕಿಸಿ ಕರೆತಂದಿದ್ದರು. ಬಳಿಕ ಸರಗಳ್ಳತನ ಕೇಸ್ ನಲ್ಲಿ ಜೈಲುವಾಸ ಅನುಭವಿಸಿ ಇತ್ತೀಚೆಗೆ ರಿಲೀಸ್ ಆಗಿದ್ದ ಮಜರ್.

ಬಿಡುಗಡೆ ಬಳಿಕ ತಲ್ವಾರ್ ಹಿಡಿದು ಸುಲಿಗೆ ಯತ್ನಕ್ಕೆ ಇಳಿದಿದ್ದ. ಅಂಗಡಿಯೊಂದರಲ್ಲಿ ತಲ್ವಾರ್ ತೋರಿಸಿದ ದೃಶ್ಯ ವೈರಲ್ ಆಗಿತ್ತು. ವೈರಲ್ ಆದ ವಿಡಿಯೋ ಆಧರಿಸಿ ತನಿಖೆ ವೇಳೆ ಹಳೆ ಕಳ್ಳ ಮಜರ್ ಸಿಕ್ಕಿಬಿದ್ದ!

ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು