AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆವೈಸಿ ಅಪ್ಡೇಟ್ ಹೆಸರಿನಲ್ಲಿ ಬರುವ ಲಿಂಕ್ ತೆರೆಯುವ ಮುನ್ನ ಎಚ್ಚರ… ಬೆಂಗಳೂರಿನಲ್ಲಿ ಒಂದೇ ದಿನ ಹತ್ತಾರು ಖಾತೆಗಳಿಗೆ ಕನ್ನ

ಕ್ರೆಡಿಟ್ ಕಾರ್ಡ್ ರಿವಾರ್ಡ್ ಪಾಯಿಂಟ್, ಕೆವೈಸಿ ಅಪ್ಡೇಟ್ ಹೆಸರಿನಲ್ಲಿ ನಕಲಿ ಲಿಂಕ್ ಕಳುಹಿಸಿ ಒಂದೇ ದಿನ ಹತ್ತಾರು ಖಾತೆಗಳಿಗೆ ಕನ್ನ ಹಾಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕೆವೈಸಿ ಅಪ್ಡೇಟ್ ಹೆಸರಿನಲ್ಲಿ ಬರುವ ಲಿಂಕ್ ತೆರೆಯುವ ಮುನ್ನ ಎಚ್ಚರ... ಬೆಂಗಳೂರಿನಲ್ಲಿ ಒಂದೇ ದಿನ ಹತ್ತಾರು ಖಾತೆಗಳಿಗೆ ಕನ್ನ
ಕೆವೈಸಿ ಅಪ್ಡೇಟ್ ಹೆಸರಿನಲ್ಲಿ ಫ್ರಾಡ್ ಲಿಂಕ್ ಮೆಸೆಜ್; ಬೆಂಗಳೂರಿನಲ್ಲಿ ಒಂದೇ ದಿನ ಹತ್ತಾರು ಖಾತೆಗಳಿಗೆ ಕನ್ನ Image Credit source: IANS
TV9 Web
| Updated By: Rakesh Nayak Manchi

Updated on:Dec 02, 2022 | 9:54 AM

Share

ಬೆಂಗಳೂರು: ಮೆಸೆಜ್ ಮೂಲಕ ಕ್ರೆಡಿಟ್ ಕಾರ್ಡ್ (Credit Card) ರಿವಾರ್ಡ್ ಪಾಯಿಂಟ್, ಕೆವೈಸಿ ಅಪ್ಡೇಟ್ (KYC Update) ಹೆಸರಿನಲ್ಲಿ ನಕಲಿ ಲಿಂಕ್ ಕಳುಹಿಸಿ ಒಂದೇ ದಿನ ಹತ್ತಾರು ಖಾತೆಗಳಿಗೆ ಕನ್ನ ಹಾಕಿದ ಘಟನೆಗಳು ನಗರದಲ್ಲಿ ಹೆಚ್ಚುತ್ತಿವೆ. ಸೈಬರ್ ವಂಚನೆ ಅಪರಾಧ ಸಂಬಂಧ ನಗರದ ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆ (CEN Police Station)ಯಲ್ಲಿ ಸಾಲು ಸಾಲು ದೂರುಗಳು ದಾಖಲಾಗುತ್ತಿವೆ. ನವೆಂಬರ್ 30ರಂದು ಹತ್ತಾರು ಜನರಿಗೆ ಇದೇ ರೀತಿ ನಕಲಿ ಲಿಂಕ್ (Fake Link) ಕಳಿಸಿ ವಂಚನೆ ಎಸಗಲಾಗಿದ್ದು, ಲಿಂಕ್ ಓಪನ್ ಮಾಡಿದ 70 ವರ್ಷದ ನಿವೃತ್ತ ಇಂಜಿನಿಯರ್ ಖಾತೆಯಲ್ಲಿದ್ದ ಒಂದೂವರೆ ಲಕ್ಷಕ್ಕೂ ಅಧಿಕ ಹಣ ವಂಚಕರ ಖಾತೆಗೆ ಸೇರಿದೆ. ಇದೇ ದಿನ ಪ್ರೀತಿ ಶೆಟ್ಟಿ ಎಂಬಾಕೆಯ ಖಾತೆಯಲ್ಲಿದ್ದ ಸಾವಿರಾರು ರೂಪಾಯಿ ನೋಯ್ಡಾ ಮೂಲದ ಪೇಟಿಎಂ ಖಾತೆಗೆ ವರ್ಗಾವಣೆಯಾಗಿದೆ.

ಇದನ್ನೂ ಓದಿ: Illicit Relationship ಬೇರೊಬ್ಬನ ಜೊತೆ ಪತ್ನಿ ಅನೈತಿಕ ಸಂಬಂಧ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇಬ್ಬರನ್ನೂ ಕೊಚ್ಚಿ ಕೊಂದ ಪತಿ

ನವೆಂಬರ್ 30ರಂದು ವಂಚಕರ ಜಾಲ ನಗರದ ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವೃತ್ತ ಇಂಜಿನಿಯರ್ ಒಬ್ಬರಿಗೆ ಕ್ರೆಡಿಟ್ ಕಾರ್ಡ್ ರಿವಾರ್ಡ್ ಪಾಯಿಂಟ್, ಕೆವೈಸಿ ಅಪ್ಡೇಟ್ ಹೆಸರಿನಲ್ಲಿ ಲಿಂಕ್ ಕಳುಹಿಸಿದೆ. ಈ ಲಿಂಕ್ ಅನ್ನು ನಿವೃತ್ತ ಇಂಜಿನಿಯರ್ ತೆರೆದ ಕೂಡಲೇ ಅವರ ಖಾತೆಯಲ್ಲಿದ್ದ 1.93 ಲಕ್ಷ ರೂಪಾಯಿ ವಂಚಕರ ಪಾಲಾಗಿದೆ.

ಇದನ್ನೂ ಓದಿ: ಜಪಾನಿನ ಸಗಾವಾ ನೆದರ್ಲ್ಯಾಂಡ್ಸ್ ಯುವತಿಯನ್ನು ಪ್ಯಾರಿಸ್​ನಲ್ಲಿ ಕೊಂದು ತಿಂದರೂ ಶಿಕ್ಷೆಯಾಗಲಿಲ್ಲ, ಸ್ವದೇಶಕ್ಕೆ ವಾಪಸ್ಸಾಗಿ ಸೆಲಿಬ್ರಿಟಿಯಾದ!

ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರೀತಿ ಶೆಟ್ಟಿ ಎಂಬಾಕೆಗೆ ಇದೇ ರೀತಿ ಮೆಸೆಜ್ ಕಳುಹಿಸಲಾಗಿದೆ. ವಂಚನೆಯ ಬಗ್ಗೆ ಮಾಹಿತಿ ಇಲ್ಲದ ಈಕೆ ಲಿಂಕ್ ತೆರೆದಿದ್ದಾಳೆ. ಈ ಕೂಡಲೇ ಪ್ರೀತಿಯ ಬ್ಯಾಂಕ್ ಖಾತೆಯಲ್ಲಿದ್ದ 8 ಸಾವಿರ ರೂಪಾಯಿ ಡೆಬಿಟ್ ಆಗಿದೆ. ನೋಯ್ಡಾ ಮೂಲದ ಪೇಟಿಎಂ ಖಾತೆಗೆ ಈ ಹಣ ವರ್ಗಾವಣೆಯಾಗಿರುವುದು ತಿಳಿದುಬಂದಿದೆ. ಸದ್ಯ ವಂಚನೆ ಪ್ರಕರಣ ಸಂಬಂಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:54 am, Fri, 2 December 22

Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?