AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆವೈಸಿ ಅಪ್ಡೇಟ್ ಹೆಸರಿನಲ್ಲಿ ಬರುವ ಲಿಂಕ್ ತೆರೆಯುವ ಮುನ್ನ ಎಚ್ಚರ… ಬೆಂಗಳೂರಿನಲ್ಲಿ ಒಂದೇ ದಿನ ಹತ್ತಾರು ಖಾತೆಗಳಿಗೆ ಕನ್ನ

ಕ್ರೆಡಿಟ್ ಕಾರ್ಡ್ ರಿವಾರ್ಡ್ ಪಾಯಿಂಟ್, ಕೆವೈಸಿ ಅಪ್ಡೇಟ್ ಹೆಸರಿನಲ್ಲಿ ನಕಲಿ ಲಿಂಕ್ ಕಳುಹಿಸಿ ಒಂದೇ ದಿನ ಹತ್ತಾರು ಖಾತೆಗಳಿಗೆ ಕನ್ನ ಹಾಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕೆವೈಸಿ ಅಪ್ಡೇಟ್ ಹೆಸರಿನಲ್ಲಿ ಬರುವ ಲಿಂಕ್ ತೆರೆಯುವ ಮುನ್ನ ಎಚ್ಚರ... ಬೆಂಗಳೂರಿನಲ್ಲಿ ಒಂದೇ ದಿನ ಹತ್ತಾರು ಖಾತೆಗಳಿಗೆ ಕನ್ನ
ಕೆವೈಸಿ ಅಪ್ಡೇಟ್ ಹೆಸರಿನಲ್ಲಿ ಫ್ರಾಡ್ ಲಿಂಕ್ ಮೆಸೆಜ್; ಬೆಂಗಳೂರಿನಲ್ಲಿ ಒಂದೇ ದಿನ ಹತ್ತಾರು ಖಾತೆಗಳಿಗೆ ಕನ್ನ Image Credit source: IANS
TV9 Web
| Edited By: Rakesh Nayak Manchi|

Updated on:Dec 02, 2022 | 9:54 AM

Share

ಬೆಂಗಳೂರು: ಮೆಸೆಜ್ ಮೂಲಕ ಕ್ರೆಡಿಟ್ ಕಾರ್ಡ್ (Credit Card) ರಿವಾರ್ಡ್ ಪಾಯಿಂಟ್, ಕೆವೈಸಿ ಅಪ್ಡೇಟ್ (KYC Update) ಹೆಸರಿನಲ್ಲಿ ನಕಲಿ ಲಿಂಕ್ ಕಳುಹಿಸಿ ಒಂದೇ ದಿನ ಹತ್ತಾರು ಖಾತೆಗಳಿಗೆ ಕನ್ನ ಹಾಕಿದ ಘಟನೆಗಳು ನಗರದಲ್ಲಿ ಹೆಚ್ಚುತ್ತಿವೆ. ಸೈಬರ್ ವಂಚನೆ ಅಪರಾಧ ಸಂಬಂಧ ನಗರದ ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆ (CEN Police Station)ಯಲ್ಲಿ ಸಾಲು ಸಾಲು ದೂರುಗಳು ದಾಖಲಾಗುತ್ತಿವೆ. ನವೆಂಬರ್ 30ರಂದು ಹತ್ತಾರು ಜನರಿಗೆ ಇದೇ ರೀತಿ ನಕಲಿ ಲಿಂಕ್ (Fake Link) ಕಳಿಸಿ ವಂಚನೆ ಎಸಗಲಾಗಿದ್ದು, ಲಿಂಕ್ ಓಪನ್ ಮಾಡಿದ 70 ವರ್ಷದ ನಿವೃತ್ತ ಇಂಜಿನಿಯರ್ ಖಾತೆಯಲ್ಲಿದ್ದ ಒಂದೂವರೆ ಲಕ್ಷಕ್ಕೂ ಅಧಿಕ ಹಣ ವಂಚಕರ ಖಾತೆಗೆ ಸೇರಿದೆ. ಇದೇ ದಿನ ಪ್ರೀತಿ ಶೆಟ್ಟಿ ಎಂಬಾಕೆಯ ಖಾತೆಯಲ್ಲಿದ್ದ ಸಾವಿರಾರು ರೂಪಾಯಿ ನೋಯ್ಡಾ ಮೂಲದ ಪೇಟಿಎಂ ಖಾತೆಗೆ ವರ್ಗಾವಣೆಯಾಗಿದೆ.

ಇದನ್ನೂ ಓದಿ: Illicit Relationship ಬೇರೊಬ್ಬನ ಜೊತೆ ಪತ್ನಿ ಅನೈತಿಕ ಸಂಬಂಧ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇಬ್ಬರನ್ನೂ ಕೊಚ್ಚಿ ಕೊಂದ ಪತಿ

ನವೆಂಬರ್ 30ರಂದು ವಂಚಕರ ಜಾಲ ನಗರದ ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವೃತ್ತ ಇಂಜಿನಿಯರ್ ಒಬ್ಬರಿಗೆ ಕ್ರೆಡಿಟ್ ಕಾರ್ಡ್ ರಿವಾರ್ಡ್ ಪಾಯಿಂಟ್, ಕೆವೈಸಿ ಅಪ್ಡೇಟ್ ಹೆಸರಿನಲ್ಲಿ ಲಿಂಕ್ ಕಳುಹಿಸಿದೆ. ಈ ಲಿಂಕ್ ಅನ್ನು ನಿವೃತ್ತ ಇಂಜಿನಿಯರ್ ತೆರೆದ ಕೂಡಲೇ ಅವರ ಖಾತೆಯಲ್ಲಿದ್ದ 1.93 ಲಕ್ಷ ರೂಪಾಯಿ ವಂಚಕರ ಪಾಲಾಗಿದೆ.

ಇದನ್ನೂ ಓದಿ: ಜಪಾನಿನ ಸಗಾವಾ ನೆದರ್ಲ್ಯಾಂಡ್ಸ್ ಯುವತಿಯನ್ನು ಪ್ಯಾರಿಸ್​ನಲ್ಲಿ ಕೊಂದು ತಿಂದರೂ ಶಿಕ್ಷೆಯಾಗಲಿಲ್ಲ, ಸ್ವದೇಶಕ್ಕೆ ವಾಪಸ್ಸಾಗಿ ಸೆಲಿಬ್ರಿಟಿಯಾದ!

ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರೀತಿ ಶೆಟ್ಟಿ ಎಂಬಾಕೆಗೆ ಇದೇ ರೀತಿ ಮೆಸೆಜ್ ಕಳುಹಿಸಲಾಗಿದೆ. ವಂಚನೆಯ ಬಗ್ಗೆ ಮಾಹಿತಿ ಇಲ್ಲದ ಈಕೆ ಲಿಂಕ್ ತೆರೆದಿದ್ದಾಳೆ. ಈ ಕೂಡಲೇ ಪ್ರೀತಿಯ ಬ್ಯಾಂಕ್ ಖಾತೆಯಲ್ಲಿದ್ದ 8 ಸಾವಿರ ರೂಪಾಯಿ ಡೆಬಿಟ್ ಆಗಿದೆ. ನೋಯ್ಡಾ ಮೂಲದ ಪೇಟಿಎಂ ಖಾತೆಗೆ ಈ ಹಣ ವರ್ಗಾವಣೆಯಾಗಿರುವುದು ತಿಳಿದುಬಂದಿದೆ. ಸದ್ಯ ವಂಚನೆ ಪ್ರಕರಣ ಸಂಬಂಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:54 am, Fri, 2 December 22

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ