AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆವೈಸಿ ಅಪ್ಡೇಟ್ ಹೆಸರಿನಲ್ಲಿ ಬರುವ ಲಿಂಕ್ ತೆರೆಯುವ ಮುನ್ನ ಎಚ್ಚರ… ಬೆಂಗಳೂರಿನಲ್ಲಿ ಒಂದೇ ದಿನ ಹತ್ತಾರು ಖಾತೆಗಳಿಗೆ ಕನ್ನ

ಕ್ರೆಡಿಟ್ ಕಾರ್ಡ್ ರಿವಾರ್ಡ್ ಪಾಯಿಂಟ್, ಕೆವೈಸಿ ಅಪ್ಡೇಟ್ ಹೆಸರಿನಲ್ಲಿ ನಕಲಿ ಲಿಂಕ್ ಕಳುಹಿಸಿ ಒಂದೇ ದಿನ ಹತ್ತಾರು ಖಾತೆಗಳಿಗೆ ಕನ್ನ ಹಾಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕೆವೈಸಿ ಅಪ್ಡೇಟ್ ಹೆಸರಿನಲ್ಲಿ ಬರುವ ಲಿಂಕ್ ತೆರೆಯುವ ಮುನ್ನ ಎಚ್ಚರ... ಬೆಂಗಳೂರಿನಲ್ಲಿ ಒಂದೇ ದಿನ ಹತ್ತಾರು ಖಾತೆಗಳಿಗೆ ಕನ್ನ
ಕೆವೈಸಿ ಅಪ್ಡೇಟ್ ಹೆಸರಿನಲ್ಲಿ ಫ್ರಾಡ್ ಲಿಂಕ್ ಮೆಸೆಜ್; ಬೆಂಗಳೂರಿನಲ್ಲಿ ಒಂದೇ ದಿನ ಹತ್ತಾರು ಖಾತೆಗಳಿಗೆ ಕನ್ನ Image Credit source: IANS
TV9 Web
| Updated By: Rakesh Nayak Manchi|

Updated on:Dec 02, 2022 | 9:54 AM

Share

ಬೆಂಗಳೂರು: ಮೆಸೆಜ್ ಮೂಲಕ ಕ್ರೆಡಿಟ್ ಕಾರ್ಡ್ (Credit Card) ರಿವಾರ್ಡ್ ಪಾಯಿಂಟ್, ಕೆವೈಸಿ ಅಪ್ಡೇಟ್ (KYC Update) ಹೆಸರಿನಲ್ಲಿ ನಕಲಿ ಲಿಂಕ್ ಕಳುಹಿಸಿ ಒಂದೇ ದಿನ ಹತ್ತಾರು ಖಾತೆಗಳಿಗೆ ಕನ್ನ ಹಾಕಿದ ಘಟನೆಗಳು ನಗರದಲ್ಲಿ ಹೆಚ್ಚುತ್ತಿವೆ. ಸೈಬರ್ ವಂಚನೆ ಅಪರಾಧ ಸಂಬಂಧ ನಗರದ ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆ (CEN Police Station)ಯಲ್ಲಿ ಸಾಲು ಸಾಲು ದೂರುಗಳು ದಾಖಲಾಗುತ್ತಿವೆ. ನವೆಂಬರ್ 30ರಂದು ಹತ್ತಾರು ಜನರಿಗೆ ಇದೇ ರೀತಿ ನಕಲಿ ಲಿಂಕ್ (Fake Link) ಕಳಿಸಿ ವಂಚನೆ ಎಸಗಲಾಗಿದ್ದು, ಲಿಂಕ್ ಓಪನ್ ಮಾಡಿದ 70 ವರ್ಷದ ನಿವೃತ್ತ ಇಂಜಿನಿಯರ್ ಖಾತೆಯಲ್ಲಿದ್ದ ಒಂದೂವರೆ ಲಕ್ಷಕ್ಕೂ ಅಧಿಕ ಹಣ ವಂಚಕರ ಖಾತೆಗೆ ಸೇರಿದೆ. ಇದೇ ದಿನ ಪ್ರೀತಿ ಶೆಟ್ಟಿ ಎಂಬಾಕೆಯ ಖಾತೆಯಲ್ಲಿದ್ದ ಸಾವಿರಾರು ರೂಪಾಯಿ ನೋಯ್ಡಾ ಮೂಲದ ಪೇಟಿಎಂ ಖಾತೆಗೆ ವರ್ಗಾವಣೆಯಾಗಿದೆ.

ಇದನ್ನೂ ಓದಿ: Illicit Relationship ಬೇರೊಬ್ಬನ ಜೊತೆ ಪತ್ನಿ ಅನೈತಿಕ ಸಂಬಂಧ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇಬ್ಬರನ್ನೂ ಕೊಚ್ಚಿ ಕೊಂದ ಪತಿ

ನವೆಂಬರ್ 30ರಂದು ವಂಚಕರ ಜಾಲ ನಗರದ ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವೃತ್ತ ಇಂಜಿನಿಯರ್ ಒಬ್ಬರಿಗೆ ಕ್ರೆಡಿಟ್ ಕಾರ್ಡ್ ರಿವಾರ್ಡ್ ಪಾಯಿಂಟ್, ಕೆವೈಸಿ ಅಪ್ಡೇಟ್ ಹೆಸರಿನಲ್ಲಿ ಲಿಂಕ್ ಕಳುಹಿಸಿದೆ. ಈ ಲಿಂಕ್ ಅನ್ನು ನಿವೃತ್ತ ಇಂಜಿನಿಯರ್ ತೆರೆದ ಕೂಡಲೇ ಅವರ ಖಾತೆಯಲ್ಲಿದ್ದ 1.93 ಲಕ್ಷ ರೂಪಾಯಿ ವಂಚಕರ ಪಾಲಾಗಿದೆ.

ಇದನ್ನೂ ಓದಿ: ಜಪಾನಿನ ಸಗಾವಾ ನೆದರ್ಲ್ಯಾಂಡ್ಸ್ ಯುವತಿಯನ್ನು ಪ್ಯಾರಿಸ್​ನಲ್ಲಿ ಕೊಂದು ತಿಂದರೂ ಶಿಕ್ಷೆಯಾಗಲಿಲ್ಲ, ಸ್ವದೇಶಕ್ಕೆ ವಾಪಸ್ಸಾಗಿ ಸೆಲಿಬ್ರಿಟಿಯಾದ!

ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರೀತಿ ಶೆಟ್ಟಿ ಎಂಬಾಕೆಗೆ ಇದೇ ರೀತಿ ಮೆಸೆಜ್ ಕಳುಹಿಸಲಾಗಿದೆ. ವಂಚನೆಯ ಬಗ್ಗೆ ಮಾಹಿತಿ ಇಲ್ಲದ ಈಕೆ ಲಿಂಕ್ ತೆರೆದಿದ್ದಾಳೆ. ಈ ಕೂಡಲೇ ಪ್ರೀತಿಯ ಬ್ಯಾಂಕ್ ಖಾತೆಯಲ್ಲಿದ್ದ 8 ಸಾವಿರ ರೂಪಾಯಿ ಡೆಬಿಟ್ ಆಗಿದೆ. ನೋಯ್ಡಾ ಮೂಲದ ಪೇಟಿಎಂ ಖಾತೆಗೆ ಈ ಹಣ ವರ್ಗಾವಣೆಯಾಗಿರುವುದು ತಿಳಿದುಬಂದಿದೆ. ಸದ್ಯ ವಂಚನೆ ಪ್ರಕರಣ ಸಂಬಂಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:54 am, Fri, 2 December 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ