AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಜೋಡಿ ಕೊಲೆ; ಚಾಕುವಿನಿಂದ ಇರಿದು ಬರ್ಬರ ಹತ್ಯೆ

ವರ್ಷದಿಂದ ವರ್ಷಕ್ಕೆ ಸಿಲಿಕಾನ್​​ ಸಿಟಿ ಬೆಂಗಳೂರಿನಲ್ಲಿ ಕ್ರೈಂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಪೊಲೀಸರು ಕೂಡ ಇದನ್ನು ತಡೆಯಲು ಅನೇಕ ರೀತಿಯ ಕ್ರಮಗಳನ್ನು ಕೈಗೊಂಡಿದ್ದಾರೆ. ಆದರೂ ಇದಕ್ಕೆ ಬ್ರೇಕ್​ ಹಾಕಲಾಗುತ್ತಿಲ್ಲ. ಅದರಂತೆ ಇದೀಗ ಬೆಂಗಳೂರಿನ ಕುಂಬಾರಪೇಟೆಯಲ್ಲಿ ಇಬ್ಬರನ್ನು ಚಾಕುವಿನಿಂದ ಇರಿದು ಬರ್ಬರ ಹತ್ಯೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಜೋಡಿ ಕೊಲೆ; ಚಾಕುವಿನಿಂದ ಇರಿದು ಬರ್ಬರ ಹತ್ಯೆ
ಬೆಂಗಳೂರಿನ ಕುಂಬಾರಪೇಟೆಯಲ್ಲಿ ಚಾಕುವಿನಿಂದ ಇರಿದು ಇಬ್ಬರ ಬರ್ಬರ ಹತ್ಯೆ
ರಾಚಪ್ಪಾಜಿ ನಾಯ್ಕ್
| Edited By: ಕಿರಣ್ ಹನುಮಂತ್​ ಮಾದಾರ್|

Updated on:Feb 07, 2024 | 9:59 PM

Share

ಬೆಂಗಳೂರು, ಫೆ.07: ರಾಜ್ಯ ರಾಜಧಾನಿಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಪೊಲೀಸರು ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರು ಇದಕ್ಕೆ ಬ್ರೇಕ್​ ಹಾಕಲಾಗುತ್ತಿಲ್ಲ. ಇದೀಗ ಬೆಂಗಳೂರಿನ ಕುಂಬಾರಪೇಟೆಯ(Kumbarpet) ಹರಿ ಅಂಗಡಿ ಮಳಿಗೆಯಲ್ಲಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಇಬ್ಬರನ್ನು ಬರ್ಬರ ಹತ್ಯೆ ಮಾಡಿದ್ದಾರೆ. ಸುರೇಶ್, ಮಹೇಂದ್ರ ಮೃತ ರ್ದುದೈವಿಗಳು. ಆಸ್ತಿ ವಿಚಾರಕ್ಕೆ ಸಂಬಂಧಿಕರೇ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯಕ್ಕೆ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಕೇಂದ್ರ ವಿಭಾಗ ಡಿಸಿಪಿ ಹೇಳಿದ್ದಿಷ್ಟು

ಇನ್ನು ಈ ಕುರಿತು ಮಾತನಾಡಿದ ಕೇಂದ್ರ ವಿಭಾಗ ಡಿಸಿಪಿ ಶೇಖರ್ ‘ ಘಟನೆ ಕುರಿತು ಮಾಹಿತಿ ಬಂದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ್ದೀವಿ. ಮೃತ ಸುರೇಶ್ ಮತ್ತು ಮಹೇಂದ್ರ ಇಬ್ಬರು ಅಡುಗೆ ಉಪಕರಣಗಳನ್ನು ಮಾರಾಟ ಮಾಡುತ್ತಿದ್ದರು. . ಮೇಲ್ನೋಟಕ್ಕೆ ಆಸ್ತಿ ವಿಚಾರಕ್ಕೆ ನಡೆದ ಕೊಲೆ ಎನ್ನಲಾಗುತ್ತಿದೆ. ಈ ಕುರಿತು ತನಿಖೆ ನಡೆಸಿದ ಬಳಿಕ ಕೃತ್ಯಕ್ಕೆ ನಿಖರವಾದ ಕಾರಣ ತಿಳಿಸಲಾಗುವುದು ಎಂದರು. ಇನ್ನು ಈ ಕುರಿತು ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಹಳೆಯ ವೈಷಮ್ಯ, ನಡು ರಸ್ತೆಯಲ್ಲೇ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ, ಕಿಲೋಮೀಟರ್​ಗಟ್ಟಲೆ ದೇಹ ಎಳೆದೊಯ್ದ ಪಾಪಿಗಳು

ಆರೋಪಿ ಟಾರ್ಗೆಟ್ ಇದ್ದಿದ್ದವನೇ ಬೇರೆ, ಬಿಡಿಸಲು ಹೋದವನು ಆದ ಕೊಲೆ

ಇನ್ನು ಆರೋಪಿ ಟಾರ್ಗೆಟ್ ಇದ್ದಿದ್ದು ಮೃತ ಸುರೇಶ್ ಮಾತ್ರ. ಆದರೆ, ಬಿಡಿಸಲು ಹೋದ ಮಹೇಂದ್ರನನ್ನು ಕೂಡ ಕೊಲೆ ಮಾಡಿದ್ದಾನೆ. ಸುರೇಶ್ ಹಾಗೂ ಮಹೇಂದ್ರ ಇಬ್ಬರು ಸ್ನೇಹಿತರು, ಈ ಹಿನ್ನಲೆ ಸುರೇಶ್ ಭೇಟಿಗೆ ಮಹೇಂದ್ರ ಆಗಮಿಸಿದ್ದ. ಈ ವೇಳೆ ಸುರೇಶ್ ಮೇಲೆ ಇದ್ದಕ್ಕಿದ್ದಂತೆ ಅಟ್ಯಾಕ್ ಮಾಡಿದ ಹಂತಕ, ಬಿಡಿಸಲು ಹೋದ ಮಹೇಂದ್ರನ ಮೇಲೂ ಹಲ್ಲೆ ಮಾಡಿ ಇಬ್ಬರನ್ನು ಹತ್ಯೆಗೈದಿದ್ದಾನೆ. ಸುರೇಶ್ ಅಂಗಡಿ ಒಳಗೆ ಚೇರ್ ಮೇಲೆ ಶವವಾಗಿ ಬಿದ್ದಿದ್ದರೆ, ಇತ್ತ ಮಹೇಂದ್ರ ಅಂಗಡಿ ಹೊರಗೆ ನಿಲ್ಲಿಸಿದ್ದ ಗಾಡಿಯಲ್ಲಿ ಸಾವನ್ನಪ್ಪಿದ್ದಾನೆ.

ತಂದೆ ಬುದ್ಧಿವಾದ ಹೇಳಿದಕ್ಕೆ ಮನನೊಂದು ಮಗ ಆತ್ಮಹತ್ಯೆ

ಧಾರವಾಡ: ತಂದೆ ಓದಿನ ಕಡೆ ಗಮನ ಕೊಡು ಎಂದು ಬುದ್ಧಿವಾದ ಹೇಳಿದಕ್ಕೆ ಮನನೊಂದು ಫುಟ್ಬಾಲ್ ಆಟಗಾರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ನಗರದ ಕೆಲಗೇರಿ ಕೆರೆಯಲ್ಲಿ ನಡೆದಿದೆ. ಸಾದನಕೇರಿ ಬಡಾವಣೆ ನಿವಾಸಿ ಶರಣಪ್ಪ ಕೊಂಡಿಹಾಳ ಎಂಬುವರ ಪುತ್ರ ಮೃತ ಚೇತನ್(23)​​. ತಂದೆ ಬುದ್ದಿ ಹೇಳಿದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಚೇತನ್, ಇಂದು ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈ ಕುರಿತು ಧಾರವಾಡ ಉಪನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:45 pm, Wed, 7 February 24

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ