AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಜೋಡಿ ಕೊಲೆ; ಚಾಕುವಿನಿಂದ ಇರಿದು ಬರ್ಬರ ಹತ್ಯೆ

ವರ್ಷದಿಂದ ವರ್ಷಕ್ಕೆ ಸಿಲಿಕಾನ್​​ ಸಿಟಿ ಬೆಂಗಳೂರಿನಲ್ಲಿ ಕ್ರೈಂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಪೊಲೀಸರು ಕೂಡ ಇದನ್ನು ತಡೆಯಲು ಅನೇಕ ರೀತಿಯ ಕ್ರಮಗಳನ್ನು ಕೈಗೊಂಡಿದ್ದಾರೆ. ಆದರೂ ಇದಕ್ಕೆ ಬ್ರೇಕ್​ ಹಾಕಲಾಗುತ್ತಿಲ್ಲ. ಅದರಂತೆ ಇದೀಗ ಬೆಂಗಳೂರಿನ ಕುಂಬಾರಪೇಟೆಯಲ್ಲಿ ಇಬ್ಬರನ್ನು ಚಾಕುವಿನಿಂದ ಇರಿದು ಬರ್ಬರ ಹತ್ಯೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಜೋಡಿ ಕೊಲೆ; ಚಾಕುವಿನಿಂದ ಇರಿದು ಬರ್ಬರ ಹತ್ಯೆ
ಬೆಂಗಳೂರಿನ ಕುಂಬಾರಪೇಟೆಯಲ್ಲಿ ಚಾಕುವಿನಿಂದ ಇರಿದು ಇಬ್ಬರ ಬರ್ಬರ ಹತ್ಯೆ
ರಾಚಪ್ಪಾಜಿ ನಾಯ್ಕ್
| Edited By: |

Updated on:Feb 07, 2024 | 9:59 PM

Share

ಬೆಂಗಳೂರು, ಫೆ.07: ರಾಜ್ಯ ರಾಜಧಾನಿಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಪೊಲೀಸರು ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರು ಇದಕ್ಕೆ ಬ್ರೇಕ್​ ಹಾಕಲಾಗುತ್ತಿಲ್ಲ. ಇದೀಗ ಬೆಂಗಳೂರಿನ ಕುಂಬಾರಪೇಟೆಯ(Kumbarpet) ಹರಿ ಅಂಗಡಿ ಮಳಿಗೆಯಲ್ಲಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಇಬ್ಬರನ್ನು ಬರ್ಬರ ಹತ್ಯೆ ಮಾಡಿದ್ದಾರೆ. ಸುರೇಶ್, ಮಹೇಂದ್ರ ಮೃತ ರ್ದುದೈವಿಗಳು. ಆಸ್ತಿ ವಿಚಾರಕ್ಕೆ ಸಂಬಂಧಿಕರೇ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯಕ್ಕೆ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಕೇಂದ್ರ ವಿಭಾಗ ಡಿಸಿಪಿ ಹೇಳಿದ್ದಿಷ್ಟು

ಇನ್ನು ಈ ಕುರಿತು ಮಾತನಾಡಿದ ಕೇಂದ್ರ ವಿಭಾಗ ಡಿಸಿಪಿ ಶೇಖರ್ ‘ ಘಟನೆ ಕುರಿತು ಮಾಹಿತಿ ಬಂದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ್ದೀವಿ. ಮೃತ ಸುರೇಶ್ ಮತ್ತು ಮಹೇಂದ್ರ ಇಬ್ಬರು ಅಡುಗೆ ಉಪಕರಣಗಳನ್ನು ಮಾರಾಟ ಮಾಡುತ್ತಿದ್ದರು. . ಮೇಲ್ನೋಟಕ್ಕೆ ಆಸ್ತಿ ವಿಚಾರಕ್ಕೆ ನಡೆದ ಕೊಲೆ ಎನ್ನಲಾಗುತ್ತಿದೆ. ಈ ಕುರಿತು ತನಿಖೆ ನಡೆಸಿದ ಬಳಿಕ ಕೃತ್ಯಕ್ಕೆ ನಿಖರವಾದ ಕಾರಣ ತಿಳಿಸಲಾಗುವುದು ಎಂದರು. ಇನ್ನು ಈ ಕುರಿತು ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಹಳೆಯ ವೈಷಮ್ಯ, ನಡು ರಸ್ತೆಯಲ್ಲೇ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ, ಕಿಲೋಮೀಟರ್​ಗಟ್ಟಲೆ ದೇಹ ಎಳೆದೊಯ್ದ ಪಾಪಿಗಳು

ಆರೋಪಿ ಟಾರ್ಗೆಟ್ ಇದ್ದಿದ್ದವನೇ ಬೇರೆ, ಬಿಡಿಸಲು ಹೋದವನು ಆದ ಕೊಲೆ

ಇನ್ನು ಆರೋಪಿ ಟಾರ್ಗೆಟ್ ಇದ್ದಿದ್ದು ಮೃತ ಸುರೇಶ್ ಮಾತ್ರ. ಆದರೆ, ಬಿಡಿಸಲು ಹೋದ ಮಹೇಂದ್ರನನ್ನು ಕೂಡ ಕೊಲೆ ಮಾಡಿದ್ದಾನೆ. ಸುರೇಶ್ ಹಾಗೂ ಮಹೇಂದ್ರ ಇಬ್ಬರು ಸ್ನೇಹಿತರು, ಈ ಹಿನ್ನಲೆ ಸುರೇಶ್ ಭೇಟಿಗೆ ಮಹೇಂದ್ರ ಆಗಮಿಸಿದ್ದ. ಈ ವೇಳೆ ಸುರೇಶ್ ಮೇಲೆ ಇದ್ದಕ್ಕಿದ್ದಂತೆ ಅಟ್ಯಾಕ್ ಮಾಡಿದ ಹಂತಕ, ಬಿಡಿಸಲು ಹೋದ ಮಹೇಂದ್ರನ ಮೇಲೂ ಹಲ್ಲೆ ಮಾಡಿ ಇಬ್ಬರನ್ನು ಹತ್ಯೆಗೈದಿದ್ದಾನೆ. ಸುರೇಶ್ ಅಂಗಡಿ ಒಳಗೆ ಚೇರ್ ಮೇಲೆ ಶವವಾಗಿ ಬಿದ್ದಿದ್ದರೆ, ಇತ್ತ ಮಹೇಂದ್ರ ಅಂಗಡಿ ಹೊರಗೆ ನಿಲ್ಲಿಸಿದ್ದ ಗಾಡಿಯಲ್ಲಿ ಸಾವನ್ನಪ್ಪಿದ್ದಾನೆ.

ತಂದೆ ಬುದ್ಧಿವಾದ ಹೇಳಿದಕ್ಕೆ ಮನನೊಂದು ಮಗ ಆತ್ಮಹತ್ಯೆ

ಧಾರವಾಡ: ತಂದೆ ಓದಿನ ಕಡೆ ಗಮನ ಕೊಡು ಎಂದು ಬುದ್ಧಿವಾದ ಹೇಳಿದಕ್ಕೆ ಮನನೊಂದು ಫುಟ್ಬಾಲ್ ಆಟಗಾರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ನಗರದ ಕೆಲಗೇರಿ ಕೆರೆಯಲ್ಲಿ ನಡೆದಿದೆ. ಸಾದನಕೇರಿ ಬಡಾವಣೆ ನಿವಾಸಿ ಶರಣಪ್ಪ ಕೊಂಡಿಹಾಳ ಎಂಬುವರ ಪುತ್ರ ಮೃತ ಚೇತನ್(23)​​. ತಂದೆ ಬುದ್ದಿ ಹೇಳಿದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಚೇತನ್, ಇಂದು ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈ ಕುರಿತು ಧಾರವಾಡ ಉಪನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:45 pm, Wed, 7 February 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ