AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪ ನೋಂದಾವಣಿ​ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಪ್ರಕರಣ: ಬೆಂಗಳೂರು ಗ್ರಾಮಾಂತರ ಮತ್ತು ನಗರದಲ್ಲಿ ಸಿಕ್ಕ ಹಣ ಎಷ್ಟು ಎಂಬುದು ಇಲ್ಲಿದೆ

ನಗರ, ಗ್ರಾಮಾಂತರ ಜಿಲ್ಲೆಯ ಸಬ್​​ರಿಜಿಸ್ಟ್ರಾರ್​ ಕಚೇರಿಗಳ ಮೇಲಿನ ಲೋಕಾಯುಕ್ತ ದಾಳಿ ವೇಳೆ ಲಕ್ಷಾಂತರ ರೂಪಾಯಿ ಪತ್ತೆಯಾಗಿದ್ದು, ಇದರ ಮೂಲದ ಬಗ್ಗೆ ತನಿಖೆ ಆರಂಭಗೊಂಡಿದ್ದು, ಕಚೇರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಉಪ ನೋಂದಾವಣಿ​ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಪ್ರಕರಣ: ಬೆಂಗಳೂರು ಗ್ರಾಮಾಂತರ ಮತ್ತು ನಗರದಲ್ಲಿ ಸಿಕ್ಕ ಹಣ ಎಷ್ಟು ಎಂಬುದು ಇಲ್ಲಿದೆ
ಸಬ್​​ರಿಜಿಸ್ಟ್ರಾರ್​ ಕಚೇರಿಗಳ ಮೇಲಿನ ದಾಳಿ ವೇಳೆ ಪತ್ತೆಯಾದ ಹಣದ ಮೂಲದ ಬಗ್ಗೆ ದಾಖಲೆ ನೀಡುವಂತೆ ನೋಟಿಸ್ ಜಾರಿ ಮಾಡಿದ ಲೋಕಾಯುಕ್ತ
Follow us
TV9 Web
| Updated By: Rakesh Nayak Manchi

Updated on:Nov 04, 2022 | 1:52 PM

ಬೆಂಗಳೂರು: ನಗರ, ಗ್ರಾಮಾಂತರ ಜಿಲ್ಲೆಯ ಸಬ್​​ರಿಜಿಸ್ಟ್ರಾರ್​ ಕಚೇರಿಗಳ ಮೇಲೆ ಗುರುವಾರ ನಡೆದ ಲೋಕಾಯುಕ್ತ ದಾಳಿ ಪ್ರಕರಣ ಸಂಬಂಧ ಜಪ್ತಿ ಮಾಡಲಾದ ಲಕ್ಷಾಂತರ ರೂಪಾಯಿ ಹಣದ ಮೂಲದ ಬಗ್ಗೆ ಮಾಹಿತಿ ನೀಡುವಂತೆ 14 ಸಬ್​ ರಿಜಿಸ್ಟ್ರಾರ್​ಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಒಂದೊಮ್ಮೆ ಅಧಿಕಾರಿಗಳು ನೋಟಿಸ್​ಗೆ ಸರಿಯಾದ ಉತ್ತರ ನೀಡದೇ ಇದ್ದಲ್ಲಿ ಲೋಕಾಯುಕ್ತ ಪೊಲೀಸರು ಅಧಿಕಾರಿಗಳನ್ನು ಬಂಧಿಸಲಿದ್ದಾರೆ. ಬೆಂಗಳೂರು ವ್ಯಾಪ್ತಿಯ ನಾಗವಾರ, ಬಾಣಸವಾಡಿ, ಕೋರಮಂಗಲ, ವರ್ತೂರು, ಬೇಗೂರು ಸೇರಿ 14 ಕಚೇರಿ ಮೇಲೆ ದಾಳಿ ನಡೆಸಲಾಗಿತ್ತು.

ಉಪನೋಂದಾವಣಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ವೇಳೆ ಮಧ್ಯವರ್ತಿಗಳು, ಕಂಪ್ಯೂಟರ್ ಆಪರೇಟರ್ ಬಳಿ ಲಕ್ಷ ಲಕ್ಷ ಹಣ ಪತ್ತೆಯಾಗಿತ್ತು. ಒಟ್ಟು 14 ಕಡೆಗಳಲ್ಲಿ ನಡೆದ ದಾಳಿ ವೇಳೆ 7.5 ಲಕ್ಷ ರೂಪಾಯಿವನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದರು. ‌ಈ ಹಣ ಬೆಂಗಳೂರು ನಗರದಲ್ಲಿ ನಡೆದ ದಾಳಿಯದ್ದಾಗಿದ್ದರೆ ಬೆಂಗಳೂರು ಗ್ರಾಮಾಂತರದಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಸಿಕ್ಕ ಹಣವೆಷ್ಟು? ಗ್ರಾಮಾಮತರ ಜಿಲ್ಲೆಯಲ್ಲಿ ಒಟ್ಟು 2,64,920 ರೂ. ಹಣ ಪತ್ತೆಯಾಗಿದೆ.‌ ಆನೆಕಲ್ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ 95,170 ರೂ., ಹೊಸಕೋಟೆ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ 1,04,230 ರೂ., ದೊಡ್ಡಬಳ್ಳಾಪುರ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ 42,170 ರೂ., ಬನ್ನೇರುಘಟ್ಟ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ 23,350 ರೂ. ಪತ್ತೆಯಾಗಿತ್ತು.

ಸದ್ಯ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದ ಹಣದ ಮೂಲದ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಅದರಂತೆ ಹಣದ ಮೂಲ ಯಾವುದು, ಯಾಕಾಗಿ ಹಣವನ್ನ ಪಡೆಯಲಾಗಿದೆ ಎಂಬುದನ್ನು ತಿಳಿಯಲು ಕಚೇರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಬ್ರೋಕರ್, ಕಂಪ್ಯೂಟರ್ ಆಪರೇಟರ್​ಗಳ ಜೊತೆ ಸಬ್ ರಿಜಿಸ್ಟ್ರಾರ್ ಕೂಡ ಕಂಬಿ ಎಣಿಸುವ ಸ್ಥಿತಿ ಬರಬಹುದೇ ಎಂಬುದು ತನಿಖೆಯಿಂದ ಗೊತ್ತಾಗಲಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:52 pm, Fri, 4 November 22

ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!