AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮ ಪಂಚಾಯತ್ ಅಧ್ಯಕ್ಷ ಚುನಾವಣೆಗೆ ಬಂದ ಹಳಿಯೂರು ಗ್ರಾಮ ಪಂಚಾಯಿತಿ ಸದಸ್ಯ ರೆಸಾರ್ಟ್​ನಲ್ಲಿ ಅನುಮಾನಾಸ್ಪದವಾಗಿ ಸಾವು

ಹಳಿಯೂರು ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೆ.ಆರ್.ನಗರ ತಾಲೂಕಿನಲ್ಲಿ ನಡೆದಿದೆ. ಜವರೇಗೌಡ ಕೊಪ್ಪಲಿನ ಗ್ರಾಮ ಪಂಚಾಯತ್ ಸದಸ್ಯ ಸತೀಶ್(34) ಮೃತಪಟ್ಟವರು.

ಗ್ರಾಮ ಪಂಚಾಯತ್ ಅಧ್ಯಕ್ಷ ಚುನಾವಣೆಗೆ ಬಂದ ಹಳಿಯೂರು ಗ್ರಾಮ ಪಂಚಾಯಿತಿ ಸದಸ್ಯ ರೆಸಾರ್ಟ್​ನಲ್ಲಿ ಅನುಮಾನಾಸ್ಪದವಾಗಿ ಸಾವು
ಮೃತಪಟ್ಟ ಗ್ರಾಮ ಪಂಚಾಯತ್ ಸದಸ್ಯ ಸತೀಶ್
TV9 Web
| Updated By: Rakesh Nayak Manchi|

Updated on: Jul 26, 2022 | 2:32 PM

Share

ಮೈಸೂರು: ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಹಳಿಯೂರು ಗ್ರಾಮದಲ್ಲಿ ನಡೆದಿದೆ. ಜವರೇಗೌಡ ಕೊಪ್ಪಲಿನ ಗ್ರಾಮ ಪಂಚಾಯತ್ ಸದಸ್ಯ ಸತೀಶ್(34) ಮೃತಪಟ್ಟವರು. ನಾಳೆ ಹಳಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಚುನಾವಣೆ ಹಿನ್ನೆಲೆ 10ಕ್ಕೂ ಹೆಚ್ಚು ಸದಸ್ಯರು ಆರ್.ಟಿ.ನಗರದ ಸುಭೀಕ್ಷ ಗಾರ್ಡನ್​ಗೆ ಬಂದಿದ್ದರು. ಇವರಲ್ಲಿ ಸತೀಶ್ ಕೂಡ ಒಬ್ಬರು. ಆದರೆ ಇವರು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು,  ಎದೆ ನೋವಿನಿಂದ ಕುಸಿದುಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.

ಜು.27ರಂದು ಹಿಳಿಯೂರು ಗ್ರಾಮ ಪಂಚಾಯಿತು ಅಧ್ಯಕ್ಷ ಚುನಾವಣೆ ಹಿನ್ನೆಲೆ ಜವರೇಗೌಡ ಕೊಪ್ಪಲಿನ ಗ್ರಾಮ ಪಂಚಾಯತ್ ಸದಸ್ಯ ಸತೀಶ್ ಸೇರಿದಂತೆ ಒಟ್ಟು 10 ಮಂದಿ ಸದಸ್ಯರು ಸೋಮವಾರದಂದು ಮೈಸೂರಿನ ಆರ್.ಟಿ.ನಗರದ ಸುಭೀಕ್ಷ ಗಾರ್ಡನ್​ನಲ್ಲಿ ನೆಲೆಸಿದ್ದರು. ಆದರೆ ಇವರು ರಾತ್ರಿ ಎದೆ ನೋವಿನಿಂದ ಕುಸಿದುಬಿದ್ದು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಕೋಟ್ಯಂತರ ರೂ. ಮೌಲ್ಯದ ರಕ್ತ ಚಂದನ ಜಪ್ತಿ

ಬೆಂಗಳೂರು: ರಕ್ತಚಂದನದ ತುಂಡು ಮಾರಾಟ ಮಾಡಲು ಮುಂದಾದ ಐವರು ಆರೋಪಿಗಳ ಸಹಿತ ಕೋಟ್ಯಂತರ ರೂ. ಮೌಲ್ಯದ ರಕ್ತ ಚಂದನವನ್ನು ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿನೋದ್​, ಲಕ್ಷ್ಮಯ್ಯ, ಸಂಜಯ್​, ರಾಜು, ಕೃಷ್ಣ ಬಂಧಿತ ಆರೋಪಿಗಳು. ಇವರಿಂದ ಒಟ್ಟು 2.68 ಕೋಟಿ ಮೌಲ್ಯದ ರಕ್ತಚಂದನ ಮರದ ತುಂಡುಗಳನ್ನು ಜಪ್ತಿ ಮಾಡಲಾಗಿದೆ.

ಆರೋಪಿಗಳು ರಕ್ತಚಂದನ ಮರದ ತುಂಡುಗಳನ್ನು ಮೈಸೂರು ರಸ್ತೆ ಸ್ಯಾಟ್​ಲೈಟ್ ಬಸ್ ನಿಲ್ದಾಣದ ಬಳಿ ಮಾರಾಟ ಮಾಡಲು ಮುಂದಾಗಿದ್ದಾರೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಬ್ಯಾಟರಾಯನಪುರ ಠಾಣಾ ಪೊಲೀಸರು, ಕಾರ್ಯಾಚರಣೆ ನಡೆಸಿ ಐವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಪೊಲೀಸರು ಪ್ರಾಥಮಿಕ ತನಿಖೆಗೆ ಒಳಪಡಿಸಿದಾಗ ರಕ್ತಚಂದನದ ತುಂಡುಗಳನ್ನು ಬಚ್ಚಿಟ್ಟ ಮಾಹಿತಿ ಹೊರಹಾಕಿದ್ದಾರೆ.

ಹೆಸರುಘಟ್ಟದ ಮನೆಯೊಂದರಲ್ಲಿ ರಕ್ತಚಂದನ ಮರದ ತುಂಡುಗಳನ್ನು ಬಚ್ಚಿಟ್ಟ ಬಗ್ಗೆ ಆರೋಪಿಗಳು ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾರೆ. ಇವರು ನೀಡಿದ ಮಾಹಿತಿಯಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ನೀರಿನ ಸಂಪ್​​ನಲ್ಲಿ ರಕ್ತಚಂದನ ಬಚ್ಚಿಟ್ಟಿರುವುದು ಪತ್ತೆಯಾಗಿದೆ. ಅದರಂತೆ 2.68 ಕೋಟಿ ಮೌಲ್ಯದ ರಕ್ತಚಂದನ ಮರದ ತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ