AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್ ಜೂಜು ಚಟಕ್ಕೆ ಬಿದ್ದು ಸುಲಿಗೆ ಆರಂಭಿಸಿದ ಗ್ಯಾಂಗ್; ಒತ್ತಡದಲ್ಲಿ ವಾಹನ ಓಡಿಸುವವರೇ ಇವರ ಟಾರ್ಗೆಟ್

ಆನ್​ಲೈನ್ ಗ್ಯಾಂಬ್ಲಿಂಗ್ ಚಟಕ್ಕೆ ಬಿದ್ದು ರಸ್ತೆ ರಸ್ತೆಯಲ್ಲಿ ಸುಲಿಗೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ನಗರದ ಬಸವನಗುಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಗ್ಯಾಂಬ್ಲಿಂಗ್​ಗೆ ಹಣ ಬೇಕೆಂದಾಗೆಲ್ಲಾ ಆರೋಪಿಗಳು ಬೆಂಗಳೂರಿಗೆ ಬಂದು ಸುಳಿಗೆ ನಡೆಸುತ್ತಿದ್ದರು.

ಆನ್​ಲೈನ್ ಜೂಜು ಚಟಕ್ಕೆ ಬಿದ್ದು ಸುಲಿಗೆ ಆರಂಭಿಸಿದ ಗ್ಯಾಂಗ್; ಒತ್ತಡದಲ್ಲಿ ವಾಹನ ಓಡಿಸುವವರೇ ಇವರ ಟಾರ್ಗೆಟ್
ಸಾಂಕೇತಿಕ ಚಿತ್ರ
TV9 Web
| Edited By: Rakesh Nayak Manchi|

Updated on:Aug 01, 2022 | 12:57 PM

Share

ಬೆಂಗಳೂರು: ಆನ್​ಲೈನ್ ಜೂಜು ಚಟಕ್ಕೆ ಬಿದ್ದು ರಸ್ತೆ ರಸ್ತೆಯಲ್ಲಿ ಸುಲಿಗೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ನಗರದ ಬಸವನಗುಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ವಾಹನ ತಾಗಿತು ಎಂದು ಆರೋಪಿಸಿ ಜಗಳಕ್ಕೆ ಇಳಿದು ಸಾವಿರಾರು ರೂಪಾಯಿ ವಸೂಲಿ ಮಾಡುತ್ತಿದ್ದ ಮೈಸೂರು ಮೂಲದ ಜಮೀಲ್ ಖಾನ್, ಜುನಾಯಿದ್ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಜನರನ್ನು ಸುಲಿಗೆ ಮಾಡಲು ಆರೋಪಿಗಳು ವಾಹನ ಅಪಘಾತವನ್ನೇ ಬಂಡವಾಳವನ್ನಾಗಿ ಮಾಡಿಕೊಂಡಿದ್ದರು. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಗಲು ರಾತ್ರಿ ಎನ್ನದೆ ಆರೋಪಿಗಳು ಸುಲಿಗೆ ನಡೆಸುತ್ತಿದ್ದರು. ಒತ್ತಡದಲ್ಲಿ ವಾಹನ ಚಾಲನೆ ಮಾಡುವವರ ಪಕ್ಕಕ್ಕೆ ಬಂದು ನಿಮ್ಮ ವಾಹನ ಟಚ್ ಆಯ್ತು ಎಂದು ಕಿರಿಕ್ ಮಾಡುತ್ತಿದ್ದರು. ಬಳಿಕ ಅವರಿಂದ ಸಾವಿರಾರು ರೂಪಾಯಿ ಸುಲಿಗೆ ಮಾಡುತ್ತಿದ್ದರು.

ಇದೇ ರೀತಿಯ ಕೃತ್ಯವನ್ನು ಆರೋಪಿಗಳು ಬಸವನಗುಡಿಯಲ್ಲಿ ನಡೆಸಿ ವಾಹನ ಸವಾರನಿಂದ 40 ಸಾವಿರ ರೂಪಾಯಿ ದರೋಡೆ ಮಾಡಿದ್ದರು. ಘಟನೆ ಬಗ್ಗೆ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡ ಬಸವನಗುಡಿ ಠಾಣಾ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ವಿಚಾರಣೆ ನಡೆಸಿದಾಗ ಬೆಂಗಳೂರು, ಶ್ರೀರಂಗಪಟ್ಟಣ ಸೇರಿದಂತೆ ಹಲವು ಕಡೆಗಳಲ್ಲಿ ಕೃತ್ಯ ನಡೆಸಿರುವುದು ತಿಳಿದುಬಂದಿದೆ. ಅಲ್ಲದೆ ಹಲವು ಬಾರಿ ಜೈಲಿಗೆ ಹೋಗಿ ಬಂದಿದ್ದರೂ ಬುದ್ಧಿ ಕಲಿಯದ ಆರೋಪಿಗಳು ಮತ್ತದೇ ಕೃತ್ಯವನ್ನು ಮುಂದುವರಿಸಿದ್ದಾರೆ. ಆನ್​ಲೈನ್​ ಗ್ಯಾಂಬ್ಲಿಂಗ್​ಗೆ ಹಣ ಬೇಕೆಂದಾದಾಗ ಬೆಂಗಳೂರಿಗೆ ಬಂದು ದರೋಡೆಗೆ ಇಳಿಯುತ್ತಿದ್ದರು ಎಂದು ತಿಳಿದುಬಂದಿದೆ.

ಬಾರ್ ಕ್ಯಾಷಿಯರ್ ಮೇಲೆ ಮಾರಣಾಂತಿಕ ಹಲ್ಲೆ

ಹಾಸನ: ಎಂಆರ್​ಪಿ‌ ದರದಲ್ಲಿ ಮದ್ಯ ಮಾರಾಟ ಮಾಡುವುದಿಲ್ಲ ಎಂದು ಹೇಳಿದ್ದಕ್ಕೆ ಮೂವರು ವ್ಯಕ್ತಿಗಳು ಬಾರ್ ಕ್ಯಾಷಿಯರ್ ಮೇಲೆ ಹಲ್ಲೆ ನಡೆಸಿದ ಘಟನೆ ನಗರದ ವಿಜಯ ನಗರ ಬಡಾವಣೆಯಲ್ಲಿ ನಡೆದಿದೆ. ಘಟನೆಯ ದೃಶ್ಯಾವಳಿಗಳು ಬಾರ್​ನಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದನ್ನು ಆಧರಿಸಿ ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಭಾನುವಾರ ಮಧ್ಯಾಹ್ನ ವಿಜಯ ನಗರ ಬಡಾವಣೆಯಲ್ಲಿರುವ ಬಾರ್​ಗೆ ಬಂದ ಮೂವರು ವ್ಯಕ್ತಿಗಳು ಎಂಆರ್​ಪಿ ದರದಲ್ಲಿ ಮದ್ಯ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಇದಕ್ಕೆ ಬಾರ್ ಕ್ಯಾಷಿಯರ್ ಒಪ್ಪದಿದ್ದಾಗ ಆಕ್ರೋಶಗೊಂಡ ಮೂವರು ಕುರ್ಚಿ ಮತ್ತು ದೊಣ್ಣೆಗಳಿಂದ ಕ್ಯಾಷಿಯರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಹಲ್ಲೆ ವೇಳೆ ಎಷ್ಟೇ ಬೇಡಿಕೊಂಡರೂ ಬಿಡದ ಪುಂಡರು ಹಿಗ್ಗಾಮುಗ್ಗ ಥಳಿಸಿದ್ದಾರೆ.

ಪುಂಡರ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಕ್ಯಾಷಿಯರ್ ಕುಸಿದುಬಿದ್ದಿದ್ದು, ಕೂಡಲೇ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ಸಂಬಂಧ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಿಸಿ ಕ್ಯಾಮೆರಾ ದೃಶ್ಯಾವಳಿ ಮುಂದಿಟ್ಟುಕೊಂಡು ದುಷ್ಕರ್ಮಿಗಳ ಬಂಧನಕ್ಕೆ ತನಿಖೆ ಕೈಗೊಂಡಿದ್ದಾರೆ.

ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ಕಾರು

ಚಾಮರಾಜನಗರ: ತಮಿಳುನಾಡು ಗಡಿ ಭಾಗ ದಿಂಬಂ ಘಾಟ್​​ 23ನೇ ತಿರುವಿನಲ್ಲಿ ಕಾರಿಗೆ ಆಕಸ್ಮಿಕ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ಘಟನೆ ನಡೆದಿದೆ. ಮೈಸೂರಿನಿಂದ ಸತ್ಯಂ ಮಂಗಲಂಗೆ ಕಾರು ಮೂಲಕ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದರು. ದಿಂಬಂ ಘಾಟ್​​ 23ನೇ ತಿರುವಿನಲ್ಲಿ ಹೋಗುತ್ತಿದ್ದಂತೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೀಗೆ ಕಾಣಿಸಿಕೊಂಡ ಬೆಂಕಿ ಇಡೀ ಕಾರನ್ನು ಆವರಿಸಿದೆ. ಮಾಹಿತಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಕಾರಿಗೆ ಹತ್ತಿಕೊಂಡ ಬೆಂಕಿಯನ್ನು ನಂದಿಸಿದ್ದಾರೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Published On - 12:57 pm, Mon, 1 August 22

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?