Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರ್ಮಾಂಗಕ್ಕೆ ಹೊಡೆದು ಕೊಲೆ ಮಾಡಿದ್ದ ಪ್ರಕರಣ: ವಿಚಾರಣೆ ವೇಳೆ ಸ್ಫೋಟಕ ಸತ್ಯ ಬಯಲಿಗೆ

ವ್ಯಕ್ತಿಯೊಬ್ಬರನ್ನು ಅವರ ಮನೆ ಟರೇಸ್ ಮೇಲೆಯೇ ಕೊಲೆ ಮಾಡಿದ್ದ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿದ್ದ ಬೆಂಗಳೂರು ಪೊಲೀಸರು ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮರ್ಮಾಂಗಕ್ಕೆ ಹೊಡೆದು ಕೊಲೆ ಮಾಡಿದ್ದ ಪ್ರಕರಣ: ವಿಚಾರಣೆ ವೇಳೆ ಸ್ಫೋಟಕ ಸತ್ಯ ಬಯಲಿಗೆ
ಚಂದ್ರಶೇಖರ್​ನನ್ನು ಕೊಂದ ಇಬ್ಬರು ಆರೋಪಿಗಳು
Follow us
TV9 Web
| Updated By: Rakesh Nayak Manchi

Updated on:Oct 26, 2022 | 10:22 AM

ಬೆಂಗಳೂರು: ಚಂದ್ರಶೇಖರ್ ಎಂಬವರನ್ನು ಅವರ ಮನೆಯ ಟರೇಸ್ ಮೇಲೆಯೇ ಕೊಲೆ ಮಾಡಿದ್ದ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿದ್ದ ಬೆಂಗಳೂರು ಪೊಲೀಸರು ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆ ಸಂದರ್ಭದಲ್ಲಿ ಚಂದ್ರಶೇಖರ್ ಪತ್ನಿ ಮತ್ತು ಆಕೆಯ ಸ್ನೇಹಿತನ ಮೇಲೆ ಶಂಕೆ ವ್ಯಕ್ತವಾಗಿತ್ತು. ಅದರಂತೆ ಮಹಿಳೆಯನ್ನು ವಿಚಾರಣೆ ನಡೆಸಿದ ಪೊಲೀಸರಿಗೆ ಆಕೆಯ ಅಕ್ರಮ ಸಂಬಂಧದ ವಿಚಾರ ತಿಳಿದುಬಂದಿದೆ. ಪತಿ ತನ್ನ ಅಕ್ರಮ ಸಂಭಂದಕ್ಕೆ ಅಡ್ಡಿಯಾಗುತ್ತಿದ್ದ ಎಂದು ಸ್ನೇಹಿತನ ಮಾತು ಕೇಳಿ ಮನೆಯ ಟರೇಸ್ ಮೇಲೆ ಇಬ್ಬರು ಕೂಡಿ ಕೊಲೆ ಮಾಡಿದ್ದಾಗಿ ಪೊಲೀಸರು ವಿಚಾರಣೆ ವೇಳೆ ಮಹಿಳೆ ಬಾಯಿಬಿಟ್ಟಿದ್ದಾಳೆ.

ಚಂದ್ರಶೇಖರ್ ಮತ್ತು ಶ್ವೇತ ಕಳೆದ ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದರು. ಇಬ್ಬರ ನಡುವೆ 16 ವರ್ಷ ಅಂತರವಿದ್ದರೂ ಅಕ್ಕನ ಮಗಳು ಎಂಬ ಕಾರಣಕ್ಕೆ ಬಲವಂತವಾಗಿ ಮದುವೆ ಮಾಡಿಸಲಾಗಿತ್ತು. ಮದುವೆಯ ಬಳಿಕ ನೆಮ್ಮದಿಯ ಜೀವನ ಇಬ್ಬರಿಗೂ ಇರಲಿಲ್ಲ. ಶ್ವೇತಾಳಿಗೆ ಕಾಲೇಜು ಗೆಳೆಯರು ಹಾಗೂ ಬೇರೆ ಸ್ನೇಹಿತರು ಇರುವುದರಿಂದ ಈ ವಿಚಾರದಲ್ಲಿ ದಂಪತಿ ನಡುವೆ ಪದೇಪದೇ ಜಗಳ ನಡೆಯುತ್ತಿತ್ತು. ಈ ನಡುವೆ ಹಿಂದುಪುರದ ಸುರೇಶ್ ಎಂಬಾತನೊಂದಿಗೆ ಶ್ವೇತಾ ಸಂಪರ್ಕದಲ್ಲಿದ್ದಳು. ಪತಿ ಇಲ್ಲದ ಸಮಯದಲ್ಲಿ ಇಬ್ಬರೂ ಒಟ್ಟು ಸೇರುತ್ತಿದ್ದರು. ಈ ನಡುವೆ ಪತಿ ಇದ್ದಾರೆ, ಇದೆಲ್ಲಾ ಕಷ್ಟಾ ಎಂದು ಶ್ವೇತಾ ಸುರೇಶ್ ಬಳಿ ಹೇಳಿದ್ದಾಳೆ. ಇದಕ್ಕೆ ಸುರೇಶ್ ಕೊಟ್ಟ ಪ್ಲಾನ್ ಕೊಲೆ.

ತಮ್ಮ ಸಂಬಂಧಕ್ಕೆ ಅಡ್ಡಿ ಬರುವ ನಿನ್ನ ಪತಿಯನ್ನು ಕೊಂದು ಬಿಡು ಎಂದು ಸುರೇಶ್ ಶ್ವೇತಾಗೆ ಹೇಳಿದ್ದಾನೆ. ಈತನ ಮಾತು ಕೇಳಿದ ಶ್ವೇತ ಪತಿಯ ಕೊಲೆಗೆ ಮುಂದಾಗಿದ್ದಾಳೆ. ಅದರಂತೆ ಪೂರ್ವ ತಯಾರಿ ನಡೆಸಿಕೊಂಡು ಸುರೇಶ್ ಶ್ವೇತಾಳ ಮನೆಗೆ ಬಂದಿದ್ದು, ಚಂದ್ರಶೇಖರ್ ಟರೇಸ್ ಮೇಲೆ ಇದ್ದಾಗ ಹಲ್ಲೆ ನಡೆಸಿ ಕೊಂದು ಹಾಕಿದ್ದರು.

ಈ ಕೊಲೆ ಪ್ರಕರಣ ಅಕ್ಟೋಬರ್ 22ರಂದು ನಡೆದಿತ್ತು. ಆರಂಭದಲ್ಲಿ ಶ್ವೇತಾಳನ್ನು ಪ್ರಾಥಮಿಕ ತನಿಖೆ ನಡೆಸಿದಾಗ ಆಕೆ ಪೊಲೀಸರ ಮುಂದೆ, ಕೊಲೆ ಯಾರು ಮಾಡಿದ್ದಾರೆ ಎಂದು ಗೊತ್ತಿಲ್ಲ ಎಂದಿದ್ದಳು. ಅದಾಗ್ಯೂ ಪೊಲೀಸರಿಗೆ ಅನುಮಾನ ವ್ಯಕ್ತವಾದ ಹಿನ್ನೆಲೆ ತೀವ್ರ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಶ್ವೇತಾ ತನ್ನ ಮತ್ತು ಸುರೇಶ್ ನಡುವಿನ ಅಕ್ರಮ ಸಂಬಂಧದ ಬಗ್ಗೆ ಬಾಯಿಬಿಟ್ಟಿದ್ದಾಳೆ. ಸದ್ಯ ಕೊಲೆ ಆರೋಪಿ ಸುರೇಶ್​ನನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:22 am, Wed, 26 October 22

ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ