AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ, 23 ಆರೋಪಿಗಳು ಅರೆಸ್ಟ್, 1 ಕೋಟಿ ಮೌಲ್ಯದ ವಸ್ತುಗಳು ಜಪ್ತಿ

ಬೆಂಗಳೂರು ನಗರದ ವೈಟ್​ಫೀಲ್ಡ್ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 23 ಆರೋಪಿಗಳ ಸಹಿತ 1ಕೋಟಿಗೂ ಅಧಿಕ ಮೌಲ್ಯದ ಕಳವು ಮಾಲುಗಳನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ, 23 ಆರೋಪಿಗಳು ಅರೆಸ್ಟ್, 1 ಕೋಟಿ ಮೌಲ್ಯದ ವಸ್ತುಗಳು ಜಪ್ತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 09, 2022 | 6:00 PM

Share

ಬೆಂಗಳೂರು: ನಗರದ ವೈಟ್​ಫೀಲ್ಡ್ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 1ಕೋಟಿಗೂ ಅಧಿಕ ಮೌಲ್ಯದ ಕಳವು ಮಾಲುಗಳನ್ನು ವಶಕ್ಕೆ ಪಡೆದಿದ್ದಾರೆ. ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ 23 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, 1.70 ಕೋಟಿ ರೂ. ಮೌಲ್ಯದ ಕಳವು ಮಾಡಿದ್ದ ಮಾಲು ಜಪ್ತಿ ಮಾಡಲಾಗಿದೆ. ಇದರಲ್ಲಿ 9 ಕಾರು, 45 ಬೈಕ್​ಗಳು, 135 ಮೊಬೈಲ್​ಗಳು, 5 ಕ್ಯಾಮರಾ, 1 ಲ್ಯಾಪ್​ಟಾಪ್, 150 ಗ್ರಾಂ ಚಿನ್ನ ಒಳಗೊಂಡಿದೆ. ವಶಕ್ಕೆ ಪಡೆದ ಮಾಲುಗಳು ಹೆಚ್​ಎಎಲ್, ಕಾಡುಗೋಡಿ, ಬೆಳ್ಳಂದೂರು, ಮಾರತ್ತಹಳ್ಳಿ ಮತ್ತು ವೈಟ್​ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕಳವು ಪ್ರಕರಣದ್ದಾಗಿದೆ.

ಇದನ್ನೂ ಓದಿ: Crime News: ಆಸ್ತಿಯಲ್ಲಿ ಭಾಗ ಕೇಳುವಂತೆ ಪೀಡಿಸುತ್ತಿದ್ದ ಭಾವನನ್ನೇ ಹತ್ಯೆಗೈದ ಬಾಮೈದ!

ಲೀಗಲ್ ನೋಟಿಸ್​ಗೆ ಹೆದರಿ ರೈತ ಆತ್ಮಹತ್ಯೆ

ಮಂಡ್ಯ: ಪಿಎಲ್​ಡಿ ಬ್ಯಾಂಕ್ ಲೀಗಲ್ ನೋಟಿಸ್​ಗೆ ಹೆದರಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗೆಂಡೆಹೊಸಹಳ್ಳಿಯಲ್ಲಿ ನಡೆದಿದೆ. ರಘು ಆತ್ಮಹತ್ಯೆ ಮಾಡಿಕೊಂಡ ರೈತ. ರಘು ತನ್ನ ತಾತಿ ಗಾಯತ್ರಮ್ಮ ಅವರ ಹೆಸರಿನಲ್ಲಿ ಪಿಎಲ್​ಡಿ ಬ್ಯಾಂಕ್​ನಿಂದ 8.78 ಲಕ್ಷ ರೂ. ಸಾಲ ಪಡೆದಿದ್ದು. ಅದರಂತೆ ಕಳೆದ ಮೂರು ತಿಂಗಳಿನಿಂದ ರಘು ಅವರಿಗೆ ಆರ್ಥಿಕ ಸಂಕಷ್ಟ ಎದುರಾದ ಹಿನ್ನೆಲೆ ಕಂತು ಪಟ್ಟಲು ಸಾಧ್ಯವಾಗಿಲ್ಲ. ಸಂಕಷ್ಟದ ಸಮಯದಲ್ಲಿ ಬ್ಯಾಂಕ್​ನಿಂದ ಲೀಗಲ್ ನೋಟಿಸ್ ನೋಟಿಸ್ ಜಾರಿಯಾಗಿದ್ದನು ಕಂಡು ಭಯದಿಂದ ರಘು ವಿಷ ಸೇವಿಸಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೆ ರಘು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: Bengaluru News: ಹದಗೆಟ್ಟ ರಸ್ತೆಗಳಿಂದ ನಿರಂತರ ಅಪಘಾತ, ಆತಂಕದಲ್ಲಿ ವಾಹನ ಸವಾರರು!

ಕರ್ತವ್ಯ ಲೋಪ ಎಸಗಿದ ಪಿಎಸ್​ಐ ಅಮಾನತು

ಬೆಂಗಳೂರು ಗ್ರಾಮಾಂತರ: ಕರ್ತವ್ಯ ಲೋಪ ಎಸಗಿದ ಪ್ರಕರಣ ಸಂಬಂಧ ಹೊಸಕೋಟೆ ತಾಲೂಕಿನ ಸೂಲಿಬೆಲೆ ಠಾಣೆಯ ಪಿಎಸ್​ಐ ರಮೇಶ್ ಅವರನ್ನು ಅಮಾನತುಗೊಳಿಸಲಾಗಿದೆ. ರಮೇಶ್ ಅವರು ಗಾಂಜಾ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವ ಆರೋಪ ಕೇಳಿಬಂದಿತ್ತು. ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್​​ಪಿ ವಂಶಿಕೃಷ್ಣ ಅವರು ರಮೇಶ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಕಳೆದ ಮೂರು ದಿನಗಳ ಹಿಂದೆ ಕೈಗಾರಿಕಾ ಪ್ರದೇಶದಲ್ಲಿ ಗಾಂಜಾ ಮಾರಾಟ ಮಾಡುವಾಗ ಆರೋಪಿಗಳು ಸಿಕ್ಕಿಬಿದ್ದಿದ್ದರು. ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ್ದ ಡಿವೈಎಸ್​ಪಿ ಉಮಾಶಂಕರ್ ನೇತೃತ್ವದ ತಂಡ ದಾಳಿ ನಡೆಸಿತ್ತು. ಹೀಗಾಗಿ ಕರ್ತವ್ಯ ಲೋಪ ಎಸಗಿದ್ದಕ್ಕೆ ರಮೇಶ್ ಅವರನ್ನು ಅಮಾನತುಗೊಳಿಸಲಾಗಿದೆ. ಇದನ್ನೂ ಓದಿ: Crime News: ಕುಡುಕ ಪತಿಯ ಕಾಟ ತಾಳಲಾರದೆ ಕತ್ತು ಹಿಚುಕಿ ಪತ್ನಿಯಿಂದಲೇ ಪತಿಯ ಕೊಲೆ!

ಇನ್ನೊಂದೆಡೆ, ಪಿಎಸ್​ಐ ರಮೇಶ್ ಕಿರುಕುಳ ನೀಡುತ್ತಿದ್ದ ಬಗ್ಗೆ ಸ್ವತಃ ಪತ್ನಿಯೇ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ತನಿಖೆಗೆ ತಂಡ ರಚನೆ ಮಾಡುವಂತೆ ಹಾಗೂ ಆರೋಪದ ಸತ್ಯಾಸತ್ಯತೆ ಪತ್ತೆ ಹೆಚ್ಚುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿ ವಂಶಿಕೃಷ್ಣ ಆದೇಶ ಹೊರಡಿಸಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:00 pm, Thu, 9 June 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ