AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore: ಬಸ್ ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿ ಮೇಲೆ ಹರಿದ ಬಸ್; ಗಂಭೀರ ಗಾಯ

ಬಸ್ ಹತ್ತುವಾಗ ಜಾರಿ ಬಿದ್ದ ವಿದ್ಯಾರ್ಥಿನಿಯ ಮೇಲೆ ಬಸ್ ಹರಿದು ಹೋದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಘಟನೆಯಲ್ಲಿ ಗಾಯಗೊಂಡಾಕೆಯ ಸ್ಥಿತಿ ಚಿಂತಾಜನಕವಾಗಿದೆ.

Bangalore: ಬಸ್ ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿ ಮೇಲೆ ಹರಿದ ಬಸ್; ಗಂಭೀರ ಗಾಯ
ಬಸ್ ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿ ಮೇಲೆ ಹರಿದ ಬಸ್
TV9 Web
| Edited By: |

Updated on:Oct 10, 2022 | 12:47 PM

Share

ಬೆಂಗಳೂರು: ಬಸ್ ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿ ಮೇಲೆ ಬಸ್ ಹರಿದ ಘಟನೆ ನಗರದ ಜ್ಞಾನಭಾರತಿ ವಿಶ್ವವಿದ್ಯಾಲಯದ ಬಳಿ ಸಂಭವಿಸಿದ್ದು, ಗಾಯಾಳುವಿನ ಸ್ಥಿತಿ ಗಂಭೀರವಾಗಿದೆ. ಮೊದಲ ವರ್ಷದ ಉನ್ನತ ವ್ಯಾಸಾಂಗ ಮಾಡುತ್ತಿದ್ದ ಕೋಲಾರ ಮೂಲದ ವಿದ್ಯಾರ್ಥಿನಿ ಶಿಲ್ಪಾ ಎಂಬಾಕೆ ಬಿಎಂಟಿಸಿ ಬಸ್ ಹತ್ತುವಾಗ ಕೆಳಗೆ ಬಿದ್ದಿದ್ದಾಳೆ. ಈ ವೇಳೆ ಬಸ್ ಆಕೆಯ ಮೇಲೆ ಹರಿದು ಹೋಗಿದೆ. ಗಂಭೀರವಾಗಿ ಗಾಯಗೊಂಡ ಶಿಲ್ಪಾಳನ್ನು ನಾಗರಬಾವಿ ಪೋರ್ಟೀಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ. ಘಟನೆಯಿಂದ ಕೆರಳಿದ ವಿದ್ಯಾರ್ಥಿ ಸಮೂಹ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದು, ಬಸ್ ಚಾಲಕನನ್ನು ಬಂಧಿಸುವಂತೆ ಆಗ್ರಹಿಸಲಾಗುತ್ತಿದೆ.

ರಾಷ್ಟ್ರಧ್ವಜ ಹೋಲುವ ಧ್ವಜದಲ್ಲಿ ಹಸಿರು ಚಿಹ್ನೆ ಬಳಕೆ

ಕೊಪ್ಪಳ: ರಾಷ್ಟ್ರಧ್ವಜ ಹೋಲುವ ಧ್ವಜದಲ್ಲಿ ಹಸಿರು ಚಿಹ್ನೆ ಬಳಕೆಪ್ರಕರಣ ಸಂಬಂಧ ಜಿಲ್ಲೆಯ ಗಂಗಾವತಿ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿದೆ. ನಿನ್ನೆ ನಡೆದ ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಧ್ವಜದಲ್ಲಿ ಹಸಿರು ಚಿಹ್ನೆ ಬಳಕೆ ಮಾಡಲಾಗಿದ್ದು, ರಾಷ್ಟ್ರಧ್ವಜ ಮಾದರಿಯ ಧ್ವಜದಲ್ಲಿ ಇಸ್ಲಾಂ ಚಿಹ್ನೆ ಬಳಕೆ ಆರೋಪ ಮಾಡಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಗಂಗಾವತಿ ನಗರ ಠಾಣೆ ಪೊಲೀಸರು, ರಾಷ್ಟ್ರಧ್ವಜಕ್ಕೆ ಅಪಮಾನ ತಡೆಗಟ್ಟುವ ಕಾಯ್ದೆ 1971ರ ಅಡಿ ಪ್ರಕರಣ ದಾಖಲಿಸಿದ್ದಾರೆ.

ಪತ್ನಿಯ ಕೊಂದು ಪತಿ ಪರಾರಿ

ಬೆಂಗಳೂರು ಗ್ರಾಮಾಂತರ: ತನ್ನ ಪತ್ನಿಯನ್ನು ಪತಿಮಹಾಶಯನೊಬ್ಬ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ನೆಲಮಂಗಲ ತಾಲೂಕಿನ ಶಾಂತಿನಗರ ಗ್ರಾಮದಲ್ಲಿ ನಡೆದಿದೆ. ಮಂಜುಳಾ(35) ಕೊಲೆಯಾದ ದುದೈವಿ. ಜಗಳವಾಡುವ ವೇಳೆ ಅಡುಗೆ ರೂಮ್​ನಲ್ಲಿದ್ದ ಚಾಕು ಹಿಡಿದು ಮಂಜುಳಾಳ ಕುತ್ತಿಗೆಯನ್ನು ಸೀಳಿ ಪತಿ ಶಿವಕುಮಾರ್ (45) ಪರಾರಿಯಾಗಿದ್ದಾನೆ. ಸದ್ಯ ನೆಲಮಂಗಲ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ಶಿವಕುಮಾರ್​ಗೆ ಕುಡಿತದ ಚಟ ಹೆಚ್ಚಾಗಿತ್ತು. ನಿತ್ಯ ಕುಡಿದ ಮತ್ತಿನಲ್ಲಿಯೇ ಮನೆಗೆ ಬಂದು ಪತ್ನಿ ಮಂಜುಳಾಳೊಂದಿಗೆ ಜಗಳ ಮಾಡಿಕೊಳ್ಳುತ್ತಿದ್ದನು. ಅದರಂತೆ ಜಗಳವಾಡುತ್ತಿದ್ದಾಗ ಶಿವಕುಮಾರ್ ಅಡುಗೆ ಮನೆಯಲ್ಲಿದ್ದ ಚಾಕುವಿನಿಂದ ಆಕೆಯ ಕುತ್ತಿಗೆಗೆ ಇರಿದು ಪರಾರಿಯಾಗಿದ್ದಾನೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:46 pm, Mon, 10 October 22

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!