ಹಣದ ವಿಷಯಕ್ಕೆ ಬೆಂಗಳೂರು ಯುವಕನಿಗೆ ಚಿತ್ರಹಿಂಸೆ ನೀಡಿ ಕೊಲೆ, 6 ತಿಂಗಳ ನಂತರ ಪ್ರಕರಣ ಬೆಳಕಿಗೆ! ಪ್ರಕರಣ ಗುಪ್ತವಾಗಿಟ್ಟಿದ್ದು ಹೇಗೆ ಗೊತ್ತಾ?

ತಮ್ಮ ಮಗ ದುಡಿಮೆಗಾಗಿ ಹೊರರಾಜ್ಯದಲ್ಲಿದ್ದಾನೆ ಎಂದೇ ನಂಬಿದ್ದರು ಶರತ್ ನ ಪೋಷಕರು. ಖತರ್ನಾಕ್ ಐಡಿಯಾ ಮೂಲಕ ಕೇಸ್ ಕ್ಲೋಸ್ ಮಾಡಿತ್ತು ಹಂತಕ ಗ್ಯಾಂಗ್!

ಹಣದ ವಿಷಯಕ್ಕೆ ಬೆಂಗಳೂರು ಯುವಕನಿಗೆ ಚಿತ್ರಹಿಂಸೆ ನೀಡಿ ಕೊಲೆ, 6 ತಿಂಗಳ ನಂತರ ಪ್ರಕರಣ ಬೆಳಕಿಗೆ! ಪ್ರಕರಣ ಗುಪ್ತವಾಗಿಟ್ಟಿದ್ದು ಹೇಗೆ ಗೊತ್ತಾ?
ಹಣದ ವಿಷಯಕ್ಕೆ ಯುವಕನಿಗೆ ಚಿತ್ರಹಿಂಸೆ ಕೊಟ್ಟು ಕೊಲೆ
Follow us
| Updated By: Digi Tech Desk

Updated on:Dec 27, 2022 | 5:29 PM

ಬೆಂಗಳೂರು: ಹಣದ ವಿಷಯಕ್ಕೆ ಯುವಕನಿಗೆ (Youth) ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿರುವ (Murder) ಪ್ರಕರಣ ನಡೆದಿದೆ. ಆದರೆ ಇದು ಕೊಲೆ ನಡೆದು 6 ತಿಂಗಳು ನಂತರ ಬೆಳಕಿಗೆ ಬಂದಿದೆ. ಭೀಕರವಾಗಿ ಕೊಲೆಯಾದ ಶರತ್ ಸಾಲ ಪಡೆದು (Loan) ಹಿಂತಿರುಗಿಸದೆ ಓಡಾಡುತ್ತಿದ್ದನಂತೆ. ಇದರಿಂದ ಶರತ್ ನನ್ನು 6 ತಿಂಗಳ ಹಿಂದೆ ಆರೋಪಿಗಳು ಕಿಡ್ನಾಪ್ ಮಾಡಿದ್ದರು. ಅಪಹರಿಸಿದ್ದ ಶರತ್ ನನ್ನು ಚಿಕ್ಕಬಳ್ಳಾಪುರಕ್ಕೆ (Chikkaballapur) ಕರೆದುಕೊಂಡು ಹೋಗಿ ಆರೋಪಿಗಳು ಚಿತ್ರಹಿಂಸೆ ಕೊಟ್ಟಿದ್ದರಂತೆ. ಶರತ್ ನನ್ನು ಅರೆ ನಗ್ನಗೊಳಿಸಿ ಕಟ್ಟಿಹಾಕಿ ಥಳಿಸಿದ್ದರಂತೆ.

ನಂತ್ರ ಶರತ್ ನನ್ನ ಕೊಲೆ ಮಾಡಿ ಚಾರ್ಮಾಡಿ ಘಾಟ್ ನಲ್ಲಿ ಎಸೆದು ಯಾರಿಗೂ ಶವದ ಸುಳಿವು ಸಿಗದಂತೆ ಮಾಡಿದ್ದರು ಆರೋಪಿಗಳು. ಎಷ್ಟರಮಟ್ಟಿಗೆ ಪ್ರಕರಣ ನಿಗೂಢವಾಗಿತ್ತೆಂದರೆ ಕೊಲೆಯಾಗಿ ಆರು ತಿಂಗಳು ಕಳೆದರೂ ಯಾರಿಗೂ ಗೊತ್ತಿರಲಿಲ್ಲ. ಆದರೆ ಕೊಲೆಯಾದ ಶರತ್ ವಿಷಯದಲ್ಲಿ ಯಾರಿಗೂ ಅನುಮಾನ ಬರದಂತೆ ಏನ್ ಮಾಡಿದ್ರು ಗೊತ್ತಾ?

ಪೋಷಕರಿಗೆ ಬಂದಿತ್ತು ಹೀಗೊಂದು ನಿರ್ದಿಷ್ಟ ಸಂದೇಶ:

ಕೊಲೆಯಾದವನ ಮೊಬೈಲಿನಿಂದ ಪೋಷಕರಿಗೆ ಹೀಗೊಂದು ನಿರ್ದಿಷ್ಟ ಸಂದೇಶ ಬಂದಿತ್ತಂತೆ – ನಾನು ದುಡಿಯಲು ಹೋಗುತ್ತಿದ್ದೇನೆ. ಹುಡುಕಬೇಡಿ ಎಂದು ನಿಖರ ಸಂದೇಶ ಬಂದಿತ್ತು. ಮೃತ ಶರತ್ ನ ಮೊಬೈಲಿಂದ ಮೆಸೇಜ್ ಹಾಕಿ, ಆ ಮೊಬೈಲ್ ಅನ್ನು ಲಾರಿಯೊಂದರ ಮೇಲೆ ಎಸೆದಿತ್ತು ಹಂತಕ ಪಡೆ. ಲಾರಿ ಮೈಸೂರು ಮಾರ್ಗವಾಗಿ ಸಾಗಿ ಹೊರ ರಾಜ್ಯಕ್ಕೆ ಹೊರಟುಹೋಗಿತ್ತು. ಕಾಲಾಂತರದಲ್ಲಿ ಮೊಬೈಲ್ ಸ್ವಿಚ್ ಆಫ್ ಆದ ಮೇಲೆ ಅದು ಸಂಪರ್ಕವೇ ಸಿಕ್ಕಿಲ್ಲ.

ತನ್ನ ಮಗ ದುಡಿಮೆಗಾಗಿ ಹೊರರಾಜ್ಯದಲ್ಲಿದ್ದಾನೆ ಎಂದೇ ನಂಬಿದ್ದರು ಶರತ್ ನ ಪೋಷಕರು. ಖತರ್ನಾಕ್ ಐಡಿಯಾ ಮೂಲಕ ಕೇಸ್ ಕ್ಲೋಸ್ ಮಾಡಿತ್ತು ಹಂತಕ ಗ್ಯಾಂಗ್!

ಇದನ್ನೂ ಓದಿ:

RTI activist: ಆತ ಗ್ರಾಮದ ಅವ್ಯವಹಾರಗಳನ್ನ ಪ್ರಶ್ನೆ ಮಾಡಿದ್ದ, ಸಂಬಂಧಿ ಎಂಬುದನ್ನೂ ನೋಡದೆ ಹತ್ಯೆ ಮಾಡಿದರು -ಪೊಲೀಸರು ಆರೋಪಿಗಳ ಬಂಧಿಸಿದರು

ಆದರೆ ಇದೇ ಹಂತಕ ಪಡೆ ಶರತ್ ನನ್ನು ಪ್ರಾಣಿಗಳಿಗಿಂತ ಕಡೆಯಾಗಿ ಮರ್ಡರ್ ಮಾಡಿರ್ತಾರೆ. ಕೈ ಕಾಲು ಕಟ್ಟಿ ಮನಸೋ ಇಚ್ಛೆ ಥಳಿಸಿ ಚಿತ್ರಹಿಂಸೆ ಕೊಟ್ಟಿರ್ತಾರೆ. ಕೈ ಕಾಲು ಕಟ್ಟಿದ ವ್ಯಕ್ತಿಯನ್ನ ಮರದ ತುಂಡಿನ ಕೆಳಗೆ ನೇತು ಹಾಕಿ ಕ್ರೂರತ್ವ ಮೆರೆದಿರುತ್ತಾರೆ. ಈ ರೀತಿ ಚಿತ್ರಹಿಂಸೆಗೊಳಗಾಗಿದ್ದ ಶರತ್​.

ಇಷ್ಟಕ್ಕೂ ಯಾರು ಈ ಶರತ್​ ಅಂದ್ರೆ… ಈತ ಬೆಂಗಳೂರಿನ ಕೋಣನಕುಂಟೆ ನಿವಾಸಿ. ಕೊಲೆ ಮಾಡಿದ್ದ ಅರೋಪಿ ಹಾಗೂ ಕೊಲೆಗೀಡಾಗಿದ್ದ ಯುವಕ ಇಬ್ಬರ ಹೆಸರುಗಳೂ ಶರತ್ ಅಂತಲೇ ಇರುತ್ತದೆ! ಇನ್ನು ಕೊಲೆ ಆರೋಪಿ ಶರತ್ ಚಿಕ್ಕಬಳ್ಳಾಪುರ ಮೂಲದವ. ಆರಂಭದಲ್ಲಿ ಈ ಕೇಸ್ ದಾಖಲಿಸಿಕೊಳ್ಳಲು ಪೊಲೀಸರು ನಕಾರ ಸೂಚಿಸುತ್ತಾರೆ.

ಹಾಗಾಗಿ ಕಬ್ಬನ್ ಪಾರ್ಕ್ ಪೊಲೀಸರು ಕೊಲೆಯಾದ ವಿಷಯ ತಿಳಿಯುತ್ತಿದಂತೆ 5 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿರುತ್ತಾರೆ. ನಿಖರ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದ ಕಬ್ಬನ್ ಪಾರ್ಕ್ ಪೊಲೀಸರು ಶರತ್, ಮಂಜುನಾಥ್, ಶ್ರೀಧರ್, ವೆಂಕಟಾಚಲಪತಿ ಮತ್ತು ಧನುಷ್ ಎಂಬ ಅರೋಪಿಗಳನ್ನು ಬಂಧಿಸುತ್ತಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:27 pm, Tue, 27 December 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ