AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ವಿಡಿಯೋ ಗೇಮ್ಸ್​ ಅಡ್ಡೆ ಮೇಲೆ ಸಿಸಿಬಿ ದಾಳಿ: ಇಬ್ಬರು ಮ್ಯಾನೇಜರ್​​ ಸೇರಿ 11 ಜನರ ಬಂಧನ

ಬೆಂಗಳೂರಿನ ರಾಜರಾಜೇಶ್ವರಿನಗರದ ರಘು ಆರ್ಕೆಡ್ ಬಿಲ್ಡಿಂಗ್​ ಮೇಲೆ ಸಿಸಿಬಿ ರೇಡ್​ ಮಾಡಿದ್ದು, 23 ವಿಡಿಯೋ ಗೇಮ್ಸ್​ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, 23 ವಿಡಿಯೋ ಗೇಮ್ ಯಂತ್ರಗಳ ಸಮೇತ 1.74 ಲಕ್ಷ ನಗದು ಜಪ್ತಿ ಮಾಡಿದ್ದಾರೆ. ಇಬ್ಬರು ಮ್ಯಾನೇಜರ್​​ ಸೇರಿದಂತೆ 11 ಆರೋಪಿಗಳನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ವಿಡಿಯೋ ಗೇಮ್ಸ್​ ಅಡ್ಡೆ ಮೇಲೆ ಸಿಸಿಬಿ ದಾಳಿ: ಇಬ್ಬರು ಮ್ಯಾನೇಜರ್​​ ಸೇರಿ 11 ಜನರ ಬಂಧನ
ವಿಡಿಯೋ ಗೇಮ್ಸ್​ ಅಡ್ಡೆ
ರಾಚಪ್ಪಾಜಿ ನಾಯ್ಕ್
| Edited By: |

Updated on: Feb 16, 2024 | 9:08 PM

Share

ಬೆಂಗಳೂರು, ಫೆಬ್ರವರಿ 16: ನಗರದಲ್ಲಿ ವಿಡಿಯೋ ಗೇಮ್ಸ್​ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ (CCB raid) ಮಾಡಿದ್ದು, ಬಂಧಿತರಿಂದ 23 ಲಕ್ಷ ಮೌಲ್ಯದ 23 ವಿಡಿಯೋ ಗೇಮ್ ಯಂತ್ರಗಳ ಸಮೇತ 1.74 ಲಕ್ಷ ನಗದು ಜಪ್ತಿ ಮಾಡಿದ್ದಾರೆ. ರಾಜರಾಜೇಶ್ವರಿನಗರದ ರಘು ಆರ್ಕೆಡ್ ಬಿಲ್ಡಿಂಗ್​ ಮೇಲೆ ಸಿಸಿಬಿ ರೇಡ್​ ಮಾಡಿದ್ದು, ಇಬ್ಬರು ಮ್ಯಾನೇಜರ್​​ ಸೇರಿದಂತೆ 11 ಆರೋಪಿಗಳನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ವಿಡಿಯೋ ಗೇಮ್ಸ್ ಅಡ್ಡೆ ಮ್ಯಾನೇಜರ್​ಗಳಾದ ನಿಖಿತ್, ಕೃಷ್ಣ ಬಂಧಿತರು. ಪ್ರಮುಖ ಆರೋಪಿಗಳಾದ ಪಂಚಲಿಂಗಯ್ಯ, ಆದರ್ಶನಿಗಾಗಿ ಹುಡುಕಾಟ ನಡೆಸಿದ್ದಾರೆ. ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರೇಸ್​ಕೋರ್ಸ್ ಮೇಲೆ ಸಿಸಿಬಿ ಪೊಲೀಸ್​ ದಾಳಿ

ಇತ್ತೀಚೆಗೆ ರೇಸ್​ಕೋರ್ಸ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ದಾಳಿ ವೇಳೆ 3 ಕೋಟಿ 47 ಲಕ್ಷ ರೂ. ಹಣ ವಶಕ್ಕೆ ಪಡೆದಿದ್ದರು. ರೇಸ್​ಕೋರ್ಸ್ ಮೇಲೆ ನಿಗದಿತ ದರಗಳಿಗಿಂತ ಹೆಚ್ಚಿನ ಬೆಲೆಗೆ ಟಿಕೆಟ್ ಮಾರಾಟ ಮಾಡಿರುವ ಆರೋಪ ಕೇಳಿಬಂದಿತ್ತು. ಹೀಗಾಗಿ ಸಿಸಿಬಿ ಅಧಿಕಾರಿಗಳು ಬುಕ್ಕಿಂಗ್ ಕೌಂಟರ್ ಮೇಲೆ ರೇಡ್ ಮಾಡಿದ್ದರು. ಸಿಬ್ಬಂದಿ ಹೊರ ಹೋಗದಂತೆ ಲಾಕ್ ಹಾಕಿ, ಪರಿಶೀಲನೆ ನಡೆಸಿದ್ದರು. ರೇಸ್​ಕೋರ್ಸ್ ಸಿಬ್ಬಂದಿ ಜಿಎಸ್​ಟಿ ಕಟ್ಟದೆ ವಂಚನೆ ಮಾಡಿದ್ದಾರೆ ಎನ್ನಲಾಗಿತ್ತು.

ಸ್ಪಾ ಮೇಲೆ ಸಿಸಿಬಿ ದಾಳಿ‌

ಬೆಂಗಳೂರಿನಲ್ಲಿ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿ 34 ಆರೋಪಿಗಳನ್ನ ಬಂಧಿಸಿದ್ದರು. ನಗರದ ಓಲ್ಡ್ ಮದ್ರಾಸ್ ರಸ್ತೆಯಲ್ಲಿ ಸ್ಪಾ ಮೇಲೆ ಸಿಸಿಬಿ ದಾಳಿ ನಡೆಸಿದ್ದರು. ಸ್ಪಾ ಹೆಸರಿಲ್ಲಿ ವೇಶ್ಯಾವಾಟಿಗೆ ನಡೆಸ್ತಿದ್ದದ್ದು ಬೆಳಕಿಗೆ ಬಂದಿತ್ತು. ಹೊರ ರಾಜ್ಯ ಮತ್ತು ವಿದೇಶದ ಯುವತಿಯರನ್ನ ಕರೆಸಿ ಇಲ್ಲಿ ದಂಧೆ ನಡೆಸಲಾಗ್ತಿತ್ತು. ದಾಳಿ ವೇಳೆ ಒಟ್ಟು 44 ಯುವತಿಯರನ್ನ ರಕ್ಷಣೆ ಮಾಡಲಾಗಿದ್ದು, 34 ಆರೋಪಿಗಳನ್ನ ವಶಕ್ಕೆ ಪಡೆಯಲಾಗಿತ್ತು.

ಇದನ್ನೂ ಓದಿ: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿದ್ದ ವೇಳೆ ಸಿಕ್ತು ನಕಲಿ ದಾಖಲೆ ಸೃಷ್ಟಿಸುತ್ತಿದ್ದವರ ಸುಳಿವು !

ನಿರ್ವಾಣ ಸ್ಪಾ ಹೆಸರಿನಲ್ಲಿ ಕಟ್ಟಡದ 1 ಮತ್ತು 6ನೇ ಫ್ಲೋರ್‌ನಲ್ಲಿ ದಂಧೆ ನಡೀತಿತ್ತು. ಈ ಖಚಿತ ಮಾಹಿತಿ ಪಡೆದ ಸಿಸಿಬಿಯ ಮಹಿಳಾ ಸಂರಕ್ಷಣಾ ದಳ ದಾಳಿ ನಡೆಸಿತ್ತು. ಹೊರ ರಾಜ್ಯದಿಂದ ಬಂದು ಬೆಂಗಳೂರಿನಲ್ಲಿ ಸ್ಪಾ ನಡೆಸ್ತಿದ್ದ ಆರೋಪಿ ಅನಿಲ್‌ನನ್ನ ಬಂಧಿಸಿ ವಿಚಾರಣೆ ನಡೆಸಲಾಗಿತ್ತು.

ಲೋಕಾಯುಕ್ತ ಬಲೆಗೆ ಬಿದ್ದ ಮುಖ್ಯ ಶಿಕ್ಷಕ

ಬೀದರ್: ನಗರದ ಶಹಪುರ ಗೇಟ್ ಬಳಿ ಇರುವ ಸ್ವಾಮೀ ವಿವೇಕಾನಂದ ಶಾಲೆಯ ಮುಖ್ಯ ಶಿಕ್ಷಕ ಲಂಚ ಸ್ವಿಕರಿಸುವಾಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಅದೇ ಶಾಲೆಯಲ್ಲಿ ಶಿಕ್ಷಕಿಯಾಗಿ ನಿವೃತ್ತಿ ಹೊಂದಿದ್ದ ಶಶಿಕಲಾರಿಂದ ಪೆನಷನ್ ಮಂಜೂರಿಗೆ ಫೈಲ್ ಮೂವ್ ಮಾಡಲು 3 ಲಕ್ಷ ರೂಪಾಯಿ ಹಣದ ಬೇಡಿಕೆ ಇಟ್ಟಿದ್ದ ಮುಖ್ಯ ಶಿಕ್ಷಕ ತುಕಾರಾಮ್ ಕಾಂಬ್ಳೆ.

ಇದನ್ನೂ ಓದಿ: ಅವಧಿ ಮುಗಿದ ಆಹಾರ ಪದಾರ್ಥಗಳನ್ನ ಮಾರಾಟ ಮಾಡ್ತಿದ್ದ ಅಂಗಡಿ‌ ಮೇಲೆ‌ ಸಿಸಿಬಿ ದಾಳಿ

50 ಸಾವಿರ ರೂಪಾಯಿ ಹಣ ಹಾಗೂ ಒಂದು ಲಕ್ಷ ರೂಪಾಯಿ ಚೇಕ್ ಪಡೆದುಕೊಳ್ಳುವಾಗಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಲೋಕಾಯುಕ್ತ ಡಿವೈಎಸ್ಪಿ ಎನ್.ಎಂ. ಓಲೇಕಾರ್ ನೆತೃತ್ವದಲ್ಲಿ ದಾಳಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ