AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಆಧಾರ್ ಕಾರ್ಡ್ ಬಳಸಿ ಭಾರತಕ್ಕೆ ಎಂಟ್ರಿ: ಬೆಂಗಳೂರಲ್ಲಿ ಮೂವರು ಅಕ್ರಮ ಬಾಂಗ್ಲಾ ವಲಸಿಗರ ಬಂಧನ

ಬೆಂಗಳೂರು ಹೊರವಲಯ ಬನ್ನೇರುಘಟ್ಟ ಪೊಲೀಸರು ನಕಲಿ ಆಧಾರ್ ಕಾರ್ಡ್ ಬಳಸಿ ಪಶ್ಚಿಮ ಬಂಗಾಳ ಮೂಲಕ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದ ಮೂರು ಬಾಂಗ್ಲಾ ವಲಸಿಗರನ್ನು ಬಂಧಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ಬಾಂಗ್ಲಾ ದೇಶದಿಂದ ಭಾರತಕ್ಕೆ ಅಸಾಮಿಗಳು ನುಸಿಳಿದ್ದರು.

ನಕಲಿ ಆಧಾರ್ ಕಾರ್ಡ್ ಬಳಸಿ ಭಾರತಕ್ಕೆ ಎಂಟ್ರಿ: ಬೆಂಗಳೂರಲ್ಲಿ ಮೂವರು ಅಕ್ರಮ ಬಾಂಗ್ಲಾ ವಲಸಿಗರ ಬಂಧನ
ಬಂಧಿತರು
ರಾಮು, ಆನೇಕಲ್​
| Edited By: |

Updated on: Dec 22, 2023 | 6:02 PM

Share

ಆನೇಕಲ್, ಡಿಸೆಂಬರ್​ 22: ನಕಲಿ ಆಧಾರ್ ಕಾರ್ಡ್ ಬಳಸಿ ಪಶ್ಚಿಮ ಬಂಗಾಳ ಮೂಲಕ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದ ಬಾಂಗ್ಲಾ (Bangladesh) ವಲಸಿಗರನ್ನು ಬೆಂಗಳೂರು ಹೊರವಲಯ ಬನ್ನೇರುಘಟ್ಟ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ರಫೀಕ್, ಸೈಫುಲಾ ಅಕ್ತರ್ ರೂಪ, ಮೊಹಮ್ಮದ್ ಮುಫೀಜ್ ಶೇಕ್ ಬಂಧಿತರು. ಏಜೆಂಟ್​ಗಳ ಮೂಲಕ ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ಭಾರತಕ್ಕೆ ಎಂಟ್ರಿ ನೀಡಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ಬಾಂಗ್ಲಾ ದೇಶದಿಂದ ಭಾರತಕ್ಕೆ ಅಸಾಮಿಗಳು ನುಸಿಳಿದ್ದರು.

ಕಳೆದ 18ನೇ ದಿನಾಂಕದಂದು ತಲಾಷ್ ಅಸೊಷಿಯೇಶನ್​ಗೆ ಓರ್ವ ಯುವತಿ ಪೋನ್ ಮಾಡಿದ್ದು, ಬಾಂಗ್ಲಾ ದೇಶದಿಂದ ಅಕ್ರಮವಾಗಿ ಕರೆಸಿಕೊಂಡು ಒತ್ತೆಯಾಳಾಗಿ ಇಟ್ಟುಕೊಂಡಿರುವ ಬಗ್ಗೆ ಮಾಹಿತಿ ನೀಡಿದ್ದಾಳೆ. ಸೈಫುಲಾ ಅಕ್ತರ್ ರೂಪ ಎಂಬಾಕೆಗೆ ಪೋನ್ ಮಾಡಿ ರಿಪಾ ಅಕ್ತರ್​ ಬಳಿ ಕೆಲಸ ಕೇಳಿದ್ದಾಳೆ. ಕೆಲಸ ಕೊಡಿಸುವ ನೆಪದಲ್ಲಿ ಕಳೆದ ಮೇ ತಿಂಗಳಿನಲ್ಲಿ ಬಾಂಗ್ಲಾದಿಂದ ಅಕ್ರಮವಾಗಿ ಕರೆಸಿಕೊಂಡಿದ್ದಾನೆ.

ಇದನ್ನೂ ಓದಿ: ಪತ್ನಿಯನ್ನ ಹತ್ಯೆಗೈದು ಠಾಣೆಗೆ ಬಂದು ಶರಣಾದ ಪತಿ! ಅನುಮಾನ ಎಂಬ ಪಿಶಾಚಿಗೆ ಬಲಿಯಾದ್ಲಾ ಹೆಂಡತಿ?

ಸಹಜಾನ್ ಎಂಬ ಏಜೆಂಟ್ ಮೂಲಕ ಅಕ್ರಮವಾಗಿ ಭಾರತಕ್ಕೆ ಬಂದಿದ್ದ ರಿಪಾ ಅಕ್ತರ್, ಇಂಡಿಯಾ ಬಾರ್ಡರ್ ಪೆಟ್ರಾಪುರ್ಗೆ ಬಂದು ಅಲ್ಲಿ ಏಜೆಂಟ್ ಸಂಪರ್ಕ ಮಾಡಿದ್ದಳೆ. ವೆಸ್ಟ್ ಬೆಂಗಾಲ್ ವಿಳಾಸ ನೀಡಿ ರೂಪಾ ಸಿಕ್ದರ್ ಎಂಬ ನಕಲಿ ಆಧಾರ್ ಕಾರ್ಡ್​ನ್ನು ಏಜೆಂಟ್​ ನೀಡಿದ್ದಾನೆ.

ರಿಪಾ ಅಕ್ತರ್ ಹೌರಾ ರೈಲ್ವೆ ನಿಲ್ದಾಣದಿಂದ ನಕಲಿ ಆಧಾರ್ ಕಾರ್ಡ್ ಬಳಸಿ ಬೆಂಗಳೂರಿಗೆ ಬಂದಿದ್ದಾಳೆ. ಅಲ್ಲಿಂದ ಬನ್ನೇರುಘಟ್ಟಕ್ಕೆ ಬಂದು ಸೈಫುಲಾ ಅಕ್ತರ್ ರೂಪ ಮನೆಯಲ್ಲಿ ವಾಸ ಮಾಡಿದ್ದಾಳೆ. ಕೆಲಸ ಕೊಡಿಸುವುದಾಗಿ ಕರೆಸಿಕೊಂಡು ಒತ್ತೆಯಾಳಾಗಿ ಇಟ್ಟುಕೊಂಡಿದ್ದಾನೆ. ಎರಡು ಲಕ್ಷ ರೂ. ಹಣ ನೀಡಿದರೆ ವಾಪಸ್ ಕಳುಹಿಸುವುದಾಗಿ ಬೇಡಿಕೆ ಇಟ್ಟಿದ್ದಾನೆ.

ಇದನ್ನೂ ಓದಿ: ಶಿವಮೊಗ್ಗ: ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಕತ್ತು ಸೀಳಿ ಎರಡನೇ ಪತ್ನಿಯ ಕೊಲೆ

ಈ ಬಗ್ಗೆ ರಿಪಾ ಅಕ್ತರ್ ತನ್ನ ಸಹೋದರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾಳೆ. ಬಳಿಕ ತಲಾಷ್ ಅಸೊಷಿಯೇಷನ್​ಗೆ ರಿಪಾ ಅಕ್ತರ್ ಸಹೋದರ ವಿಚಾರ ತಿಳಿಸಿದ್ದಾನೆ. ನೊಂದ ಯುವತಿಯನ್ನ ರಕ್ಷಣೆ ಮಾಡಿ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಆರೋಪಿಗಳನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ