AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮವಾಗಿ ಸಾಗಿಸ್ತಿದ್ದ 63.5 ಲಕ್ಷ ರೂ. ಮೌಲ್ಯದ ಡೈಮಂಡ್​, ವಿದೇಶಿ ಕರೆನ್ಸಿ ಜಪ್ತಿ, ಓರ್ವನ ಬಂಧನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್​ಪೋರ್ಟ್​​ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 63.5 ಲಕ್ಷ ಮೌಲ್ಯದ ಡೈಮಂಡ್​ ಮತ್ತು 9.2 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿಯನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಇಂಡಿಗೋ ಫ್ಲೈಟ್​ನಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಪ್ರಯಾಣಿಕ ಬಂದಿದ್ದ ಪ್ರಯಾಣಿಕನ ಬ್ಯಾಗ್ ಪರಿಶೀಲನೆ ವೇಳೆ 2348 ಕ್ಯಾರೆಟ್​ನ ವಿವಿಧ ವೆರೈಟಿಗಳ ರೂಬಿ ಮತ್ತು ಡೈಮಂಡ್ಸ್​ಗಳು ಪತ್ತೆ ಆಗಿದೆ.

ಅಕ್ರಮವಾಗಿ ಸಾಗಿಸ್ತಿದ್ದ 63.5 ಲಕ್ಷ ರೂ. ಮೌಲ್ಯದ ಡೈಮಂಡ್​, ವಿದೇಶಿ ಕರೆನ್ಸಿ ಜಪ್ತಿ, ಓರ್ವನ ಬಂಧನ
ಡೈಮಂಡ್ ಜಪ್ತಿ
Shivaprasad B
| Edited By: |

Updated on:Feb 26, 2024 | 5:07 PM

Share

ಬೆಂಗಳೂರು, ಫೆಬ್ರವರಿ 26: ಅಕ್ರಮವಾಗಿ ಸಾಗಿಸುತ್ತಿದ್ದ 63.5 ಲಕ್ಷ ಮೌಲ್ಯದ ಡೈಮಂಡ್ (diamond)​ ಮತ್ತು 9.2 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿಯನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್​ಪೋರ್ಟ್​​ನಲ್ಲಿ ಘಟನೆ ನಡೆದಿದೆ. ಅಧಿಕಾರಿಗಳು ದಾಳಿ ಮಾಡಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಇಂಡಿಗೋ ಫ್ಲೈಟ್​ನಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಪ್ರಯಾಣಿಕ ಬಂದಿದ್ದ. ಅನುಮಾನಗೊಂಡು ಪ್ರಯಾಣಿಕನ ಬ್ಯಾಗ್ ಪರಿಶೀಲನೆ ವೇಳೆ ಅಕ್ರಮವಾಗಿ 2348 ಕ್ಯಾರೆಟ್​ನ ವಿವಿಧ ವೆರೈಟಿಗಳ ರೂಬಿ ಮತ್ತು ಡೈಮಂಡ್ಸ್​ಗಳು ಪತ್ತೆ ಆಗಿದ್ದು ವಶಕ್ಕೆ ಪಡೆಯಲಾಗಿದೆ. ಸದ್ಯ ಪ್ರಯಾಣಿಕನ ಬಂಧನ ಮಾಡಿದ್ದು ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

ಏರ್​​ಪೋರ್ಟ್​​ನಲ್ಲಿ ಕಸ್ಟಮ್ಸ್​ ಅಧಿಕಾರಿಗಳ ಕಾರ್ಯಾಚರಣೆ ಮಾಡಿ 3 ಪ್ರತ್ಯೇಕ ಪ್ರಕರಣಗಳಲ್ಲಿ 1 ಕೆಜಿ 166 ಗ್ರಾಂ ಚಿನ್ನ ವಶಕ್ಕೆ ಪಡೆದುಕೊಂಡಿದ್ದಾರೆ. 72.67 ಲಕ್ಷ ರೂ. ಮೌಲ್ಯದ 1.66 ಕೆಜಿ ಚಿನ್ನ ಜಪ್ತಿ ಮಾಡಿದ್ದಾರೆ. ಐವರು ಆರೋಪಿಗಳಿಂದ ಲಗೇಜ್ ಬ್ಯಾಗ್, ಪೇಸ್ಟ್ ರೂಪದಲ್ಲಿ ಸಾಗಿಸುತ್ತಿದ್ದಾಗ ಜಪ್ತಿ ಮಾಡಲಾಗಿದೆ. ಕೊಲಂಬೋದಿಂದ ಅಕ್ರಮವಾಗಿ ಸಾಗಿಸುತ್ತಿದ್ದರು. ಓರ್ವ ಶ್ರೀಲಂಕಾ ಪ್ರಜೆ, ನಾಲ್ವರು ವಿದೇಶಿಗರಿಂದ ಸಾಗಾಟ ಮಾಡಲಾಗಿದ್ದು, ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ಲಾಸ್ಕ್​ನಲ್ಲಿ ಮರೆ ಮಾಚಿ ಸಾಗಿಸುತ್ತಿದ್ದ ಅಕ್ರಮ ಚಿನ್ನ ವಶಕ್ಕೆ

ಸೌದಿ ಅರೇಬಿಯಾದ ಜೀದಾ ಏರ್ಪೋಟ್​ನಿಂದ ಅಕ್ರಮವಾಗಿ ಪ್ಲಾಸ್ಕ್​ನಲ್ಲಿ ಚಿನ್ನ ಮರೆಮಾಚಿ ಸ್ಮಗ್ಲಿಂಗ್ ಮಾಡಲು ಯತ್ನಿಸಿದ ವ್ಯಕ್ತಿಯನ್ನ ಕೆಂಪೇಗೌಡ ಏರ್ಪೋಟ್ ಕಸ್ಟಮ್ಸ್​ ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೌದಿ ಅರೇಬಿಯಾದಿಂದ ಆಗಮಿಸಿದ ಪ್ರಯಾಣಿಕ ಪ್ಲಾಸ್ಕ್ ನ ಒಳ ಭಾಗದಲ್ಲಿ ಪೇಸ್ಟ್ ಮಾದರಿಯಲ್ಲಿ ಚಿನ್ನವನ್ನ ಹಾಕಿ ಲಗೇಜ್​ನಲ್ಲಿ ಮರೆ ಮಾಚಿದ್ದ. ಹೀಗಾಗಿ ಏರ್ಪೋಟ್ ನಲ್ಲಿ ಲಗೇಜ್ ಚೆಕ್ ಮಾಡುವ ವೇಳೆ ಪ್ಲಾಸ್ಕ್ ನ ಮೇಲೆ ಅನುಮಾನ ಬಂದಿದ್ದು ಪ್ಲಾಸ್ಕ್ ಅನ್ನ ಹೊಡೆದು ನೋಡಿದಾಗ ಒಳಗಡೆ ಚಿನ್ನ ಮರೆ ಮಚಿರುವುದು ಬೆಳಕಿಗೆ ಬಂದಿತ್ತು.

ಇದನ್ನೂ ಓದಿ: ವಶಪಡಿಸಿಕೊಂಡ ಡ್ರಗ್ಸ್​, ಗಾಂಜಾವನ್ನ ಪೋಲೀಸರು ಏನ್ಮಾಡ್ತಾರೆ! ಇಲ್ಲಿದೆ ವಿವರ

ಪೇಸ್ಟ್ ಮಾಡಿದ್ದ ಚಿನ್ನವನ್ನ ತೆಗೆದು ನೋಡಿದಾಗ 7 ಲಕ್ಷ 52 ಸಾವಿರ ರೂ. ಮೌಲ್ಯದ 122 ಗ್ರಾಂ ಚಿನ್ನ ಸಿಕ್ಕಿದ್ದು ಚಿನ್ನ ಸಮೇತ ಪ್ರಯಾಣಿಕನನ್ನ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಮತ್ತೊಂದೆಡೆ ಬ್ಯಾಂಕಾಕ್ ನಿಂದ ಇಂದು ಬೆಳಗ್ಗೆ ಕೆಂಪೇಗೌಡ ಏರ್ಪೋಟ್ ಗೆ ಬಂದ ಪ್ರಯಾಣಿಕ ಬ್ಯಾಗ್​ನಲ್ಲಿ ಕೋಬ್ರಾ ಸಾಗಿಸುತ್ತಿರುವುದು ಬೆಳಕಿಗೆ ಬಂದಿತ್ತು.

ಇದನ್ನೂ ಓದಿ: ಬೆಂಗಳೂರು, ಹೈದರಾಬಾದ್​ ಏರ್​ಪೋರ್ಟ್​ಗಳಲ್ಲಿ 13 ಕೋಟಿ ರೂ. ಮೌಲ್ಯದ ವಜ್ರ, ವಿದೇಶಿ ಕರೆನ್ಸಿ ಜಪ್ತಿ: ನಾಲ್ವರು ವಶಕ್ಕೆ

ಬ್ಯಾಗ್ ನಲ್ಲಿದ್ದ ಬಾಟಲ್ ಹೊರಗಡೆ ತೆಗೆದಾಗ ಬಾಟಲ್ ನಲ್ಲಿ ಹಾವು ಇರುವುದು ಪತ್ತೆಯಾಗಿದ್ದು ವಾಸ್ತುಗಾಗಿ ಹಾವನ್ನ ತೆಗೆದುಕೊಂಡು ಬಂದಿದ್ದಾಗಿ ಪ್ರಯಾಣಿಕ ಹೇಳಿದ್ದಾನೆ. ಆದರೆ ದೆಶದಲ್ಲಿ ಪ್ರಾಣಿಗಳ ಸಾಗಾಟ ನಿಷೇದವಾಗಿರುವ ಕಾರಣ ಹಾವಿನ ಬಾಟಲ್ ಸಮೇತ ಪ್ರಯಾಣಿಕನನ್ನ ಅಧಿಕಾರಿಗಳು ಅರಣ್ಯ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಿದ್ದರು.

ಮತ್ತಷ್ಟು ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:03 pm, Mon, 26 February 24

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು