AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸ್ಪಾ ಹೆಸರಲ್ಲಿ ನಡೆಯುತ್ತಿದೆಯಾ ವೇಶ್ಯಾವಾಟಿಕೆ? ಸ್ಪಾ ವಿರುದ್ಧ ಮಹಿಳಾ ಸಿಬ್ಬಂದಿಯಿಂದಲೇ ದೂರು

ಬೆಂಗಳೂರಿನಲ್ಲಿ ಎಗ್ಗಿಲ್ಲದೆ ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ಅಡ್ಡೆ ನಡೆಸಲಾಗುತ್ತಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಔಟ್ ಲೆಟ್ ಮ್ಯಾನೇಜರ್ ರಂಜಿತಾ ಎಂಬುವವರಿಂದ ವೀರಣ್ಣ ಪಾಳ್ಯದಲ್ಲಿರುವ ತತ್ವಾ ಸ್ಪಾ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ಮಾಡಲಾಗುತ್ತಿದೆ. 

ಬೆಂಗಳೂರಿನಲ್ಲಿ ಸ್ಪಾ ಹೆಸರಲ್ಲಿ ನಡೆಯುತ್ತಿದೆಯಾ ವೇಶ್ಯಾವಾಟಿಕೆ? ಸ್ಪಾ ವಿರುದ್ಧ ಮಹಿಳಾ ಸಿಬ್ಬಂದಿಯಿಂದಲೇ ದೂರು
ಪ್ರಾತಿನಿಧಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on:Jan 10, 2024 | 5:26 PM

Share

ಬೆಂಗಳೂರು, ಜನವರಿ 10: ನಗರದಲ್ಲಿ ಎಗ್ಗಿಲ್ಲದೆ ಸ್ಪಾ (spa) ಹೆಸರಲ್ಲಿ ವೇಶ್ಯಾವಾಟಿಕೆ ಅಡ್ಡೆ ನಡೆಸಲಾಗುತ್ತಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಇದೀಗ ಮತ್ತೊಂದು ಸ್ಪಾ ವಿರುದ್ಧ ಮಹಿಳಾ ಸಿಬ್ಬಂದಿಯಿಂದಲೇ ದೂರು ನೀಡಲಾಗಿದೆ. ಔಟ್ ಲೆಟ್ ಮ್ಯಾನೇಜರ್ ರಂಜಿತಾ ಎಂಬುವವರಿಂದ ವೀರಣ್ಣ ಪಾಳ್ಯದಲ್ಲಿರುವ ತತ್ವಾ ಸ್ಪಾ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ಮಾಡಲಾಗುತ್ತಿದೆ.

ಸ್ಪಾ ಸೌತ್ ಇಂಡಿಯಾ ರೀಜನಲ್​ ಮುಖ್ಯಸ್ಥ ಪ್ರವೀಣ್ ಮತ್ತು ಬೆಂಗಳೂರು ಮುಖ್ಯಸ್ಥ ರಿಶೈ ವಿರುದ್ಧ ದೂರು ನೀಡಿದ್ದು, ಬರುವ ಗ್ರಾಹಕರಿಗೆ ಹೆಚ್ಚಿನ ಸರ್ವಿಸ್ ಕೊಡುವಂತೆ, ಅಲ್ಲದೆ ಹುಡುಗಿಯರನ್ನ ಕಳುಹಿಸಿಕೊಡುವಂತೆ ಒತ್ತಡ ಆರೋಪ ಮಾಡಲಾಗಿದೆ.

ಇದನ್ನೂ ಓದಿ: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿದ್ದ ವೇಳೆ ಸಿಕ್ತು ನಕಲಿ ದಾಖಲೆ ಸೃಷ್ಟಿಸುತ್ತಿದ್ದವರ ಸುಳಿವು !

ಮುಖ್ಯಸ್ಥ ಪ್ರವೀಣ್ ವಿರುದ್ಧ ಮೈ‌ ಕೈ ಮುಟ್ಟಿ ಬಲವಂತದಿಂದ ತಬ್ಬಿಕೊಂಡ ಮತ್ತು ರಿಶೈ ಬಲವಂತವಾಗಿ ರೂಮ್​ಗೆ ಕರೆದುಕೊಂಡು ಹೋದ ಆರೋಪ ಮಾಡಲಾಗಿದೆ. ಇದರಿಂದ ನೊಂದು ರಂಜಿತ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ಬರುವ ಗ್ರಾಹರ ಜೊತೆಗೆ ಸಹಕರಿಸು, ಅವರು ಶ್ರೀಮಂತರಿರುತ್ತಾರೆ. ನಿನ್ನ ಲೈಫ್ ಸೆಟಲ್ ಆಗುತ್ತೆ ಎಂಬ ಆರೋಪ ಕೂಡ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಮಸಾಜ್ ಪಾರ್ಲರ್​​​​ನಲ್ಲಿ ವೇಶ್ಯಾವಾಟಿಕೆ; 44 ಮಹಿಳೆಯರ ರಕ್ಷಣೆ, 34 ಆರೋಪಿಗಳು ವಶಕ್ಕೆ

ಇತ್ತೀಚೆಗೆ ನಗರದಲ್ಲಿ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಓಲ್ಡ್ ಮದ್ರಾಸ್ ರಸ್ತೆಯ ನಿರ್ವಾಣ ಸ್ಪಾ ಮೇಲೆ ಸಿಸಿಬಿ ಪೊಲೀಸರು ದಾಳಿ‌ ನಡೆಸಿ, ಪರಿಶೀಲನೆ ಮಾಡಿದ್ದರು. ಈ ವೇಳೆ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿತ್ತು. ಹೊರ ರಾಜ್ಯ, ವಿದೇಶದ ಯುವತಿಯರನ್ನು ಕರೆಸಿ ದಂಧೆ ನಡೆಸಲಾಗುತ್ತಿತ್ತು ಎಂಬ ಬಗ್ಗೆ ಮಾಹಿತಿ ಸಿಕ್ಕಿತ್ತು. ದಾಳಿ ವೇಳೆ ಒಟ್ಟು 44 ಮಹಿಳೆಯರ ರಕ್ಷಣೆ ಮಾಡಲಾಗಿದ್ದು 34 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:22 pm, Wed, 10 January 24

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!