AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸ್ಪಾ ಹೆಸರಲ್ಲಿ ನಡೆಯುತ್ತಿದೆಯಾ ವೇಶ್ಯಾವಾಟಿಕೆ? ಸ್ಪಾ ವಿರುದ್ಧ ಮಹಿಳಾ ಸಿಬ್ಬಂದಿಯಿಂದಲೇ ದೂರು

ಬೆಂಗಳೂರಿನಲ್ಲಿ ಎಗ್ಗಿಲ್ಲದೆ ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ಅಡ್ಡೆ ನಡೆಸಲಾಗುತ್ತಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಔಟ್ ಲೆಟ್ ಮ್ಯಾನೇಜರ್ ರಂಜಿತಾ ಎಂಬುವವರಿಂದ ವೀರಣ್ಣ ಪಾಳ್ಯದಲ್ಲಿರುವ ತತ್ವಾ ಸ್ಪಾ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ಮಾಡಲಾಗುತ್ತಿದೆ. 

ಬೆಂಗಳೂರಿನಲ್ಲಿ ಸ್ಪಾ ಹೆಸರಲ್ಲಿ ನಡೆಯುತ್ತಿದೆಯಾ ವೇಶ್ಯಾವಾಟಿಕೆ? ಸ್ಪಾ ವಿರುದ್ಧ ಮಹಿಳಾ ಸಿಬ್ಬಂದಿಯಿಂದಲೇ ದೂರು
ಪ್ರಾತಿನಿಧಿಕ ಚಿತ್ರ
Follow us
ರಾಚಪ್ಪಾಜಿ ನಾಯ್ಕ್
| Updated By: ಗಂಗಾಧರ​ ಬ. ಸಾಬೋಜಿ

Updated on:Jan 10, 2024 | 5:26 PM

ಬೆಂಗಳೂರು, ಜನವರಿ 10: ನಗರದಲ್ಲಿ ಎಗ್ಗಿಲ್ಲದೆ ಸ್ಪಾ (spa) ಹೆಸರಲ್ಲಿ ವೇಶ್ಯಾವಾಟಿಕೆ ಅಡ್ಡೆ ನಡೆಸಲಾಗುತ್ತಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಇದೀಗ ಮತ್ತೊಂದು ಸ್ಪಾ ವಿರುದ್ಧ ಮಹಿಳಾ ಸಿಬ್ಬಂದಿಯಿಂದಲೇ ದೂರು ನೀಡಲಾಗಿದೆ. ಔಟ್ ಲೆಟ್ ಮ್ಯಾನೇಜರ್ ರಂಜಿತಾ ಎಂಬುವವರಿಂದ ವೀರಣ್ಣ ಪಾಳ್ಯದಲ್ಲಿರುವ ತತ್ವಾ ಸ್ಪಾ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ಮಾಡಲಾಗುತ್ತಿದೆ.

ಸ್ಪಾ ಸೌತ್ ಇಂಡಿಯಾ ರೀಜನಲ್​ ಮುಖ್ಯಸ್ಥ ಪ್ರವೀಣ್ ಮತ್ತು ಬೆಂಗಳೂರು ಮುಖ್ಯಸ್ಥ ರಿಶೈ ವಿರುದ್ಧ ದೂರು ನೀಡಿದ್ದು, ಬರುವ ಗ್ರಾಹಕರಿಗೆ ಹೆಚ್ಚಿನ ಸರ್ವಿಸ್ ಕೊಡುವಂತೆ, ಅಲ್ಲದೆ ಹುಡುಗಿಯರನ್ನ ಕಳುಹಿಸಿಕೊಡುವಂತೆ ಒತ್ತಡ ಆರೋಪ ಮಾಡಲಾಗಿದೆ.

ಇದನ್ನೂ ಓದಿ: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿದ್ದ ವೇಳೆ ಸಿಕ್ತು ನಕಲಿ ದಾಖಲೆ ಸೃಷ್ಟಿಸುತ್ತಿದ್ದವರ ಸುಳಿವು !

ಮುಖ್ಯಸ್ಥ ಪ್ರವೀಣ್ ವಿರುದ್ಧ ಮೈ‌ ಕೈ ಮುಟ್ಟಿ ಬಲವಂತದಿಂದ ತಬ್ಬಿಕೊಂಡ ಮತ್ತು ರಿಶೈ ಬಲವಂತವಾಗಿ ರೂಮ್​ಗೆ ಕರೆದುಕೊಂಡು ಹೋದ ಆರೋಪ ಮಾಡಲಾಗಿದೆ. ಇದರಿಂದ ನೊಂದು ರಂಜಿತ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ಬರುವ ಗ್ರಾಹರ ಜೊತೆಗೆ ಸಹಕರಿಸು, ಅವರು ಶ್ರೀಮಂತರಿರುತ್ತಾರೆ. ನಿನ್ನ ಲೈಫ್ ಸೆಟಲ್ ಆಗುತ್ತೆ ಎಂಬ ಆರೋಪ ಕೂಡ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಮಸಾಜ್ ಪಾರ್ಲರ್​​​​ನಲ್ಲಿ ವೇಶ್ಯಾವಾಟಿಕೆ; 44 ಮಹಿಳೆಯರ ರಕ್ಷಣೆ, 34 ಆರೋಪಿಗಳು ವಶಕ್ಕೆ

ಇತ್ತೀಚೆಗೆ ನಗರದಲ್ಲಿ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಓಲ್ಡ್ ಮದ್ರಾಸ್ ರಸ್ತೆಯ ನಿರ್ವಾಣ ಸ್ಪಾ ಮೇಲೆ ಸಿಸಿಬಿ ಪೊಲೀಸರು ದಾಳಿ‌ ನಡೆಸಿ, ಪರಿಶೀಲನೆ ಮಾಡಿದ್ದರು. ಈ ವೇಳೆ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿತ್ತು. ಹೊರ ರಾಜ್ಯ, ವಿದೇಶದ ಯುವತಿಯರನ್ನು ಕರೆಸಿ ದಂಧೆ ನಡೆಸಲಾಗುತ್ತಿತ್ತು ಎಂಬ ಬಗ್ಗೆ ಮಾಹಿತಿ ಸಿಕ್ಕಿತ್ತು. ದಾಳಿ ವೇಳೆ ಒಟ್ಟು 44 ಮಹಿಳೆಯರ ರಕ್ಷಣೆ ಮಾಡಲಾಗಿದ್ದು 34 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:22 pm, Wed, 10 January 24

ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ