AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾರ್​ನಲ್ಲಿ ಜೋರಾಗಿ ಮಾತನಾಡಬೇಡಿ ಎಂದಿದ್ದಕ್ಕೆ ಯುವಕ ಕೊಲೆ

ಬಾರ್‌ನಲ್ಲಿ ಜೋರಾಗಿ ಮಾತನಾಡಬೇಡಿ ಎಂದಿದ್ದ ಯುವಕನನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬನ್ನೇರುಘಟ್ಟ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಇದರಲ್ಲಿ ಒಬ್ಬ ಬಾಲಕನೂ ಸೇರಿದ್ದಾನೆ. ಕಾಂತಿಕುಮಾರ್, ಗೋಪಾಲ್, ಕಿರಣ್ ಕುಮಾರ್ ಮತ್ತು ಬಾಲಕನನ್ನು ಬಂಧಿಸಲಾಗಿದೆ.ಮತ್ತೊಬ್ಬ ಆರೋಪಿ ವಿನೋದ್ ಪರಾರಿಯಾಗಿದ್ದಾನೆ. ಪೊಲೀಸರು ಅವನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಬಾರ್​ನಲ್ಲಿ ಜೋರಾಗಿ ಮಾತನಾಡಬೇಡಿ ಎಂದಿದ್ದಕ್ಕೆ ಯುವಕ ಕೊಲೆ
ಬಂಧಿತ ಆರೋಪಿಗಳು
ರಾಮು, ಆನೇಕಲ್​
| Updated By: ವಿವೇಕ ಬಿರಾದಾರ|

Updated on: Apr 27, 2025 | 4:32 PM

Share

ಆನೇಕಲ್, ಏಪ್ರಿಲ್​ 27: ಬಾರ್​ನಲ್ಲಿ (Bar) ಜೋರಾಗಿ ಮಾತನಾಡಬೇಡಿ ಎಂದಿದ್ದಕ್ಕೆ ಯುವಕನನ್ನು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಕ ಸೇರಿದಂತೆ ನಾಲ್ವರು ಆರೋಪಿಗಳನ್ನು ಬನ್ನೇರುಘಟ್ಟ ಪೊಲೀಸರು (Bannerghatta Police) ಬಂಧಿಸಿದ್ದಾರೆ. ಕೆಂಚಗಯ್ಯನದೊಡ್ಡಿ ವಾಸಿ ಕಾಂತಿಕುಮಾರ್ ಅಲಿಯಾಸ್​ ಸೈಕೋ ಕಾಂತಿ (27), ಗೋಪಾಲ್ ಅಲಿಯಾಸ್​ ಗೊಬ್ಬು ರಾಜ (40), ಕಿರಣ್ ಕುಮಾರ್ ಅಲಿಯಾಸ್​ ಸಫೀನ್ಸ್ (28) ಮತ್ತು ಓರ್ವ ಬಾಲಕ ಬಂಧಿತರು. ಮತ್ತೊರ್ವ ಆರೋಪಿ ವಿನೋದ್ (30) ಗಾಗಿ ಪೊಲೀಸರು ಹುಡುಗಾಟ ನಡೆಸಿದ್ದಾರೆ.

ಶ್ಯಾನುಬೋಗನಹಳ್ಳಿ ತರಂಗಿಣಿ ಬಾರ್​ನಲ್ಲಿ ಮೃತ ಸುರೇಶ್ ಜೋರಾಗಿ ಮಾತನಾಡಬೇಡಿ, ಸೈಲೆಂಟ್​ ಆಗಿ ಇರಿ ಎಂದಿದ್ದಾರೆ. ಇಷ್ಟಕ್ಕೆ ಸುರೇಶ್ ಅವರ ಮನೆಗೆ ನುಗ್ಗಿದ್ದ ಆರೋಪಿಗಳು, ಆತನ ಹೆಂಡತಿ ಮಕ್ಕಳ ಮುಂದೆಯೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಬನ್ನೇರುಘಟ್ಟ ಪೊಲೀಸರು ಕೊಲೆ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.

ಪತ್ನಿಯಿಂದ ಪತಿಯ ಕೊಲೆ ಯತ್ನ

ವಿಜಯಪುರ: ಪತ್ನಿಯೇ ಪತಿಯ ಕತ್ತಿಗೆ ಚಾಕುವಿಂದ ಚುಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ರವಿವಾರ (ಏ.27) ನಸುಕಿನ ಜಾವ ನಗರದ ಆಲಕುಂಟೆ ನಗರದ ನಿವಾಸಿ ತೇಜು ರಾಠೋಡ್ ಎಂಬುವರು, ತನ್ನ ಪತಿ ಅಜೀತ್ ರಾಠೋಡ್ ಅವರನ್ನು ಕೊಲೆ ಮಾಡಲು ಮುಂದಾದರು. ಪತಿ ಗಾಢ ನಿದ್ದೆಯಲ್ಲಿದ್ದಾಗ ಚಾಕೂನಿಂದ ಕತ್ತಿಗೆ ಬಲವಾಗಿ ಇರಿದಿದ್ದಾರೆ. ಆಗ ಅಜೀತ್ ಕಿರುಚಿಕೊಂಡಾಗ ಮನೆಯವರಿಗೆ ವಿಷಯ ಗೊತ್ತಾಗಿದೆ. ಕೂಡಲೇ ಅಜೀತ್ ಅವರನ್ನು ನಗರ ಬಿಎಲ್​ಡಿಇ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಅಜೀತ್ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ
Image
ಇನ್ಸ್ಟಾಗ್ರಾಮ್​ನಲ್ಲಿ ರಾಯಚೂರು-ಚಾಮರಾಜನಗರ ನಂಟು: ಯುವತಿ ಕೊರಳಿಗೆ 3 ಗಂಟು!
Image
ಗದಗ: ವಿಡಿಯೋ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್, ಯುವತಿ ಆತ್ಮಹತ್ಯೆ
Image
ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಮಂಗಳಮುಖಿಯ ಬರ್ಬರ ಹತ್ಯೆ
Image
ಪ್ರೀತಿ ದೈಹಿಕ ಸಂಪರ್ಕಕ್ಕೆ ತಿರುಗಿ ಮಗು ಜನನ: ಕಸದ ಬುಟ್ಟಿಗೆ ಶಿಶು!

ಪತ್ನಿ ತೇಜುಗೆ ಬುದ್ದಿಮಾತು ಹೇಳಿದ್ದೇ ಅಜೀತ್ ಪ್ರಾಣಕ್ಕೆ ಸಂಚಕಾರ ತಂದಿದೆ ಎನ್ನಲಾಗಿದೆ. ಸದಾ ಕಾಲ ಮೊಬೈಲ್​ನಲ್ಲಿ ಬೇರೆಯವರೊಂದಿಗೆ ಚಾಟ್ ಮಾಡುತ್ತಿದ್ದ ಪತ್ನಿ ತೇಜು ಅವರಿಗೆ “ಚಾಟ್ ಮಾಡಬೇಡ ಎಂದು ಪತಿ ಅಜೀತ್ ಬುದ್ದಿಮಾತು ಹೇಳಿದ್ದಾರೆ. ಇಷ್ಟಕ್ಕೆ ಪತ್ನಿ ತೇಜು ಪತಿ ಅಜೀತ್ ಮೇಲೆ ಸಿಟ್ಟಾಗಿ ಇಂತ ದುಸ್ಸಾಹಸ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ನನ್ನ ಗಂಡ ಒಳ್ಳೆಯವನೆ ಆದ್ರೆ….: ಡೆತ್ ನೊಟ್​ ಬರೆದಿಟ್ಟು ನವವಿವಾಹಿತೆ ಆತ್ಮಹತ್ಯೆ

ಇತರರೊಂದಿಗೆ ಮೊಬೈಲ್​ನಲ್ಲಿ ಚಾಟ್ ಮಾಡುತ್ತಾ ಕಾಲ ಕಳೆಯುತ್ತಿದ್ದ ಪತ್ನಿಯ ನಡೆ ಅಜೀತ್ ರಾಠೋಡ್ ಅವರಿಗೆ ಸರಿ ಬರುತ್ತಿರಲಿಲ್ಲ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಅಜೀತ್ ಅವರನ್ನು ಕೊಲೆ ಮಾಡಲು ಪತ್ನಿ ತೇಜು ಯತ್ನಿಸಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಬಸವರಾಜ ಯಲಿಗಾರ ಹಾಗೂ ಇತರೆ ಆಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು, ಆದರ್ಶನಗರ ಪೊಲೀಸರು ಪತ್ನಿ ತೇಜುರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರ ತನಿಖೆಯಲ್ಲಿ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ. ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ