AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಯುವಕನನ್ನು ಸುಲಿಗೆ ಮಾಡಿದ್ದ ಹನಿಟ್ರ್ಯಾಪ್​ ಗ್ಯಾಂಗ್​ ಅರೆಸ್ಟ್​: ಆರೋಪಿಗಳಿಂದ ಚಿನ್ನದ ಸರ, iPhone ವಶ

ಹನಿಟ್ರ್ಯಾಪ್ ಮುಖಾಂತರ​ ಯುವಕನನ್ನು ಸಲಿಗೆ ಮಾಡಿದ್ದ ಗ್ಯಾಂಗ್​​ ಅನ್ನು ಬನ್ನೇರುಘಟ್ಟ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಯುವಕನನ್ನು ಸುಲಿಗೆ ಮಾಡಿದ್ದ ಹನಿಟ್ರ್ಯಾಪ್​ ಗ್ಯಾಂಗ್​ ಅರೆಸ್ಟ್​: ಆರೋಪಿಗಳಿಂದ ಚಿನ್ನದ ಸರ, iPhone ವಶ
ಬಂಧಿತ ಆರೋಪಿಗಳು
ವಿವೇಕ ಬಿರಾದಾರ
|

Updated on: Mar 27, 2023 | 10:34 PM

Share

ಆನೇಕಲ್: ಬೆಂಗಳೂರಲ್ಲಿ ದಿನದಿಂದ ದಿನಕ್ಕೆ ಹನಿಟ್ರ್ಯಾಪ್​ ಪ್ರಕರಣಗಳು ಹೆಚ್ಚುತ್ತಿವೆ. ಹನಿಟ್ರ್ಯಾಪ್ (Honeytrap) ಮುಖಾಂತರ​ ಯುವಕನನ್ನು ಸಲಿಗೆ ಮಾಡಿದ್ದ ಗ್ಯಾಂಗ್​​ ಅನ್ನು ಬನ್ನೇರುಘಟ್ಟ ಪೊಲೀಸರು (Bannerghatta Police) ಬಂಧಿಸಿದ್ದಾರೆ. ರುತಿಕ್ ಅಲಿಯಾಸ್ ವಿಷ್ಣು, ಮೊ.‌ಆಸಿಫ್, ಯಾಸೀನ್ ಪಾಷಾ, ಸಮೀರ್, ಶಾಹಿದ್ ಅಲಿ ಬಂಧಿತ ಆರೋಪಿಗಳು. ರುತಿಕ್​ ಯುವತಿಯೋರ್ವಳನ್ನು ಪರಿಚಯ ಮಾಡಿಕೊಂಡಿದ್ದಾನೆ. ನಂತರ ಹೇಗೊ ಆಕೆಯ ಇನ್ಸಾಟ್​ಗ್ರಾಂ ಐಡಿ, ಪಾಸ್ವರ್ಡ್​​ ಪಡೆದಿದ್ದಾನೆ.

ನಂತರ ಆಕೆಯ ಐಡಿ ಮುಖಾಂತರ ಶಶಾಂಕ್‌ ಎಂಬ ಯುವಕನಿಗೆ ಮೆಸೆಜ್​ ಮಾಡಿದ್ದಾನೆ. ಹೀಗೆ ಮೆಸೆಜ್​ ಮಾಡುತ್ತಾ ದಿನಗಳು ಉರಿಳಿವೆ. ಅದು 2023ರ ಜನವರಿ 12, ರುತಿಕ್​ ಭೇಟಿಯಾಗು ಎಂದು ಶಶಾಂಕ್​ಗೆ ಮೆಸೆಜ್​ ಮಾಡಿದ್ದಾನೆ. ಮೀಟ್​ ಆಗಲು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟ ಹಕ್ಕಿಪಿಕ್ಕಿ ಬಂಡೆ‌ ಬಳಿ ಬರುವಂತೆ ಹೇಳಿದ್ದಾನೆ.

ಇದನ್ನೂ ಓದಿ: ಹನಿಟ್ರ್ಯಾಪ್ ಜಾಲದಲ್ಲಿ ಸಿಲುಕಿದ ಉದ್ಯಮಿ, ದೂರು ದಾಖಲು

ಇದರಂತೆ ಶಶಾಂಕ್​ ಭೇಟಿಯಾಗಲು ಜೆಪಿ ನಗರದಿಂದ ಬಂದಿದ್ದನು. ಈ ವೇಳೆ ರುತಿಕ್​​, ಶಶಾಂಕ್​ನ್ನು ಭೇಟಿಯಾಗಲು ಯುವತಿಯನ್ನು ಕಳೆಸಿದ್ದಾನೆ. ಇಬ್ಬರೂ ಭೇಟಿಯಾಗುವ ಹೊತ್ತಲ್ಲಿ, ಹಿಂದೆಯೇ ಬಂದ ನಾಲ್ವಾರು ನೀವೇನು ಮಾಡುತ್ತಿದ್ದೀರಾ ಇಲ್ಲಿ ಅಂತ ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ. ನಂತರ ಶಶಾಂಕ್​ ಬಳಿ ಇದ್ದ ಚಿನ್ನದ ಸರ ಮತ್ತು ಐ ಫೋನ್ ಕಿತ್ತುಕೊಂಡು ಗ್ಯಾಂಗ್ ಪರಾರಿಯಾಗಿದ್ದಾರೆ. ದೂರು ದಾಖಲಿಸಿಕೊಂಡಿದ್ದ ಬನ್ನೇರುಘಟ್ಟ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಗಳಿಂದ ಚಿನ್ನದ ಸರ ಹಾಗೂ ಐ ಫೋನ್ ವಶ ಪಡಿಸಿಕೊಂಡಿದ್ದಾರೆ.

ಬೇಗೂರು ಪೊಲೀಸರಿಂದ ಕುಖ್ಯಾತ ಹನಿಟ್ರ್ಯಾಪ್​ ಗ್ಯಾಂಗ್​​ ಅರೆಸ್ಟ್

ಇಬ್ಬರು ಮಹಿಳೆಯರು ಸೇರಿ ನಾಲ್ವರು ಕುಖ್ಯಾತ ಹನಿಟ್ರ್ಯಾಪ್ ಗ್ಯಾಂಗ್​ನ್ನು ಬೇಗೂರು ಪೊಲೀಸರು ಮಾರ್ಚ್​ 9 ರಂದು ಬಂಧಿಸಿದ್ದರು. ಅನಿಲ್ ಕುಮಾರ್, ಶಿವಶಂಕರ್, ಗಿರೀಶ್, ರಾಮಮೂರ್ತಿ ಬಂಧಿತರು. ವೆಬ್​ಸೈಟ್ ಮೂಲಕ ಯುವತಿಯರ ಅರೆನಗ್ನ ಫೋಟೋ ಕಳಿಸಿ ಗ್ರಾಹಕರನ್ನು ಬಲೆಗೆ ಬೀಳಿಸುತ್ತಿದ್ದರು. ಬಳಿಕ ಬೇಗೂರಿನ ಬಾಡಿಗೆ ಕೋಣೆಗೆ ಕರೆಸಿಕೊಳ್ಳುತ್ತಿದ್ದರು. ಅರೆನಗ್ನಗೊಳಿಸಿ ವಿಡಿಯೋ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದರು. ದೂರುದಾರ ವ್ಯಕ್ತಿಗೆ 10 ಲಕ್ಷ ಹಣಕ್ಕೆ ಗ್ಯಾಂಗ್​ ಬೇಡಿಕೆಯಿಟ್ಟಿದ್ದು, 3 ಲಕ್ಷ ರೂ. ನೀಡಲು ಮುಂದಾಗಿದ್ದ ವ್ಯಕ್ತಿ ಟ್ರ್ಯಾಪ್ ಆಗಿದ್ದನು. ವ್ಯಕ್ತಿ ಓರ್ವನ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು. ಈ ಹಿನ್ನೆಲೆ ಬೇಗೂರು ಪೊಲೀಸ್ ಠಾಣೆಗೆ ಸಂತ್ರಸ್ತ ದೂರು ನೀಡಿದ್ದರು. ದೂರು ದಾಖಲಿಸಿಕೊಂಡು ಆರೋಪಿಗಳನ್ನು  ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!