AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಯುವಕನನ್ನು ಸುಲಿಗೆ ಮಾಡಿದ್ದ ಹನಿಟ್ರ್ಯಾಪ್​ ಗ್ಯಾಂಗ್​ ಅರೆಸ್ಟ್​: ಆರೋಪಿಗಳಿಂದ ಚಿನ್ನದ ಸರ, iPhone ವಶ

ಹನಿಟ್ರ್ಯಾಪ್ ಮುಖಾಂತರ​ ಯುವಕನನ್ನು ಸಲಿಗೆ ಮಾಡಿದ್ದ ಗ್ಯಾಂಗ್​​ ಅನ್ನು ಬನ್ನೇರುಘಟ್ಟ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಯುವಕನನ್ನು ಸುಲಿಗೆ ಮಾಡಿದ್ದ ಹನಿಟ್ರ್ಯಾಪ್​ ಗ್ಯಾಂಗ್​ ಅರೆಸ್ಟ್​: ಆರೋಪಿಗಳಿಂದ ಚಿನ್ನದ ಸರ, iPhone ವಶ
ಬಂಧಿತ ಆರೋಪಿಗಳು
ವಿವೇಕ ಬಿರಾದಾರ
|

Updated on: Mar 27, 2023 | 10:34 PM

Share

ಆನೇಕಲ್: ಬೆಂಗಳೂರಲ್ಲಿ ದಿನದಿಂದ ದಿನಕ್ಕೆ ಹನಿಟ್ರ್ಯಾಪ್​ ಪ್ರಕರಣಗಳು ಹೆಚ್ಚುತ್ತಿವೆ. ಹನಿಟ್ರ್ಯಾಪ್ (Honeytrap) ಮುಖಾಂತರ​ ಯುವಕನನ್ನು ಸಲಿಗೆ ಮಾಡಿದ್ದ ಗ್ಯಾಂಗ್​​ ಅನ್ನು ಬನ್ನೇರುಘಟ್ಟ ಪೊಲೀಸರು (Bannerghatta Police) ಬಂಧಿಸಿದ್ದಾರೆ. ರುತಿಕ್ ಅಲಿಯಾಸ್ ವಿಷ್ಣು, ಮೊ.‌ಆಸಿಫ್, ಯಾಸೀನ್ ಪಾಷಾ, ಸಮೀರ್, ಶಾಹಿದ್ ಅಲಿ ಬಂಧಿತ ಆರೋಪಿಗಳು. ರುತಿಕ್​ ಯುವತಿಯೋರ್ವಳನ್ನು ಪರಿಚಯ ಮಾಡಿಕೊಂಡಿದ್ದಾನೆ. ನಂತರ ಹೇಗೊ ಆಕೆಯ ಇನ್ಸಾಟ್​ಗ್ರಾಂ ಐಡಿ, ಪಾಸ್ವರ್ಡ್​​ ಪಡೆದಿದ್ದಾನೆ.

ನಂತರ ಆಕೆಯ ಐಡಿ ಮುಖಾಂತರ ಶಶಾಂಕ್‌ ಎಂಬ ಯುವಕನಿಗೆ ಮೆಸೆಜ್​ ಮಾಡಿದ್ದಾನೆ. ಹೀಗೆ ಮೆಸೆಜ್​ ಮಾಡುತ್ತಾ ದಿನಗಳು ಉರಿಳಿವೆ. ಅದು 2023ರ ಜನವರಿ 12, ರುತಿಕ್​ ಭೇಟಿಯಾಗು ಎಂದು ಶಶಾಂಕ್​ಗೆ ಮೆಸೆಜ್​ ಮಾಡಿದ್ದಾನೆ. ಮೀಟ್​ ಆಗಲು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟ ಹಕ್ಕಿಪಿಕ್ಕಿ ಬಂಡೆ‌ ಬಳಿ ಬರುವಂತೆ ಹೇಳಿದ್ದಾನೆ.

ಇದನ್ನೂ ಓದಿ: ಹನಿಟ್ರ್ಯಾಪ್ ಜಾಲದಲ್ಲಿ ಸಿಲುಕಿದ ಉದ್ಯಮಿ, ದೂರು ದಾಖಲು

ಇದರಂತೆ ಶಶಾಂಕ್​ ಭೇಟಿಯಾಗಲು ಜೆಪಿ ನಗರದಿಂದ ಬಂದಿದ್ದನು. ಈ ವೇಳೆ ರುತಿಕ್​​, ಶಶಾಂಕ್​ನ್ನು ಭೇಟಿಯಾಗಲು ಯುವತಿಯನ್ನು ಕಳೆಸಿದ್ದಾನೆ. ಇಬ್ಬರೂ ಭೇಟಿಯಾಗುವ ಹೊತ್ತಲ್ಲಿ, ಹಿಂದೆಯೇ ಬಂದ ನಾಲ್ವಾರು ನೀವೇನು ಮಾಡುತ್ತಿದ್ದೀರಾ ಇಲ್ಲಿ ಅಂತ ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ. ನಂತರ ಶಶಾಂಕ್​ ಬಳಿ ಇದ್ದ ಚಿನ್ನದ ಸರ ಮತ್ತು ಐ ಫೋನ್ ಕಿತ್ತುಕೊಂಡು ಗ್ಯಾಂಗ್ ಪರಾರಿಯಾಗಿದ್ದಾರೆ. ದೂರು ದಾಖಲಿಸಿಕೊಂಡಿದ್ದ ಬನ್ನೇರುಘಟ್ಟ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಗಳಿಂದ ಚಿನ್ನದ ಸರ ಹಾಗೂ ಐ ಫೋನ್ ವಶ ಪಡಿಸಿಕೊಂಡಿದ್ದಾರೆ.

ಬೇಗೂರು ಪೊಲೀಸರಿಂದ ಕುಖ್ಯಾತ ಹನಿಟ್ರ್ಯಾಪ್​ ಗ್ಯಾಂಗ್​​ ಅರೆಸ್ಟ್

ಇಬ್ಬರು ಮಹಿಳೆಯರು ಸೇರಿ ನಾಲ್ವರು ಕುಖ್ಯಾತ ಹನಿಟ್ರ್ಯಾಪ್ ಗ್ಯಾಂಗ್​ನ್ನು ಬೇಗೂರು ಪೊಲೀಸರು ಮಾರ್ಚ್​ 9 ರಂದು ಬಂಧಿಸಿದ್ದರು. ಅನಿಲ್ ಕುಮಾರ್, ಶಿವಶಂಕರ್, ಗಿರೀಶ್, ರಾಮಮೂರ್ತಿ ಬಂಧಿತರು. ವೆಬ್​ಸೈಟ್ ಮೂಲಕ ಯುವತಿಯರ ಅರೆನಗ್ನ ಫೋಟೋ ಕಳಿಸಿ ಗ್ರಾಹಕರನ್ನು ಬಲೆಗೆ ಬೀಳಿಸುತ್ತಿದ್ದರು. ಬಳಿಕ ಬೇಗೂರಿನ ಬಾಡಿಗೆ ಕೋಣೆಗೆ ಕರೆಸಿಕೊಳ್ಳುತ್ತಿದ್ದರು. ಅರೆನಗ್ನಗೊಳಿಸಿ ವಿಡಿಯೋ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದರು. ದೂರುದಾರ ವ್ಯಕ್ತಿಗೆ 10 ಲಕ್ಷ ಹಣಕ್ಕೆ ಗ್ಯಾಂಗ್​ ಬೇಡಿಕೆಯಿಟ್ಟಿದ್ದು, 3 ಲಕ್ಷ ರೂ. ನೀಡಲು ಮುಂದಾಗಿದ್ದ ವ್ಯಕ್ತಿ ಟ್ರ್ಯಾಪ್ ಆಗಿದ್ದನು. ವ್ಯಕ್ತಿ ಓರ್ವನ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು. ಈ ಹಿನ್ನೆಲೆ ಬೇಗೂರು ಪೊಲೀಸ್ ಠಾಣೆಗೆ ಸಂತ್ರಸ್ತ ದೂರು ನೀಡಿದ್ದರು. ದೂರು ದಾಖಲಿಸಿಕೊಂಡು ಆರೋಪಿಗಳನ್ನು  ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್