AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಯುವಕನನ್ನು ಸುಲಿಗೆ ಮಾಡಿದ್ದ ಹನಿಟ್ರ್ಯಾಪ್​ ಗ್ಯಾಂಗ್​ ಅರೆಸ್ಟ್​: ಆರೋಪಿಗಳಿಂದ ಚಿನ್ನದ ಸರ, iPhone ವಶ

ಹನಿಟ್ರ್ಯಾಪ್ ಮುಖಾಂತರ​ ಯುವಕನನ್ನು ಸಲಿಗೆ ಮಾಡಿದ್ದ ಗ್ಯಾಂಗ್​​ ಅನ್ನು ಬನ್ನೇರುಘಟ್ಟ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಯುವಕನನ್ನು ಸುಲಿಗೆ ಮಾಡಿದ್ದ ಹನಿಟ್ರ್ಯಾಪ್​ ಗ್ಯಾಂಗ್​ ಅರೆಸ್ಟ್​: ಆರೋಪಿಗಳಿಂದ ಚಿನ್ನದ ಸರ, iPhone ವಶ
ಬಂಧಿತ ಆರೋಪಿಗಳು
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Mar 27, 2023 | 10:34 PM

Share

ಆನೇಕಲ್: ಬೆಂಗಳೂರಲ್ಲಿ ದಿನದಿಂದ ದಿನಕ್ಕೆ ಹನಿಟ್ರ್ಯಾಪ್​ ಪ್ರಕರಣಗಳು ಹೆಚ್ಚುತ್ತಿವೆ. ಹನಿಟ್ರ್ಯಾಪ್ (Honeytrap) ಮುಖಾಂತರ​ ಯುವಕನನ್ನು ಸಲಿಗೆ ಮಾಡಿದ್ದ ಗ್ಯಾಂಗ್​​ ಅನ್ನು ಬನ್ನೇರುಘಟ್ಟ ಪೊಲೀಸರು (Bannerghatta Police) ಬಂಧಿಸಿದ್ದಾರೆ. ರುತಿಕ್ ಅಲಿಯಾಸ್ ವಿಷ್ಣು, ಮೊ.‌ಆಸಿಫ್, ಯಾಸೀನ್ ಪಾಷಾ, ಸಮೀರ್, ಶಾಹಿದ್ ಅಲಿ ಬಂಧಿತ ಆರೋಪಿಗಳು. ರುತಿಕ್​ ಯುವತಿಯೋರ್ವಳನ್ನು ಪರಿಚಯ ಮಾಡಿಕೊಂಡಿದ್ದಾನೆ. ನಂತರ ಹೇಗೊ ಆಕೆಯ ಇನ್ಸಾಟ್​ಗ್ರಾಂ ಐಡಿ, ಪಾಸ್ವರ್ಡ್​​ ಪಡೆದಿದ್ದಾನೆ.

ನಂತರ ಆಕೆಯ ಐಡಿ ಮುಖಾಂತರ ಶಶಾಂಕ್‌ ಎಂಬ ಯುವಕನಿಗೆ ಮೆಸೆಜ್​ ಮಾಡಿದ್ದಾನೆ. ಹೀಗೆ ಮೆಸೆಜ್​ ಮಾಡುತ್ತಾ ದಿನಗಳು ಉರಿಳಿವೆ. ಅದು 2023ರ ಜನವರಿ 12, ರುತಿಕ್​ ಭೇಟಿಯಾಗು ಎಂದು ಶಶಾಂಕ್​ಗೆ ಮೆಸೆಜ್​ ಮಾಡಿದ್ದಾನೆ. ಮೀಟ್​ ಆಗಲು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟ ಹಕ್ಕಿಪಿಕ್ಕಿ ಬಂಡೆ‌ ಬಳಿ ಬರುವಂತೆ ಹೇಳಿದ್ದಾನೆ.

ಇದನ್ನೂ ಓದಿ: ಹನಿಟ್ರ್ಯಾಪ್ ಜಾಲದಲ್ಲಿ ಸಿಲುಕಿದ ಉದ್ಯಮಿ, ದೂರು ದಾಖಲು

ಇದರಂತೆ ಶಶಾಂಕ್​ ಭೇಟಿಯಾಗಲು ಜೆಪಿ ನಗರದಿಂದ ಬಂದಿದ್ದನು. ಈ ವೇಳೆ ರುತಿಕ್​​, ಶಶಾಂಕ್​ನ್ನು ಭೇಟಿಯಾಗಲು ಯುವತಿಯನ್ನು ಕಳೆಸಿದ್ದಾನೆ. ಇಬ್ಬರೂ ಭೇಟಿಯಾಗುವ ಹೊತ್ತಲ್ಲಿ, ಹಿಂದೆಯೇ ಬಂದ ನಾಲ್ವಾರು ನೀವೇನು ಮಾಡುತ್ತಿದ್ದೀರಾ ಇಲ್ಲಿ ಅಂತ ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ. ನಂತರ ಶಶಾಂಕ್​ ಬಳಿ ಇದ್ದ ಚಿನ್ನದ ಸರ ಮತ್ತು ಐ ಫೋನ್ ಕಿತ್ತುಕೊಂಡು ಗ್ಯಾಂಗ್ ಪರಾರಿಯಾಗಿದ್ದಾರೆ. ದೂರು ದಾಖಲಿಸಿಕೊಂಡಿದ್ದ ಬನ್ನೇರುಘಟ್ಟ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಗಳಿಂದ ಚಿನ್ನದ ಸರ ಹಾಗೂ ಐ ಫೋನ್ ವಶ ಪಡಿಸಿಕೊಂಡಿದ್ದಾರೆ.

ಬೇಗೂರು ಪೊಲೀಸರಿಂದ ಕುಖ್ಯಾತ ಹನಿಟ್ರ್ಯಾಪ್​ ಗ್ಯಾಂಗ್​​ ಅರೆಸ್ಟ್

ಇಬ್ಬರು ಮಹಿಳೆಯರು ಸೇರಿ ನಾಲ್ವರು ಕುಖ್ಯಾತ ಹನಿಟ್ರ್ಯಾಪ್ ಗ್ಯಾಂಗ್​ನ್ನು ಬೇಗೂರು ಪೊಲೀಸರು ಮಾರ್ಚ್​ 9 ರಂದು ಬಂಧಿಸಿದ್ದರು. ಅನಿಲ್ ಕುಮಾರ್, ಶಿವಶಂಕರ್, ಗಿರೀಶ್, ರಾಮಮೂರ್ತಿ ಬಂಧಿತರು. ವೆಬ್​ಸೈಟ್ ಮೂಲಕ ಯುವತಿಯರ ಅರೆನಗ್ನ ಫೋಟೋ ಕಳಿಸಿ ಗ್ರಾಹಕರನ್ನು ಬಲೆಗೆ ಬೀಳಿಸುತ್ತಿದ್ದರು. ಬಳಿಕ ಬೇಗೂರಿನ ಬಾಡಿಗೆ ಕೋಣೆಗೆ ಕರೆಸಿಕೊಳ್ಳುತ್ತಿದ್ದರು. ಅರೆನಗ್ನಗೊಳಿಸಿ ವಿಡಿಯೋ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದರು. ದೂರುದಾರ ವ್ಯಕ್ತಿಗೆ 10 ಲಕ್ಷ ಹಣಕ್ಕೆ ಗ್ಯಾಂಗ್​ ಬೇಡಿಕೆಯಿಟ್ಟಿದ್ದು, 3 ಲಕ್ಷ ರೂ. ನೀಡಲು ಮುಂದಾಗಿದ್ದ ವ್ಯಕ್ತಿ ಟ್ರ್ಯಾಪ್ ಆಗಿದ್ದನು. ವ್ಯಕ್ತಿ ಓರ್ವನ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು. ಈ ಹಿನ್ನೆಲೆ ಬೇಗೂರು ಪೊಲೀಸ್ ಠಾಣೆಗೆ ಸಂತ್ರಸ್ತ ದೂರು ನೀಡಿದ್ದರು. ದೂರು ದಾಖಲಿಸಿಕೊಂಡು ಆರೋಪಿಗಳನ್ನು  ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ