OLXನಲ್ಲಿ ಬೈಕ್ ಖರೀದಿಸಿ, ಚೈನ್​ ಸ್ನ್ಯಾಚ್​ ಮಾಡ್ತಿದ್ದ ಖದೀಮರು ಬಸವನಗುಡಿಯಲ್ಲಿ ಲಾಕ್!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸರ ಕದಿಯುತ್ತಿದ್ದ ಇಬ್ಬರು ಕುಖ್ಯಾತ ಸರಗಳ್ಳರನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ರಾಮಮೂರ್ತಿ ಅಲಿಯಾಸ್ ವಿನಾಯಕ ಹಾಗೂ ಕಾರ್ತಿಕ್ ಅಲಿಯಾಸ್ ಕುಟ್ಟಿ ಬಂಧಿತ ಆರೋಪಿಗಳು. ಆರೋಪಿಗಳು ಜ.11ರಂದು ನಗರದ ಎನ್.ಆರ್.ಕಾಲೋನಿ ಬಳಿ ಮಹಿಳೆಯ ಸರಗಳ್ಳತನ ಮಾಡಿದ್ದರು. ಮೊದಲಿಗೆ ಆರೋಪಿಗಳು ಓಎಲ್​ಎಕ್ಸ್​ನಲ್ಲಿ ಬೈಕ್ ಖರೀದಿಸುತ್ತಿದ್ದರು. ನಂತರ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ, ಖರೀದಿಸಿದ ಬೈಕ್​ನಲ್ಲೇ ಬಂದು ಸರಗಳ್ಳತನ ಮಾಡುತ್ತಿದ್ದರು. ಈ ಸಂಬಂಧ ಕಾರ್ಯಾಚರಣೆ ನಡೆಸಿದ ಬಸವನಗುಡಿ ಪೊಲೀಸರು ಆರೋಪಿಗಳನ್ನು […]

OLXನಲ್ಲಿ ಬೈಕ್ ಖರೀದಿಸಿ, ಚೈನ್​ ಸ್ನ್ಯಾಚ್​ ಮಾಡ್ತಿದ್ದ ಖದೀಮರು ಬಸವನಗುಡಿಯಲ್ಲಿ ಲಾಕ್!
ಸಾಧು ಶ್ರೀನಾಥ್​

Updated on: Jan 28, 2020 | 1:07 PM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸರ ಕದಿಯುತ್ತಿದ್ದ ಇಬ್ಬರು ಕುಖ್ಯಾತ ಸರಗಳ್ಳರನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ರಾಮಮೂರ್ತಿ ಅಲಿಯಾಸ್ ವಿನಾಯಕ ಹಾಗೂ ಕಾರ್ತಿಕ್ ಅಲಿಯಾಸ್ ಕುಟ್ಟಿ ಬಂಧಿತ ಆರೋಪಿಗಳು.

ಆರೋಪಿಗಳು ಜ.11ರಂದು ನಗರದ ಎನ್.ಆರ್.ಕಾಲೋನಿ ಬಳಿ ಮಹಿಳೆಯ ಸರಗಳ್ಳತನ ಮಾಡಿದ್ದರು. ಮೊದಲಿಗೆ ಆರೋಪಿಗಳು ಓಎಲ್​ಎಕ್ಸ್​ನಲ್ಲಿ ಬೈಕ್ ಖರೀದಿಸುತ್ತಿದ್ದರು. ನಂತರ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ, ಖರೀದಿಸಿದ ಬೈಕ್​ನಲ್ಲೇ ಬಂದು ಸರಗಳ್ಳತನ ಮಾಡುತ್ತಿದ್ದರು. ಈ ಸಂಬಂಧ ಕಾರ್ಯಾಚರಣೆ ನಡೆಸಿದ ಬಸವನಗುಡಿ ಪೊಲೀಸರು ಆರೋಪಿಗಳನ್ನು ಖೆಡ್ಡಾಗಿ ಬೀಳಿಸಿದ್ದಾರೆ.

ಇದೇ ವೇಳೆ ಆರೋಪಿಗಳ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ 9 ಪ್ರಕರಣಗಳು ಬಯಲಾಗಿವೆ. ಬಂಧಿತ ಆರೋಪಿಗಳಿಂದ 1.50 ಲಕ್ಷ ಮೌಲ್ಯದ 3 ಬೈಕ್​ಗಳು, 12.28 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


Published On - 12:23 pm, Tue, 28 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us