AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಮೇಯರ್ ಸಂಪತ್ ರಾಜ್ ಪರಾರಿ: ಬ್ಯಾಪ್ಟಿಸ್ಟ್ ಅಸ್ಪತ್ರೆಯ 6 ಮಂದಿಗೆ CCB ಡ್ರಿಲ್

ಬೆಂಗಳೂರು: ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಸಿಸಿಬಿ ವಿಚಾರಣೆಗೆ ಹಾಜರಾಗಬೇಕಿದ್ದ ಮಾಜಿ ಮೇಯರ್ ಸಂಪತ್ ರಾಜ್ ಎಸ್ಕೇಪ್ ಆಗಿದ್ದು, ಈ ಸಂಬಂಧ ಸಿಸಿಬಿ ಪೊಲೀಸರು ಅವರ ನಿವಾಸಕ್ಕೆ ಎರಡು ನೋಟಿಸ್ ಜಾರಿಮಾಡಿದ್ದಾರೆ. ಈ ಮಧ್ಯೆ, ಸಂಪತ್ ರಾಜ್ ಬಗ್ಗೆ ಪೂರ್ವ ಸೂಚನೆ ನೀಡಿದ್ದರೂ, ಅವರು ಚಿಕಿತ್ಸೆ ಪಡೆಯುತ್ತಿದ್ದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಆಡಳಿತ ಮಂಡಳಿಯವರು ಅವರ ಪರಾರಿಗೆ ನೆರವಾಗಿದ್ದಾರೆ. ಅದ್ರೆ ಅಕ್ಟೋಬರ್ 29ರಂದು ರಾತ್ರೋರಾತ್ರಿ ಸಂಪತ್ ರಾಜ್ ಡಿಸ್ಚಾರ್ಜ್‌ ಆಗಿ ಕಣ್ಮರೆಯಾಗಿದ್ದಾರೆ ಎಂದು ಅಂದಾಜಿಸಲಾಗಿದೆ. […]

ಮಾಜಿ ಮೇಯರ್ ಸಂಪತ್ ರಾಜ್ ಪರಾರಿ: ಬ್ಯಾಪ್ಟಿಸ್ಟ್ ಅಸ್ಪತ್ರೆಯ 6 ಮಂದಿಗೆ CCB ಡ್ರಿಲ್
ಸಾಧು ಶ್ರೀನಾಥ್​
|

Updated on:Nov 02, 2020 | 11:03 AM

Share

ಬೆಂಗಳೂರು: ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಸಿಸಿಬಿ ವಿಚಾರಣೆಗೆ ಹಾಜರಾಗಬೇಕಿದ್ದ ಮಾಜಿ ಮೇಯರ್ ಸಂಪತ್ ರಾಜ್ ಎಸ್ಕೇಪ್ ಆಗಿದ್ದು, ಈ ಸಂಬಂಧ ಸಿಸಿಬಿ ಪೊಲೀಸರು ಅವರ ನಿವಾಸಕ್ಕೆ ಎರಡು ನೋಟಿಸ್ ಜಾರಿಮಾಡಿದ್ದಾರೆ. ಈ ಮಧ್ಯೆ, ಸಂಪತ್ ರಾಜ್ ಬಗ್ಗೆ ಪೂರ್ವ ಸೂಚನೆ ನೀಡಿದ್ದರೂ, ಅವರು ಚಿಕಿತ್ಸೆ ಪಡೆಯುತ್ತಿದ್ದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಆಡಳಿತ ಮಂಡಳಿಯವರು ಅವರ ಪರಾರಿಗೆ ನೆರವಾಗಿದ್ದಾರೆ. ಅದ್ರೆ ಅಕ್ಟೋಬರ್ 29ರಂದು ರಾತ್ರೋರಾತ್ರಿ ಸಂಪತ್ ರಾಜ್ ಡಿಸ್ಚಾರ್ಜ್‌ ಆಗಿ ಕಣ್ಮರೆಯಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರುಗಳಿಗೆಲ್ಲ ಸಿಸಿಬಿ ನೋಟಿಸ್ ನೀಡಿತ್ತು.

ಸ್ಪಷ್ಟನೆ ನೀಡಲಿರುವ ಆಸ್ಪತ್ರೆಯ ಆಡಳಿತ ಮಂಡಳಿ ಅದರಂತೆ ಇಂದು ಬ್ಯಾಪ್ಟಿಸ್ಟ್ ಆಸ್ಪತ್ರೆ ವೈದ್ಯರು, ಆಡಳಿತ ಮಂಡಳಿಯವರು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಈ ಹಿಂದೆ ಡಿಸ್ಚಾರ್ಜ್‌ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಿದರೂ ಬ್ಯಾಪ್ಟಿಸ್ಟ್ ಆಸ್ಪತ್ರೆ ನಿರ್ಲಕ್ಷ್ಯ ವಹಿಸಿದರು ಎಂದು ತಿಳಿದುಬಂದಿದೆ. ಈ ಬಗ್ಗೆ ಸಿಸಿಬಿ ಅಧಿಕಾರಿಗಳು ಅಸ್ಪತ್ರೆಗೆ ಕಾರಣ ಕೇಳಿ ನೋಟಿಸ್ ನೀಡಿದ್ದರು. ಸಿಸಿಬಿ ನೋಟಿಸ್ ಹಿನ್ನೆಲೆಯಲ್ಲಿ ಚಾಮರಾಜಪೇಟೆಯ ಸಿಸಿಬಿ ಕಚೇರಿಯಲ್ಲಿ ಅಸ್ಪತ್ರೆಯ ಆರು ಮಂದಿ ವಿಚಾರಣೆಗೆ ಹಾಜರಾಗಿದ್ದಾರೆ.

Published On - 10:58 am, Mon, 2 November 20

ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ಬಿಹಾರದಲ್ಲಿ ತೆಗೆದುಕೊಂಡ ಯಾವುದೇ ನಿರ್ಧಾರ ವ್ಯರ್ಥವಾಗುವುದಿಲ್ಲ: ಮೋದಿ
ಬಿಹಾರದಲ್ಲಿ ತೆಗೆದುಕೊಂಡ ಯಾವುದೇ ನಿರ್ಧಾರ ವ್ಯರ್ಥವಾಗುವುದಿಲ್ಲ: ಮೋದಿ
ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ