AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಧಿಯ ಹೊರಗೆ ತಲೆ ಕತ್ತರಿಸಿದ ಮೌಲ್ವಿಯ ಶವದ ಮೇಲಿತ್ತು ಬಾಳೆಎಲೆ, ತಲೆಕೂದಲು; ಮಾಟ-ಮಂತ್ರದ ಶಂಕೆ

ಉತ್ತರ ಪ್ರದೇಶದ ಬಿಜ್ನೋರ್‌ನ ಖಾರಿ ಗ್ರಾಮದಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಇಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮೃತದೇಹವನ್ನು ಸ್ಮಶಾನದಿಂದ ಅಗೆದು ಹೊರತೆಗೆದಿರುವುದರಿಂದ ಸ್ಮಶಾನದ ಬಳಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಸಮಾಧಿಯ ಹೊರಗೆ ತಲೆ ಕತ್ತರಿಸಿದ ಮೌಲ್ವಿಯ ಶವದ ಮೇಲಿತ್ತು ಬಾಳೆಎಲೆ, ತಲೆಕೂದಲು; ಮಾಟ-ಮಂತ್ರದ ಶಂಕೆ
ಮೌಲ್ವಿಯ ಶವ
ಸುಷ್ಮಾ ಚಕ್ರೆ
|

Updated on: Sep 25, 2024 | 5:34 PM

Share

ನೊಯ್ಡಾ: ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ಸ್ಮಶಾನದಲ್ಲಿ ಸಮಾಧಿ ಮಾಡಲಾಗಿದ್ದ ಮೌಲ್ವಿಯೊಬ್ಬರ ಶವವನ್ನು ಸಮಾಧಿಯಿಂದ ಹೊರತೆಗೆದು ಆತನ ತಲೆಯನ್ನು ಕತ್ತರಿಸಲಾಗಿದೆ. ಈ ವಿಷಯ ತಿಳಿದ ತಕ್ಷಣ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಮುಂಜಾಗ್ರತಾ ಕ್ರಮವಾಗಿ ಸ್ಮಶಾನದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹಲ್ದೌರ್ ಪೊಲೀಸ್ ಠಾಣೆ ವ್ಯಾಪ್ತಿಯ ಖಾರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಯುವಕನೊಬ್ಬ ಸ್ಮಶಾನದತ್ತ ನಡೆದುಕೊಂಡು ಹೋಗುತ್ತಿದ್ದಾಗ ಸ್ಮಶಾನದಲ್ಲಿದ್ದ ಸಮಾಧಿಯೊಂದರ ಮಣ್ಣನ್ನು ಅಗೆದಿರುವುದು ಕಂಡು ಬಂದಿದೆ. ಹತ್ತಿರ ಹೋಗಿ ನೋಡಿದಾಗ ಶವ ಸಮಾಧಿಯ ಹೊರಭಾಗದಲ್ಲಿದ್ದು ತಲೆ ಕಾಣೆಯಾಗಿತ್ತು. ಬಳಿಕ ಯುವಕರು ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಜನ ಸ್ಮಶಾನದಲ್ಲಿ ಜಮಾಯಿಸಿದ್ದರು.

ಇದನ್ನೂ ಓದಿ: ಬಿಹಾರದಲ್ಲಿ ಆಡುತ್ತಿದ್ದ 3 ವರ್ಷದ ಬಾಲಕನಿಗೆ ಚಾಕುವಿನಿಂದ ಇರಿದು ಕೊಲೆ

ಈ ಬಗ್ಗೆ ಮಾಹಿತಿ ಪಡೆದ ಪ್ರದೇಶ ಅಧಿಕಾರಿ ಸಂಗ್ರಾಮ್ ಸಿಂಗ್ ಪೊಲೀಸ್ ಪಡೆಗಳೊಂದಿಗೆ ಸ್ಥಳಕ್ಕೆ ಧಾವಿಸಿದರು. ಅಗೆದ ಸಮಾಧಿ ಮೌಲ್ವಿಯಾದ ಕಾರಿ ಸೈಫುರ್ರಹ್ಮಾನ್ ಅವರದು ಎನ್ನಲಾಗಿದೆ. ಅವರು ಜುಲೈ 25ರಂದು ನಿಧನರಾಗಿದ್ದರು. ಇದೀಗ ಅವರ ದೇಹವನ್ನು ಸಮಾಧಿಯಿಂದ ತೆಗೆದುಹಾಕಿ, ಮೃತದೇಹದ ಕುತ್ತಿಗೆಯನ್ನು ಕತ್ತರಿಸಲಾಗಿದೆ. ಯಾರೋ ಮಾಟಕ್ಕಾಗಿ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಮೃತದೇಹದ ಎದೆಯ ಮೇಲೆ ಗಡ್ಡದ ಕೂದಲನ್ನು ಇಡಲಾಗಿತ್ತು. ಅಲ್ಲಿ ಬಾಳೆಎಲೆಯಲ್ಲಿ ಸುತ್ತಿದ ಸೋರೆಕಾಯಿ ಸಿಕ್ಕಿದೆ. ಸುಗಂಧ ದ್ರವ್ಯದ ಬಾಟಲಿ, ಮಾಂಸ ಮತ್ತು ಪ್ರಾಣಿಯ ಮುಳ್ಳುಗಳನ್ನು ಸಹ ಅಲ್ಲಿ ಇರಿಸಲಾಗಿದ್ದು, ಪೊಲೀಸರು ಅದನ್ನು ವಶಪಡಿಸಿಕೊಂಡು ತನಿಖೆಗೆ ಕಳುಹಿಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್