AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಧಿಯ ಹೊರಗೆ ತಲೆ ಕತ್ತರಿಸಿದ ಮೌಲ್ವಿಯ ಶವದ ಮೇಲಿತ್ತು ಬಾಳೆಎಲೆ, ತಲೆಕೂದಲು; ಮಾಟ-ಮಂತ್ರದ ಶಂಕೆ

ಉತ್ತರ ಪ್ರದೇಶದ ಬಿಜ್ನೋರ್‌ನ ಖಾರಿ ಗ್ರಾಮದಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಇಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮೃತದೇಹವನ್ನು ಸ್ಮಶಾನದಿಂದ ಅಗೆದು ಹೊರತೆಗೆದಿರುವುದರಿಂದ ಸ್ಮಶಾನದ ಬಳಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಸಮಾಧಿಯ ಹೊರಗೆ ತಲೆ ಕತ್ತರಿಸಿದ ಮೌಲ್ವಿಯ ಶವದ ಮೇಲಿತ್ತು ಬಾಳೆಎಲೆ, ತಲೆಕೂದಲು; ಮಾಟ-ಮಂತ್ರದ ಶಂಕೆ
ಮೌಲ್ವಿಯ ಶವ
ಸುಷ್ಮಾ ಚಕ್ರೆ
|

Updated on: Sep 25, 2024 | 5:34 PM

Share

ನೊಯ್ಡಾ: ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ಸ್ಮಶಾನದಲ್ಲಿ ಸಮಾಧಿ ಮಾಡಲಾಗಿದ್ದ ಮೌಲ್ವಿಯೊಬ್ಬರ ಶವವನ್ನು ಸಮಾಧಿಯಿಂದ ಹೊರತೆಗೆದು ಆತನ ತಲೆಯನ್ನು ಕತ್ತರಿಸಲಾಗಿದೆ. ಈ ವಿಷಯ ತಿಳಿದ ತಕ್ಷಣ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಮುಂಜಾಗ್ರತಾ ಕ್ರಮವಾಗಿ ಸ್ಮಶಾನದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹಲ್ದೌರ್ ಪೊಲೀಸ್ ಠಾಣೆ ವ್ಯಾಪ್ತಿಯ ಖಾರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಯುವಕನೊಬ್ಬ ಸ್ಮಶಾನದತ್ತ ನಡೆದುಕೊಂಡು ಹೋಗುತ್ತಿದ್ದಾಗ ಸ್ಮಶಾನದಲ್ಲಿದ್ದ ಸಮಾಧಿಯೊಂದರ ಮಣ್ಣನ್ನು ಅಗೆದಿರುವುದು ಕಂಡು ಬಂದಿದೆ. ಹತ್ತಿರ ಹೋಗಿ ನೋಡಿದಾಗ ಶವ ಸಮಾಧಿಯ ಹೊರಭಾಗದಲ್ಲಿದ್ದು ತಲೆ ಕಾಣೆಯಾಗಿತ್ತು. ಬಳಿಕ ಯುವಕರು ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಜನ ಸ್ಮಶಾನದಲ್ಲಿ ಜಮಾಯಿಸಿದ್ದರು.

ಇದನ್ನೂ ಓದಿ: ಬಿಹಾರದಲ್ಲಿ ಆಡುತ್ತಿದ್ದ 3 ವರ್ಷದ ಬಾಲಕನಿಗೆ ಚಾಕುವಿನಿಂದ ಇರಿದು ಕೊಲೆ

ಈ ಬಗ್ಗೆ ಮಾಹಿತಿ ಪಡೆದ ಪ್ರದೇಶ ಅಧಿಕಾರಿ ಸಂಗ್ರಾಮ್ ಸಿಂಗ್ ಪೊಲೀಸ್ ಪಡೆಗಳೊಂದಿಗೆ ಸ್ಥಳಕ್ಕೆ ಧಾವಿಸಿದರು. ಅಗೆದ ಸಮಾಧಿ ಮೌಲ್ವಿಯಾದ ಕಾರಿ ಸೈಫುರ್ರಹ್ಮಾನ್ ಅವರದು ಎನ್ನಲಾಗಿದೆ. ಅವರು ಜುಲೈ 25ರಂದು ನಿಧನರಾಗಿದ್ದರು. ಇದೀಗ ಅವರ ದೇಹವನ್ನು ಸಮಾಧಿಯಿಂದ ತೆಗೆದುಹಾಕಿ, ಮೃತದೇಹದ ಕುತ್ತಿಗೆಯನ್ನು ಕತ್ತರಿಸಲಾಗಿದೆ. ಯಾರೋ ಮಾಟಕ್ಕಾಗಿ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಮೃತದೇಹದ ಎದೆಯ ಮೇಲೆ ಗಡ್ಡದ ಕೂದಲನ್ನು ಇಡಲಾಗಿತ್ತು. ಅಲ್ಲಿ ಬಾಳೆಎಲೆಯಲ್ಲಿ ಸುತ್ತಿದ ಸೋರೆಕಾಯಿ ಸಿಕ್ಕಿದೆ. ಸುಗಂಧ ದ್ರವ್ಯದ ಬಾಟಲಿ, ಮಾಂಸ ಮತ್ತು ಪ್ರಾಣಿಯ ಮುಳ್ಳುಗಳನ್ನು ಸಹ ಅಲ್ಲಿ ಇರಿಸಲಾಗಿದ್ದು, ಪೊಲೀಸರು ಅದನ್ನು ವಶಪಡಿಸಿಕೊಂಡು ತನಿಖೆಗೆ ಕಳುಹಿಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು