AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿತವಾಡ ಫಾಲ್ಸ್​ಗೆ ಬಿದ್ದು ನಾಲ್ವರು ಯುವತಿಯರ ಸಾವು, ಓರ್ವಳ ಸ್ಥಿತಿ ಗಂಭೀರ

ಬೆಳಗಾವಿಯಿಂದ ಕಿತವಾಡ ಫಾಲ್ಸ್‌ಗೆ ಪ್ರವಾಸಕ್ಕೆ ಹೋಗಿದ್ದ ಯುವತಿಯರ ಪೈಕಿ ಐವರು ಫಾಲ್ಸ್​ಗೆ ಬಿದ್ದು ನಾಲ್ವರು ಸಾವನ್ನಪ್ಪಿದರೆ ಓರ್ವಳ ಸ್ಥಿತಿ ಗಂಭೀರವಾಗಿದೆ.

ಕಿತವಾಡ ಫಾಲ್ಸ್​ಗೆ ಬಿದ್ದು ನಾಲ್ವರು ಯುವತಿಯರ ಸಾವು, ಓರ್ವಳ ಸ್ಥಿತಿ ಗಂಭೀರ
ಕಿತವಾಡ ಫಾಲ್ಸ್​ಗೆ ಬಿದ್ದು ನಾಲ್ವರು ಯುವತಿಯರ ಸಾವು, ಓರ್ವಳ ಸ್ಥಿತಿ ಗಂಭೀರ
TV9 Web
| Edited By: Rakesh Nayak Manchi|

Updated on:Nov 26, 2022 | 4:21 PM

Share

ಬೆಳಗಾವಿ: ಬೆಳಗಾವಿಯಿಂದ ಕಿತವಾಡ ಫಾಲ್ಸ್‌ಗೆ (Kitwad falls) ಪ್ರವಾಸಕ್ಕೆ ಹೋಗಿದ್ದ ಯುವತಿಯರ ಪೈಕಿ ಐವರು ಫಾಲ್ಸ್​ಗೆ ಬಿದ್ದು ನಾಲ್ವರು ಸಾವನ್ನಪ್ಪಿದರೆ ಓರ್ವಳ ಸ್ಥಿತಿ ಗಂಭೀರವಾಗಿದೆ. ಯುವತಿಯರ ಗುಂಪೊಂದು ಬೆಳಗಾವಿಯಿಂದ ಫಾಲ್ಸ್ ನೋಡುವ ನಿಟ್ಟಿನಲ್ಲಿ ಪ್ರವಾಸ ಕೈಗೊಂಡಿದ್ದರು. ಫಾಲ್ಸ್ ವೀಕ್ಷಣೆ ವೇಳೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಈ ವೇಳೆ ಐವರು ಯುವತಿಯರು ಕಾಲು ಜಾರಿ ಫಾಲ್ಸ್​ಗೆ ಬಿದ್ದಿದ್ದಾರೆ. ಘಟನೆಯಲ್ಲಿ ಉಜ್ವಲ್ ನಗರ ಆಸೀಯಾ ಮುಜಾವರ್(17), ಅನಗೋಳದ ಕುದ್‌ಶೀಯಾ ಹಾಸ್‌ಂ ಪಟೇಲ್(20), ಝಟ್‌ಪಟ್ ಕಾಲೋನಿಯ ರುಕ್ಕಶಾರ್ ಭಿಸ್ತಿ(20), ತಸ್ಮಿಯಾ(20) ಸಾವನ್ನಪ್ಪಿದ್ದು, ಮತ್ತೋರ್ವಳ ಸ್ಥಿತಿ ಗಂಭೀರವಾಗಿದೆ.

ಕರ್ನಾಟಕ ಮಹಾರಾಷ್ಟ್ರ ಗಡಿಭಾಗದಲ್ಲಿ ಇರುವ ಕಿತವಾಡ ಫಾಲ್ಸ್​ಗೆ ಬೆಳಗಾವಿ ಕಾಮತ್​ಗಲ್ಲಿಯ ಮದರಸಾದಲ್ಲಿ ಓದುತ್ತಿದ್ದ 40 ಯುವತಿಯರು ಹೋಗಿದ್ದಾರೆ. ಈ ವೇಳೆ ಒಬ್ಬರಿಗೊಬ್ಬರು ಕೈ ಹಿಡಿದು ಸೆಲ್ಫಿ ಫೋಟೋ ತಗೆದುಕೊಳ್ಳುತ್ತಿದ್ದರು. ಈ ವೇಳೆ ಆಯ ತಪ್ಪಿ ಫಾಲ್ಸ್ ಮೇಲಿಂದ ಬಿದ್ದು ನಾಲ್ವರು ಸಾವನ್ನಪ್ಪಿದ್ದು, ಓರ್ವ ಯುವತಿಯ ಸ್ಥಿತಿ ಚಿಂತಾಜನಕವಾಗಿದೆ. ಈಕೆಯನ್ನು ಕೂಡಲೇ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಬಳಿ ಮೃತ ಯುವತಿಯರ ಕುಟುಂಸ್ಥರ ಕಣ್ಣೀರು ಸುರಿಸುತ್ತಿದ್ದಾರೆ.

ಇದನ್ನೂ ಓದಿ: Supreme Bail: 12 ಕೋಟಿ ವಂಚನೆ -ಸುಪ್ರೀಂ ಕೋರ್ಟ್ ಗೆ ಹೋಗಿ ಜಾಮೀನು ತಂದ ಡಿಸಿಸಿ ಬ್ಯಾಂಕ್ ಜವಾನ!

ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ

ಕಲಬುರಗಿ: ಐದು ವರ್ಷದ ಬಾಲಕಿ ಮೇಲೆ 40 ವರ್ಷದ ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಾಕಲೇಟ್ ಕೊಡಿಸುವುದಾಗಿ ಆಸೆಯೊಡ್ಡಿ ಬಾಲಕಿಯನ್ನು ಕೃಷಿ ಜಮೀನಿಗೆ ಕರೆದುಕೊಂಡು ಹೋಗಿದ್ದ ದುರುಳ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿ ಜೋರಾಗಿ ಕಿರುಚಾಡಿದ್ದಾಳೆ. ಬೊಬ್ಬೆ ಶಬ್ದ ಕೇಳಿ ಜನರು ಓಡೋಡಿ ಬಂದು ಜಮೀನನ್ನು ಸುತ್ತುವರೆದು ಕಾಮುಕನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡು ವಾಡಿ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:43 pm, Sat, 26 November 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್