AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿತವಾಡ ಫಾಲ್ಸ್​ಗೆ ಬಿದ್ದು ನಾಲ್ವರು ಯುವತಿಯರ ಸಾವು, ಓರ್ವಳ ಸ್ಥಿತಿ ಗಂಭೀರ

ಬೆಳಗಾವಿಯಿಂದ ಕಿತವಾಡ ಫಾಲ್ಸ್‌ಗೆ ಪ್ರವಾಸಕ್ಕೆ ಹೋಗಿದ್ದ ಯುವತಿಯರ ಪೈಕಿ ಐವರು ಫಾಲ್ಸ್​ಗೆ ಬಿದ್ದು ನಾಲ್ವರು ಸಾವನ್ನಪ್ಪಿದರೆ ಓರ್ವಳ ಸ್ಥಿತಿ ಗಂಭೀರವಾಗಿದೆ.

ಕಿತವಾಡ ಫಾಲ್ಸ್​ಗೆ ಬಿದ್ದು ನಾಲ್ವರು ಯುವತಿಯರ ಸಾವು, ಓರ್ವಳ ಸ್ಥಿತಿ ಗಂಭೀರ
ಕಿತವಾಡ ಫಾಲ್ಸ್​ಗೆ ಬಿದ್ದು ನಾಲ್ವರು ಯುವತಿಯರ ಸಾವು, ಓರ್ವಳ ಸ್ಥಿತಿ ಗಂಭೀರ
TV9 Web
| Edited By: |

Updated on:Nov 26, 2022 | 4:21 PM

Share

ಬೆಳಗಾವಿ: ಬೆಳಗಾವಿಯಿಂದ ಕಿತವಾಡ ಫಾಲ್ಸ್‌ಗೆ (Kitwad falls) ಪ್ರವಾಸಕ್ಕೆ ಹೋಗಿದ್ದ ಯುವತಿಯರ ಪೈಕಿ ಐವರು ಫಾಲ್ಸ್​ಗೆ ಬಿದ್ದು ನಾಲ್ವರು ಸಾವನ್ನಪ್ಪಿದರೆ ಓರ್ವಳ ಸ್ಥಿತಿ ಗಂಭೀರವಾಗಿದೆ. ಯುವತಿಯರ ಗುಂಪೊಂದು ಬೆಳಗಾವಿಯಿಂದ ಫಾಲ್ಸ್ ನೋಡುವ ನಿಟ್ಟಿನಲ್ಲಿ ಪ್ರವಾಸ ಕೈಗೊಂಡಿದ್ದರು. ಫಾಲ್ಸ್ ವೀಕ್ಷಣೆ ವೇಳೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಈ ವೇಳೆ ಐವರು ಯುವತಿಯರು ಕಾಲು ಜಾರಿ ಫಾಲ್ಸ್​ಗೆ ಬಿದ್ದಿದ್ದಾರೆ. ಘಟನೆಯಲ್ಲಿ ಉಜ್ವಲ್ ನಗರ ಆಸೀಯಾ ಮುಜಾವರ್(17), ಅನಗೋಳದ ಕುದ್‌ಶೀಯಾ ಹಾಸ್‌ಂ ಪಟೇಲ್(20), ಝಟ್‌ಪಟ್ ಕಾಲೋನಿಯ ರುಕ್ಕಶಾರ್ ಭಿಸ್ತಿ(20), ತಸ್ಮಿಯಾ(20) ಸಾವನ್ನಪ್ಪಿದ್ದು, ಮತ್ತೋರ್ವಳ ಸ್ಥಿತಿ ಗಂಭೀರವಾಗಿದೆ.

ಕರ್ನಾಟಕ ಮಹಾರಾಷ್ಟ್ರ ಗಡಿಭಾಗದಲ್ಲಿ ಇರುವ ಕಿತವಾಡ ಫಾಲ್ಸ್​ಗೆ ಬೆಳಗಾವಿ ಕಾಮತ್​ಗಲ್ಲಿಯ ಮದರಸಾದಲ್ಲಿ ಓದುತ್ತಿದ್ದ 40 ಯುವತಿಯರು ಹೋಗಿದ್ದಾರೆ. ಈ ವೇಳೆ ಒಬ್ಬರಿಗೊಬ್ಬರು ಕೈ ಹಿಡಿದು ಸೆಲ್ಫಿ ಫೋಟೋ ತಗೆದುಕೊಳ್ಳುತ್ತಿದ್ದರು. ಈ ವೇಳೆ ಆಯ ತಪ್ಪಿ ಫಾಲ್ಸ್ ಮೇಲಿಂದ ಬಿದ್ದು ನಾಲ್ವರು ಸಾವನ್ನಪ್ಪಿದ್ದು, ಓರ್ವ ಯುವತಿಯ ಸ್ಥಿತಿ ಚಿಂತಾಜನಕವಾಗಿದೆ. ಈಕೆಯನ್ನು ಕೂಡಲೇ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಬಳಿ ಮೃತ ಯುವತಿಯರ ಕುಟುಂಸ್ಥರ ಕಣ್ಣೀರು ಸುರಿಸುತ್ತಿದ್ದಾರೆ.

ಇದನ್ನೂ ಓದಿ: Supreme Bail: 12 ಕೋಟಿ ವಂಚನೆ -ಸುಪ್ರೀಂ ಕೋರ್ಟ್ ಗೆ ಹೋಗಿ ಜಾಮೀನು ತಂದ ಡಿಸಿಸಿ ಬ್ಯಾಂಕ್ ಜವಾನ!

ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ

ಕಲಬುರಗಿ: ಐದು ವರ್ಷದ ಬಾಲಕಿ ಮೇಲೆ 40 ವರ್ಷದ ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಾಕಲೇಟ್ ಕೊಡಿಸುವುದಾಗಿ ಆಸೆಯೊಡ್ಡಿ ಬಾಲಕಿಯನ್ನು ಕೃಷಿ ಜಮೀನಿಗೆ ಕರೆದುಕೊಂಡು ಹೋಗಿದ್ದ ದುರುಳ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿ ಜೋರಾಗಿ ಕಿರುಚಾಡಿದ್ದಾಳೆ. ಬೊಬ್ಬೆ ಶಬ್ದ ಕೇಳಿ ಜನರು ಓಡೋಡಿ ಬಂದು ಜಮೀನನ್ನು ಸುತ್ತುವರೆದು ಕಾಮುಕನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡು ವಾಡಿ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:43 pm, Sat, 26 November 22

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!