AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿತವಾಡ ಫಾಲ್ಸ್​ಗೆ ಬಿದ್ದು ನಾಲ್ವರು ಯುವತಿಯರ ಸಾವು, ಓರ್ವಳ ಸ್ಥಿತಿ ಗಂಭೀರ

ಬೆಳಗಾವಿಯಿಂದ ಕಿತವಾಡ ಫಾಲ್ಸ್‌ಗೆ ಪ್ರವಾಸಕ್ಕೆ ಹೋಗಿದ್ದ ಯುವತಿಯರ ಪೈಕಿ ಐವರು ಫಾಲ್ಸ್​ಗೆ ಬಿದ್ದು ನಾಲ್ವರು ಸಾವನ್ನಪ್ಪಿದರೆ ಓರ್ವಳ ಸ್ಥಿತಿ ಗಂಭೀರವಾಗಿದೆ.

ಕಿತವಾಡ ಫಾಲ್ಸ್​ಗೆ ಬಿದ್ದು ನಾಲ್ವರು ಯುವತಿಯರ ಸಾವು, ಓರ್ವಳ ಸ್ಥಿತಿ ಗಂಭೀರ
ಕಿತವಾಡ ಫಾಲ್ಸ್​ಗೆ ಬಿದ್ದು ನಾಲ್ವರು ಯುವತಿಯರ ಸಾವು, ಓರ್ವಳ ಸ್ಥಿತಿ ಗಂಭೀರ
TV9 Web
| Edited By: Rakesh Nayak Manchi|

Updated on:Nov 26, 2022 | 4:21 PM

Share

ಬೆಳಗಾವಿ: ಬೆಳಗಾವಿಯಿಂದ ಕಿತವಾಡ ಫಾಲ್ಸ್‌ಗೆ (Kitwad falls) ಪ್ರವಾಸಕ್ಕೆ ಹೋಗಿದ್ದ ಯುವತಿಯರ ಪೈಕಿ ಐವರು ಫಾಲ್ಸ್​ಗೆ ಬಿದ್ದು ನಾಲ್ವರು ಸಾವನ್ನಪ್ಪಿದರೆ ಓರ್ವಳ ಸ್ಥಿತಿ ಗಂಭೀರವಾಗಿದೆ. ಯುವತಿಯರ ಗುಂಪೊಂದು ಬೆಳಗಾವಿಯಿಂದ ಫಾಲ್ಸ್ ನೋಡುವ ನಿಟ್ಟಿನಲ್ಲಿ ಪ್ರವಾಸ ಕೈಗೊಂಡಿದ್ದರು. ಫಾಲ್ಸ್ ವೀಕ್ಷಣೆ ವೇಳೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಈ ವೇಳೆ ಐವರು ಯುವತಿಯರು ಕಾಲು ಜಾರಿ ಫಾಲ್ಸ್​ಗೆ ಬಿದ್ದಿದ್ದಾರೆ. ಘಟನೆಯಲ್ಲಿ ಉಜ್ವಲ್ ನಗರ ಆಸೀಯಾ ಮುಜಾವರ್(17), ಅನಗೋಳದ ಕುದ್‌ಶೀಯಾ ಹಾಸ್‌ಂ ಪಟೇಲ್(20), ಝಟ್‌ಪಟ್ ಕಾಲೋನಿಯ ರುಕ್ಕಶಾರ್ ಭಿಸ್ತಿ(20), ತಸ್ಮಿಯಾ(20) ಸಾವನ್ನಪ್ಪಿದ್ದು, ಮತ್ತೋರ್ವಳ ಸ್ಥಿತಿ ಗಂಭೀರವಾಗಿದೆ.

ಕರ್ನಾಟಕ ಮಹಾರಾಷ್ಟ್ರ ಗಡಿಭಾಗದಲ್ಲಿ ಇರುವ ಕಿತವಾಡ ಫಾಲ್ಸ್​ಗೆ ಬೆಳಗಾವಿ ಕಾಮತ್​ಗಲ್ಲಿಯ ಮದರಸಾದಲ್ಲಿ ಓದುತ್ತಿದ್ದ 40 ಯುವತಿಯರು ಹೋಗಿದ್ದಾರೆ. ಈ ವೇಳೆ ಒಬ್ಬರಿಗೊಬ್ಬರು ಕೈ ಹಿಡಿದು ಸೆಲ್ಫಿ ಫೋಟೋ ತಗೆದುಕೊಳ್ಳುತ್ತಿದ್ದರು. ಈ ವೇಳೆ ಆಯ ತಪ್ಪಿ ಫಾಲ್ಸ್ ಮೇಲಿಂದ ಬಿದ್ದು ನಾಲ್ವರು ಸಾವನ್ನಪ್ಪಿದ್ದು, ಓರ್ವ ಯುವತಿಯ ಸ್ಥಿತಿ ಚಿಂತಾಜನಕವಾಗಿದೆ. ಈಕೆಯನ್ನು ಕೂಡಲೇ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಬಳಿ ಮೃತ ಯುವತಿಯರ ಕುಟುಂಸ್ಥರ ಕಣ್ಣೀರು ಸುರಿಸುತ್ತಿದ್ದಾರೆ.

ಇದನ್ನೂ ಓದಿ: Supreme Bail: 12 ಕೋಟಿ ವಂಚನೆ -ಸುಪ್ರೀಂ ಕೋರ್ಟ್ ಗೆ ಹೋಗಿ ಜಾಮೀನು ತಂದ ಡಿಸಿಸಿ ಬ್ಯಾಂಕ್ ಜವಾನ!

ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ

ಕಲಬುರಗಿ: ಐದು ವರ್ಷದ ಬಾಲಕಿ ಮೇಲೆ 40 ವರ್ಷದ ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಾಕಲೇಟ್ ಕೊಡಿಸುವುದಾಗಿ ಆಸೆಯೊಡ್ಡಿ ಬಾಲಕಿಯನ್ನು ಕೃಷಿ ಜಮೀನಿಗೆ ಕರೆದುಕೊಂಡು ಹೋಗಿದ್ದ ದುರುಳ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿ ಜೋರಾಗಿ ಕಿರುಚಾಡಿದ್ದಾಳೆ. ಬೊಬ್ಬೆ ಶಬ್ದ ಕೇಳಿ ಜನರು ಓಡೋಡಿ ಬಂದು ಜಮೀನನ್ನು ಸುತ್ತುವರೆದು ಕಾಮುಕನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡು ವಾಡಿ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:43 pm, Sat, 26 November 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು