ಬೆಳಗಾವಿ: ಪ್ರೀತಿಸಿ ಮದುವೆಯಾದ ಹೆಂಡತಿಗೆ ಚಟ್ಟಕಟ್ಟಿದ ಪತಿ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ನಡೆದ ಅದೊಂದು ಘಟನೆಗೆ ಇಡೀ ಗ್ರಾಮದ ಜನರು ಬೆಚ್ಚಿಬಿದ್ದಿದ್ದಾರೆ. ಪ್ರೀತಿಸಿ ಮದುವೆಯಾದ ಹೆಂಡತಿಗೆ ಪತಿಯೇ ಚಟ್ಟಕಟ್ಟಿದ್ದಾನೆ. ಆ ಮೂಲಕ ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯವಾಗಿದೆ. ಸದ್ಯ ದೊಡವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿ: ಪ್ರೀತಿಸಿ ಮದುವೆಯಾದ ಹೆಂಡತಿಗೆ ಚಟ್ಟಕಟ್ಟಿದ ಪತಿ
ಬಸವರಾಜ ಜೋಡಳ್ಳಿ
Image Credit source: tv9 kannada
Edited By:

Updated on: Mar 23, 2026 | 3:19 PM

ಬೆಳಗಾವಿ, ಮಾರ್ಚ್​​ 23: ಹೆಂಡತಿ ಮಲಗಿರುವಾಗಲೇ ಎಳೆದೊಯ್ದು ನಡುರಸ್ತೆಯಲ್ಲಿ ಕಲ್ಲಿನಿಂದ ಜಜ್ಜಿ ಗಂಡ ಬರ್ಬರವಾಗಿ ಹತ್ಯೆ (kill) ಮಾಡಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ನಡೆದಿದೆ. ತಾಯಿಗೆ ಬೈದಿದ್ದಕ್ಕೆ ಮತ್ತು ಪತ್ನಿ ಶೀಲ ಶಂಕಿಸಿ ಕೊಲೆ  ಬಸವರಾಜ ಜೋಡಳ್ಳಿಯಿಂದ ಶಿವಕ್ಕ ಜೋಡಳ್ಳಿ( 33)ಯ ಕೊಲೆ ಮಾಡಲಾಗಿದೆ. ಈ ಭಯಾನಕ ಘಟನೆಗೆ ಗೋವನಕೊಪ್ಪ ಗ್ರಾಮವೇ ಬೆಚ್ಚಿಬಿದ್ದಿದೆ. ದೊಡವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೀತಿಸಿ ಮದುವೆಯಾದ ಹೆಂಡತಿಗೆ ಚಟ್ಟಕಟ್ಟಿದ ಪತಿ

ಮೊದಲ ಗಂಡ ಅಕಾಲಿಕ ಮರಣದ ನಂತರ ಶಿವಕ್ಕ ಬಸವರಾಜ ಜೋಡಳ್ಳಿಯನ್ನ ಪ್ರೀತಿಸಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಇಬ್ಬರು 15 ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಅಂತರ್ಜಾತಿ ವಿವಾಹ ಮಾಡಿಕೊಂಡಿದ್ದರು. ಆದರೆ ಗಂಡನ ಕಿರುಕುಳಕ್ಕೆ ಬೇಸತ್ತ ಶಿವಕ್ಕ ತನ್ನಿಬ್ಬರು ಮಕ್ಕಳ ಜೊತೆಗೆ ಪ್ರತ್ಯೇಕವಾಗಿ ಮಠವೊಂದರಲ್ಲಿ ವಾಸವಾಗಿದ್ದರು.

ಇದನ್ನೂ ಓದಿ: 2 ವರ್ಷದಿಂದ ಮದುವೆಗೆ ದುಂಬಾಲು: ಯುವಕ ಕೊನೆಗೆ ಯುವತಿಗೆ ಮಾಡಿದ್ದೇನು ಗೊತ್ತಾ?

ಇಬ್ಬರು ಮಕ್ಕಳ ಜೊತೆಗೆ ವಾಸವಾಗಿದ್ದ ಶಿವಕ್ಕ, ಮೊದಲ‌ ಮಗಳನ್ನ ಗಂಡನ ಮನೆಯಲ್ಲಿ ಬಿಟ್ಟಿದ್ದಳು. ಮಗಳನ್ನ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಅಂತಾ ಅತ್ತೆ ಜೊತೆಗೆ ಫೊನ್​​ನಲ್ಲಿ ಜಗಳವಾಡಿದ್ದಾರೆ. ತಾಯಿಗೆ ಬೈದಿದ್ದಕ್ಕೆ ಮತ್ತು ಪತ್ನಿ ಶೀಲ ಶಂಕಿಸಿ ಶಿವಕ್ಕ ಮಲಗಿದಾಗಲೇ ಎಳೆದೊಯ್ದು ನಡುರಸ್ತೆಯಲ್ಲಿ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಆ ಮೂಲಕ ಪ್ರೀತಿಸಿ ಮದುವೆಯಾದ ಹೆಂಡತಿಗೆ ಪತಿ ಚಟ್ಟ ಕಟ್ಟಿದ್ದಾನೆ.

ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು 

ಇನ್ನು ಘಟನೆ ಬಗ್ಗೆ ಪ್ರತ್ಯಕ್ಷದರ್ಶಿಯೊಬ್ಬರು ಪ್ರತಿಕ್ರಿಯಿಸಿದ್ದು, ಬೆಳಗ್ಗೆ ಸುಮಾರು 7:30ರ ಸುಮಾರಿಗೆ ಘಟನೆ  ನಡೆದಿದೆ. ಮೊದಲು ಪತ್ನಿ ಮೇಲೆ ಹಲ್ಲೆ ಮಾಡಿದ್ದು, ನಂತರ ಚಾಕುವಿನಿಂದ ಇರಿದಿದ್ದಾನೆ. ಬಳಿಕ ಕಲ್ಲಿನಿಂದ ಬಜ್ಜಿ ಕೊಂದಿದ್ದಾನೆ. ಈ ದಂಪತಿಗೆ ಇಬ್ಬರು ಗಂಡು ಹಾಗೂ ಒಬ್ಬಳು ಹೆಣ್ಣು ಮಗಳಿದ್ದಾಳೆ. ಹೆಣ್ಣು ಮಗಳು ಸದ್ಯ ಅವರ ತಾಯಿಯ ಸಹೋದರನ ಬಳಿ ಇದ್ದಾಳೆ.

ಇದನ್ನೂ ಓದಿ: ಗಾಂಜಾ ಅಮಲು: ಸಿನಿಮೀಯ ರೀತಿಯಲ್ಲಿ ಅಪಹರಿಸಿ ಸ್ನೇಹಿತನನ್ನೇ ಕೊಂದು ಶವ ಸುಟ್ಟ ದುಷ್ಟರು

ಪತಿ ಬಸವರಾಜ್ ಜೋಡಳ್ಳಿ ವೃತ್ತಿಯಲ್ಲಿ ಡ್ರೈವರ್ ಆಗಿದ್ದಾನೆ. ಈ ದಂಪತಿ ಆಗಾಗ ಜಗಳವಾಡುತ್ತಿದ್ದು, ಪೊಲೀಸ್​ ಠಾಣೆ ಮೆಟ್ಟಿಲೇರಿದ್ದರು. ಜಗಳದಿಂದಾಗಿ ಪತಿ ಊರು ಬಿಟ್ಟು ಹೋಗಿದ್ದ. ಇತ್ತೀಚೆಗಷ್ಟೇ ಗ್ರಾಮಕ್ಕೆ ಮರಳಿದ್ದ. ಕಳೆದ ಎರಡು-ಮೂರು ವರ್ಷಗಳಿಂದ ಇಬ್ಬರೂ ಬೇರೆ ಬೇರೆಯಾಗಿ ವಾಸಿಸುತ್ತಿದ್ದರು ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us