Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಹಾಡಹಗಲೇ 24 ಬಾರಿ ಕೊಚ್ಚಿ ಕೊಲೆ ಮಾಡಲು ಯತ್ನ: ಸಂತ್ರಸ್ತ ಬದುಕುಳಿದಿದ್ದೇ ಪವಾಡ!

ಬೆಳಗಾವಿಯ ಮಲ್ಲಮ್ಮನ ಬೆಳವಡಿ ಗ್ರಾಮದಲ್ಲಿ ಅನೈತಿಕ ಸಂಬಂಧದ ಆರೋಪದ ಹಿನ್ನೆಲೆಯಲ್ಲಿ ಭೀಕರ ಘಟನೆ ನಡೆದಿದೆ. ಮುತ್ತು ಗಣಾಚಾರಿ ಎಂಬಾತ ತನ್ನ ಪತ್ನಿಯ ಹಿಂದಿನ ಪ್ರೇಮಿಯಾದ ಮಕ್ತುಮ್ ತಟಗಾರ್ ಅವರ ಮೇಲೆ ಕುಡುಗೋಲಿನಿಂದ 24 ಬಾರಿ ಹಲ್ಲೆ ಮಾಡಿದ್ದಾನೆ. ಗಂಭೀರ ಗಾಯಗೊಂಡ ಮಕ್ತುಮ್ ಅವರನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಮುತ್ತು ಗಣಾಚಾರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿಯಲ್ಲಿ ಹಾಡಹಗಲೇ 24 ಬಾರಿ ಕೊಚ್ಚಿ ಕೊಲೆ ಮಾಡಲು ಯತ್ನ: ಸಂತ್ರಸ್ತ ಬದುಕುಳಿದಿದ್ದೇ ಪವಾಡ!
ಆರೋಪಿ ಮುತ್ತು ಗಣಾಚಾರಿ
Follow us
Sahadev Mane
| Updated By: ವಿವೇಕ ಬಿರಾದಾರ

Updated on:Dec 25, 2024 | 8:38 AM

ಬೆಳಗಾವಿ, ಡಿಸೆಂಬರ್​​ 25: ಅನೈತಿಕ ಸಂಬಂಧ ಆರೋಪ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಹಾಡಹಗಲೇ ಕುಡುಗೋಲಿನಿಂದ 24 ಬಾರಿ ಕೊಚ್ಚಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಬೆಳಗಾವಿ (Belagavi) ಜಿಲ್ಲೆ ಮಲ್ಲಮ್ಮನ ಬೆಳವಡಿ ಗ್ರಾಮದಲ್ಲಿ ನಡೆದಿದೆ. ಅರವಳ್ಳಿ ಗ್ರಾಮದ ಮಕ್ತುಮ್ ತಟಗಾರ್‌ ಹಲ್ಲೆಗೊಳಗಾದ ವ್ಯಕ್ತಿ. ಮುತ್ತು ಗಣಾಚಾರಿ ಹಲ್ಲೆ ಮಾಡಿದ ಆರೋಪಿ.

ಎಂಟು ತಿಂಗಳ ಹಿಂದಷ್ಟೇ ಗಣಾಚಾರಿ ಮದುವೆಯಾಗಿದೆ. ಆದರೆ, ಮುತ್ತು ಗಣಾಚಾರಿ ಪತ್ನಿಯನ್ನು ಮಕ್ತುಮ್ ತಟಗಾರ್‌ ಈ ಹಿಂದೆ ಪ್ರೀತಿಸ್ತಿದ್ದನಂತೆ. ಮದುವೆ ಬಳಿಕವೂ ಗಣಾಚಾರಿ ಪತ್ನಿಯ ಜೊತೆ ಮಕ್ತುಮ್ ಸಂಪರ್ಕದಲ್ಲಿ ಇದ್ದನಂತೆ. ಈ ವಿಷಯ ಮುತ್ತು ಗಣಾಚಾರಿಗೆ ಗೊತ್ತಾಗಿದೆ. ಈ ವಿಚಾರವಾಗಿ ಮುತ್ತು ಗಣಾಚಾರಿ ಮತ್ತು ಆತನ ಪತ್ನಿಯ ನಡುವೆ ಗಲಾಟೆಯಾಗಿದೆ. ಪತಿ ಮುತ್ತು ಗಣಾಚಾರಿಯನ್ನು ಬಿಟ್ಟಯ ಪತ್ನಿ ತವರು ಮನೆ ಸೇರಿದ್ದಾಳೆ.

ಇದನ್ನೇ ಮುಂದಿಟ್ಟುಕೊಂಡು ಮುಕ್ತುಮ್, ಮುತ್ತು ಗಣಾಚಾರಿಗೆ ರೇಗಿಸುತ್ತಿದ್ದನಂತೆ. ಇದರಿಂದ ಮುತ್ತು ಗಣಾಚಾರಿ ಆಕ್ರೋಶಗೊಂಡು, ಸಂತೆಗೆ ಬಂದಿದ್ದ ಮುಕ್ತುಮ್ ತಟಗಾರ್ ಮೇಲೆ ಕುಡುಗೋಲು ಬೀಸಿದ್ದಾನೆ. ಕೆಳಗೆ ಬೀಳುತ್ತಿದ್ದಂತೆ ಬರೋಬ್ಬರಿ 24 ಬಾರಿ ಕೊಚ್ಚಿ ಕೊಲೆ ಮಾಡಲು ಯತ್ನಿಸಿದ್ದಾನೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಮಕ್ತುಮ್​​ ತಟಗಾರ್​ನನ್ನು ಬೈಲಹೊಂಗಲ ಸರ್ಕಾರಿ ಆಸ್ಪತ್ರೆಗೆ ದಾಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.

ಕೃತ್ಯ ಎಸಗಿ ಬೈಕ್​​ನಲ್ಲಿ ಪರಾರಿ​​ಯಾಗಲು ಯತ್ನಿಸುತ್ತಿದ್ದ ಆರೋಪಿ ಮುತ್ತು ಗಣಾಚಾರಿಯನ್ನು ಸೋಮವಾರ ಪೇಟೆಯಲ್ಲಿ ಕಿತ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ದೊಡ್ಡವಾಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅನೈತಿಕ ಸಂಬಂಧ ಆರೋಪಕ್ಕೆ ಪಾಪಿ ರಾಕ್ಷನಂತೆ ವರ್ತಿಸಿದ್ದಾನೆ. ಬೆಳಗಾವಿ ಜನ ನಡುಗಿ ಹೋಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:34 am, Wed, 25 December 24

ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ