AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಹಾಡಹಗಲೇ 24 ಬಾರಿ ಕೊಚ್ಚಿ ಕೊಲೆ ಮಾಡಲು ಯತ್ನ: ಸಂತ್ರಸ್ತ ಬದುಕುಳಿದಿದ್ದೇ ಪವಾಡ!

ಬೆಳಗಾವಿಯ ಮಲ್ಲಮ್ಮನ ಬೆಳವಡಿ ಗ್ರಾಮದಲ್ಲಿ ಅನೈತಿಕ ಸಂಬಂಧದ ಆರೋಪದ ಹಿನ್ನೆಲೆಯಲ್ಲಿ ಭೀಕರ ಘಟನೆ ನಡೆದಿದೆ. ಮುತ್ತು ಗಣಾಚಾರಿ ಎಂಬಾತ ತನ್ನ ಪತ್ನಿಯ ಹಿಂದಿನ ಪ್ರೇಮಿಯಾದ ಮಕ್ತುಮ್ ತಟಗಾರ್ ಅವರ ಮೇಲೆ ಕುಡುಗೋಲಿನಿಂದ 24 ಬಾರಿ ಹಲ್ಲೆ ಮಾಡಿದ್ದಾನೆ. ಗಂಭೀರ ಗಾಯಗೊಂಡ ಮಕ್ತುಮ್ ಅವರನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಮುತ್ತು ಗಣಾಚಾರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿಯಲ್ಲಿ ಹಾಡಹಗಲೇ 24 ಬಾರಿ ಕೊಚ್ಚಿ ಕೊಲೆ ಮಾಡಲು ಯತ್ನ: ಸಂತ್ರಸ್ತ ಬದುಕುಳಿದಿದ್ದೇ ಪವಾಡ!
ಆರೋಪಿ ಮುತ್ತು ಗಣಾಚಾರಿ
ಸಹದೇವ್​ ಮಾನೆ
| Edited By: ವಿವೇಕ ಬಿರಾದಾರ|

Updated on:Dec 25, 2024 | 8:38 AM

Share

ಬೆಳಗಾವಿ, ಡಿಸೆಂಬರ್​​ 25: ಅನೈತಿಕ ಸಂಬಂಧ ಆರೋಪ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಹಾಡಹಗಲೇ ಕುಡುಗೋಲಿನಿಂದ 24 ಬಾರಿ ಕೊಚ್ಚಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಬೆಳಗಾವಿ (Belagavi) ಜಿಲ್ಲೆ ಮಲ್ಲಮ್ಮನ ಬೆಳವಡಿ ಗ್ರಾಮದಲ್ಲಿ ನಡೆದಿದೆ. ಅರವಳ್ಳಿ ಗ್ರಾಮದ ಮಕ್ತುಮ್ ತಟಗಾರ್‌ ಹಲ್ಲೆಗೊಳಗಾದ ವ್ಯಕ್ತಿ. ಮುತ್ತು ಗಣಾಚಾರಿ ಹಲ್ಲೆ ಮಾಡಿದ ಆರೋಪಿ.

ಎಂಟು ತಿಂಗಳ ಹಿಂದಷ್ಟೇ ಗಣಾಚಾರಿ ಮದುವೆಯಾಗಿದೆ. ಆದರೆ, ಮುತ್ತು ಗಣಾಚಾರಿ ಪತ್ನಿಯನ್ನು ಮಕ್ತುಮ್ ತಟಗಾರ್‌ ಈ ಹಿಂದೆ ಪ್ರೀತಿಸ್ತಿದ್ದನಂತೆ. ಮದುವೆ ಬಳಿಕವೂ ಗಣಾಚಾರಿ ಪತ್ನಿಯ ಜೊತೆ ಮಕ್ತುಮ್ ಸಂಪರ್ಕದಲ್ಲಿ ಇದ್ದನಂತೆ. ಈ ವಿಷಯ ಮುತ್ತು ಗಣಾಚಾರಿಗೆ ಗೊತ್ತಾಗಿದೆ. ಈ ವಿಚಾರವಾಗಿ ಮುತ್ತು ಗಣಾಚಾರಿ ಮತ್ತು ಆತನ ಪತ್ನಿಯ ನಡುವೆ ಗಲಾಟೆಯಾಗಿದೆ. ಪತಿ ಮುತ್ತು ಗಣಾಚಾರಿಯನ್ನು ಬಿಟ್ಟಯ ಪತ್ನಿ ತವರು ಮನೆ ಸೇರಿದ್ದಾಳೆ.

ಇದನ್ನೇ ಮುಂದಿಟ್ಟುಕೊಂಡು ಮುಕ್ತುಮ್, ಮುತ್ತು ಗಣಾಚಾರಿಗೆ ರೇಗಿಸುತ್ತಿದ್ದನಂತೆ. ಇದರಿಂದ ಮುತ್ತು ಗಣಾಚಾರಿ ಆಕ್ರೋಶಗೊಂಡು, ಸಂತೆಗೆ ಬಂದಿದ್ದ ಮುಕ್ತುಮ್ ತಟಗಾರ್ ಮೇಲೆ ಕುಡುಗೋಲು ಬೀಸಿದ್ದಾನೆ. ಕೆಳಗೆ ಬೀಳುತ್ತಿದ್ದಂತೆ ಬರೋಬ್ಬರಿ 24 ಬಾರಿ ಕೊಚ್ಚಿ ಕೊಲೆ ಮಾಡಲು ಯತ್ನಿಸಿದ್ದಾನೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಮಕ್ತುಮ್​​ ತಟಗಾರ್​ನನ್ನು ಬೈಲಹೊಂಗಲ ಸರ್ಕಾರಿ ಆಸ್ಪತ್ರೆಗೆ ದಾಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.

ಕೃತ್ಯ ಎಸಗಿ ಬೈಕ್​​ನಲ್ಲಿ ಪರಾರಿ​​ಯಾಗಲು ಯತ್ನಿಸುತ್ತಿದ್ದ ಆರೋಪಿ ಮುತ್ತು ಗಣಾಚಾರಿಯನ್ನು ಸೋಮವಾರ ಪೇಟೆಯಲ್ಲಿ ಕಿತ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ದೊಡ್ಡವಾಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅನೈತಿಕ ಸಂಬಂಧ ಆರೋಪಕ್ಕೆ ಪಾಪಿ ರಾಕ್ಷನಂತೆ ವರ್ತಿಸಿದ್ದಾನೆ. ಬೆಳಗಾವಿ ಜನ ನಡುಗಿ ಹೋಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:34 am, Wed, 25 December 24

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ