AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿ ಹೆಂಡ್ತಿಯನ್ನೇ ಹತ್ಯೆ ಮಾಡಿದನೇ ಗಂಡ, ಅಪ್ರಾಪ್ತ ಬಾಲಕಿ ಕುಟುಂಬಸ್ಥರ ಆರೋಪವೇನು?

ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ಅಪ್ರಾಪ್ತೆಯನ್ನ ಮದುವೆಯಾಗಿ ಗರ್ಭಿಣಿ ಮಾಡಿ ಗಂಡನೇ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಆದರೆ, ಬಿಪಿ ಲೋ ಆಗಿ ಮಗಳು ಮೃತಪಟ್ಟಿದ್ದಾಳೆ ಎಂದು ಗಂಡ ಸಾಹಿಲ್ ಬಾಲಕಿಯ ಪೋಷಕರಿಗೆ ಕರೆ ಮಾಡಿದ್ದ. ಸ್ಥಳಕ್ಕೆ ಹೋಗಿ ನೋಡಿದಾಗ ಬಾಲಕಿ ಕತ್ತಲ್ಲಿ ಕಪ್ಪು ಕಲೆಗಳು ಕಂಡು ಕೊಲೆಯ ಶಂಕೆ ವ್ಯಕ್ತವಾಗಿದೆ.

ಗರ್ಭಿಣಿ ಹೆಂಡ್ತಿಯನ್ನೇ ಹತ್ಯೆ ಮಾಡಿದನೇ ಗಂಡ, ಅಪ್ರಾಪ್ತ ಬಾಲಕಿ ಕುಟುಂಬಸ್ಥರ ಆರೋಪವೇನು?
ಆರೋಪಿ ಗಂಡ, ಮೃತ ಅಪ್ರಾಪ್ತ ಬಾಲಕಿ
Sahadev Mane
| Edited By: ಕಿರಣ್ ಹನುಮಂತ್​ ಮಾದಾರ್|

Updated on: Mar 15, 2024 | 4:18 PM

Share

ಬೆಳಗಾವಿ, ಮಾ.15: ಅಪ್ರಾಪ್ತೆಯನ್ನ ಮದುವೆಯಾಗಿ ಗರ್ಭಿಣಿ ಮಾಡಿ ಗಂಡನೇ ಕೊಲೆ ಮಾಡಿರುವ ಆರೋಪ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ಕೇಳಿಬಂದಿದೆ. ಹತ್ತು ತಿಂಗಳ ಹಿಂದೆ 17 ವರ್ಷದ ಅಪ್ರಾಪ್ತೆಯನ್ನ ಸಾಹಿಲ್ ಬಾಗೇವಾಡಿ ಮದುವೆ ಆಗಿದ್ದ. ಸದ್ಯ ನಾಲ್ಕು ತಿಂಗಳ ಗರ್ಭಿಣಿ ಕೂಡ ಆಗಿದ್ದಳು. ಮದುವೆ ಆದ ಬಳಿಕ ಗಂಡ ಸಾಹಿಲ್ ನಿರಂತರವಾಗಿ ಕಿರುಕುಳ ನೀಡುತ್ತಿದ್ದ. ಈ ಹಿನ್ನಲೆ ಆಕೆಯ ಗಂಡ ಮತ್ತು ಅತ್ತೆ-ಮಾವ ಸೇರಿ ರಾತ್ರಿ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ಬಾಲಕಿ ಕುಟುಂಬಸ್ಥರು ಆರೋಪಿಸಿದ್ದಾರೆ.

ಲೋ ಬಿಪಿಯಿಂದ ಮೃತಪಟ್ಟಿದ್ದಾಳೆ ಎಂದು ಕರೆ ಮಾಡಿದ್ದ ಗಂಡ ಸಾಹಿಲ್

ಇನ್ನು ಬಿಪಿ ಲೋ ಆಗಿ ಮಗಳು ಮೃತಪಟ್ಟಿದ್ದಾಳೆ ಎಂದು ಗಂಡ ಸಾಹಿಲ್ ಬಾಲಕಿಯ ಪೋಷಕರಿಗೆ ಕರೆ ಮಾಡಿದ್ದ. ಸ್ಥಳಕ್ಕೆ ಹೋಗಿ ನೋಡಿದಾಗ ಬಾಲಕಿ ಕತ್ತಲ್ಲಿ ಕಪ್ಪು ಕಲೆಗಳು ಕಂಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಕೊಲೆ ಮಾಡಿದ ಬಳಿಕ ಬಿಪಿ ಲೋ ಆಗಿದೆ ಎಂದು ಸುಳ್ಳು ಹೇಳ್ತಿದ್ದಾರೆ ಎಂದು ಬಾಲಕಿ ಕುಟುಂಬಸ್ಥರ ಆರೋಪ ಮಾಡುತ್ತಿದ್ದಾರೆ. ಅಪ್ರಾಪ್ತ ಗರ್ಭಿಣಿ ಸಾವು ಹಿನ್ನೆಲೆ ತಹಶೀಲ್ದಾರ್ ಸಿದ್ದರಾಯ ಬೋಸಗಿ ಶವಾಗಾರಕ್ಕೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ:ಯಾದಗಿರಿ: ಕುಡಿದ ಮತ್ತಿನಲ್ಲಿ ಕೊಡಲಿಯಿಂದ ಕೊಚ್ಚಿ ಪತ್ನಿಯ ಭೀಕರ ಕೊಲೆ; ತಪ್ಪಿಸಲು ಹೋದ ಮಗನ ಮೇಲೂ ಹಲ್ಲೆ

ಗಂಡ ಸಾಹಿಲ್ ಸೇರಿ ಏಳು ಜನರ ವಿರುದ್ಧ ಕೇಸ್ ದಾಖಲು

ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸ್ ಕಾಯ್ದೆಯಡಿ ಗಂಡ ಸಾಹಿಲ್ ಸೇರಿದಂತೆ ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಮಗಳ ಮದುವೆ ಮಾಡಿದ ಹಿನ್ನೆಲೆ ಬಾಲಕಿ ತಂದೆ-ತಾಯಿ ವಿರುದ್ಧವೂ ಕೇಸ್ ದಾಖಲಾಗಿದ್ದು, ಈಗಾಗಲೇ ಗಂಡ ಸಾಹಿಲ್ ಸೇರಿ ಆರು ಜನರನ್ನ ಪೊಲೀಸರು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ