AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿ ಹೆಂಡ್ತಿಯನ್ನೇ ಹತ್ಯೆ ಮಾಡಿದನೇ ಗಂಡ, ಅಪ್ರಾಪ್ತ ಬಾಲಕಿ ಕುಟುಂಬಸ್ಥರ ಆರೋಪವೇನು?

ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ಅಪ್ರಾಪ್ತೆಯನ್ನ ಮದುವೆಯಾಗಿ ಗರ್ಭಿಣಿ ಮಾಡಿ ಗಂಡನೇ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಆದರೆ, ಬಿಪಿ ಲೋ ಆಗಿ ಮಗಳು ಮೃತಪಟ್ಟಿದ್ದಾಳೆ ಎಂದು ಗಂಡ ಸಾಹಿಲ್ ಬಾಲಕಿಯ ಪೋಷಕರಿಗೆ ಕರೆ ಮಾಡಿದ್ದ. ಸ್ಥಳಕ್ಕೆ ಹೋಗಿ ನೋಡಿದಾಗ ಬಾಲಕಿ ಕತ್ತಲ್ಲಿ ಕಪ್ಪು ಕಲೆಗಳು ಕಂಡು ಕೊಲೆಯ ಶಂಕೆ ವ್ಯಕ್ತವಾಗಿದೆ.

ಗರ್ಭಿಣಿ ಹೆಂಡ್ತಿಯನ್ನೇ ಹತ್ಯೆ ಮಾಡಿದನೇ ಗಂಡ, ಅಪ್ರಾಪ್ತ ಬಾಲಕಿ ಕುಟುಂಬಸ್ಥರ ಆರೋಪವೇನು?
ಆರೋಪಿ ಗಂಡ, ಮೃತ ಅಪ್ರಾಪ್ತ ಬಾಲಕಿ
Sahadev Mane
| Edited By: |

Updated on: Mar 15, 2024 | 4:18 PM

Share

ಬೆಳಗಾವಿ, ಮಾ.15: ಅಪ್ರಾಪ್ತೆಯನ್ನ ಮದುವೆಯಾಗಿ ಗರ್ಭಿಣಿ ಮಾಡಿ ಗಂಡನೇ ಕೊಲೆ ಮಾಡಿರುವ ಆರೋಪ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ಕೇಳಿಬಂದಿದೆ. ಹತ್ತು ತಿಂಗಳ ಹಿಂದೆ 17 ವರ್ಷದ ಅಪ್ರಾಪ್ತೆಯನ್ನ ಸಾಹಿಲ್ ಬಾಗೇವಾಡಿ ಮದುವೆ ಆಗಿದ್ದ. ಸದ್ಯ ನಾಲ್ಕು ತಿಂಗಳ ಗರ್ಭಿಣಿ ಕೂಡ ಆಗಿದ್ದಳು. ಮದುವೆ ಆದ ಬಳಿಕ ಗಂಡ ಸಾಹಿಲ್ ನಿರಂತರವಾಗಿ ಕಿರುಕುಳ ನೀಡುತ್ತಿದ್ದ. ಈ ಹಿನ್ನಲೆ ಆಕೆಯ ಗಂಡ ಮತ್ತು ಅತ್ತೆ-ಮಾವ ಸೇರಿ ರಾತ್ರಿ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ಬಾಲಕಿ ಕುಟುಂಬಸ್ಥರು ಆರೋಪಿಸಿದ್ದಾರೆ.

ಲೋ ಬಿಪಿಯಿಂದ ಮೃತಪಟ್ಟಿದ್ದಾಳೆ ಎಂದು ಕರೆ ಮಾಡಿದ್ದ ಗಂಡ ಸಾಹಿಲ್

ಇನ್ನು ಬಿಪಿ ಲೋ ಆಗಿ ಮಗಳು ಮೃತಪಟ್ಟಿದ್ದಾಳೆ ಎಂದು ಗಂಡ ಸಾಹಿಲ್ ಬಾಲಕಿಯ ಪೋಷಕರಿಗೆ ಕರೆ ಮಾಡಿದ್ದ. ಸ್ಥಳಕ್ಕೆ ಹೋಗಿ ನೋಡಿದಾಗ ಬಾಲಕಿ ಕತ್ತಲ್ಲಿ ಕಪ್ಪು ಕಲೆಗಳು ಕಂಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಕೊಲೆ ಮಾಡಿದ ಬಳಿಕ ಬಿಪಿ ಲೋ ಆಗಿದೆ ಎಂದು ಸುಳ್ಳು ಹೇಳ್ತಿದ್ದಾರೆ ಎಂದು ಬಾಲಕಿ ಕುಟುಂಬಸ್ಥರ ಆರೋಪ ಮಾಡುತ್ತಿದ್ದಾರೆ. ಅಪ್ರಾಪ್ತ ಗರ್ಭಿಣಿ ಸಾವು ಹಿನ್ನೆಲೆ ತಹಶೀಲ್ದಾರ್ ಸಿದ್ದರಾಯ ಬೋಸಗಿ ಶವಾಗಾರಕ್ಕೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ:ಯಾದಗಿರಿ: ಕುಡಿದ ಮತ್ತಿನಲ್ಲಿ ಕೊಡಲಿಯಿಂದ ಕೊಚ್ಚಿ ಪತ್ನಿಯ ಭೀಕರ ಕೊಲೆ; ತಪ್ಪಿಸಲು ಹೋದ ಮಗನ ಮೇಲೂ ಹಲ್ಲೆ

ಗಂಡ ಸಾಹಿಲ್ ಸೇರಿ ಏಳು ಜನರ ವಿರುದ್ಧ ಕೇಸ್ ದಾಖಲು

ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸ್ ಕಾಯ್ದೆಯಡಿ ಗಂಡ ಸಾಹಿಲ್ ಸೇರಿದಂತೆ ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಮಗಳ ಮದುವೆ ಮಾಡಿದ ಹಿನ್ನೆಲೆ ಬಾಲಕಿ ತಂದೆ-ತಾಯಿ ವಿರುದ್ಧವೂ ಕೇಸ್ ದಾಖಲಾಗಿದ್ದು, ಈಗಾಗಲೇ ಗಂಡ ಸಾಹಿಲ್ ಸೇರಿ ಆರು ಜನರನ್ನ ಪೊಲೀಸರು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sahadev Mane
Sahadev Mane
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ