AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿ ಹೆಂಡ್ತಿಯನ್ನೇ ಹತ್ಯೆ ಮಾಡಿದನೇ ಗಂಡ, ಅಪ್ರಾಪ್ತ ಬಾಲಕಿ ಕುಟುಂಬಸ್ಥರ ಆರೋಪವೇನು?

ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ಅಪ್ರಾಪ್ತೆಯನ್ನ ಮದುವೆಯಾಗಿ ಗರ್ಭಿಣಿ ಮಾಡಿ ಗಂಡನೇ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಆದರೆ, ಬಿಪಿ ಲೋ ಆಗಿ ಮಗಳು ಮೃತಪಟ್ಟಿದ್ದಾಳೆ ಎಂದು ಗಂಡ ಸಾಹಿಲ್ ಬಾಲಕಿಯ ಪೋಷಕರಿಗೆ ಕರೆ ಮಾಡಿದ್ದ. ಸ್ಥಳಕ್ಕೆ ಹೋಗಿ ನೋಡಿದಾಗ ಬಾಲಕಿ ಕತ್ತಲ್ಲಿ ಕಪ್ಪು ಕಲೆಗಳು ಕಂಡು ಕೊಲೆಯ ಶಂಕೆ ವ್ಯಕ್ತವಾಗಿದೆ.

ಗರ್ಭಿಣಿ ಹೆಂಡ್ತಿಯನ್ನೇ ಹತ್ಯೆ ಮಾಡಿದನೇ ಗಂಡ, ಅಪ್ರಾಪ್ತ ಬಾಲಕಿ ಕುಟುಂಬಸ್ಥರ ಆರೋಪವೇನು?
ಆರೋಪಿ ಗಂಡ, ಮೃತ ಅಪ್ರಾಪ್ತ ಬಾಲಕಿ
Sahadev Mane
| Edited By: |

Updated on: Mar 15, 2024 | 4:18 PM

Share

ಬೆಳಗಾವಿ, ಮಾ.15: ಅಪ್ರಾಪ್ತೆಯನ್ನ ಮದುವೆಯಾಗಿ ಗರ್ಭಿಣಿ ಮಾಡಿ ಗಂಡನೇ ಕೊಲೆ ಮಾಡಿರುವ ಆರೋಪ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ಕೇಳಿಬಂದಿದೆ. ಹತ್ತು ತಿಂಗಳ ಹಿಂದೆ 17 ವರ್ಷದ ಅಪ್ರಾಪ್ತೆಯನ್ನ ಸಾಹಿಲ್ ಬಾಗೇವಾಡಿ ಮದುವೆ ಆಗಿದ್ದ. ಸದ್ಯ ನಾಲ್ಕು ತಿಂಗಳ ಗರ್ಭಿಣಿ ಕೂಡ ಆಗಿದ್ದಳು. ಮದುವೆ ಆದ ಬಳಿಕ ಗಂಡ ಸಾಹಿಲ್ ನಿರಂತರವಾಗಿ ಕಿರುಕುಳ ನೀಡುತ್ತಿದ್ದ. ಈ ಹಿನ್ನಲೆ ಆಕೆಯ ಗಂಡ ಮತ್ತು ಅತ್ತೆ-ಮಾವ ಸೇರಿ ರಾತ್ರಿ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ಬಾಲಕಿ ಕುಟುಂಬಸ್ಥರು ಆರೋಪಿಸಿದ್ದಾರೆ.

ಲೋ ಬಿಪಿಯಿಂದ ಮೃತಪಟ್ಟಿದ್ದಾಳೆ ಎಂದು ಕರೆ ಮಾಡಿದ್ದ ಗಂಡ ಸಾಹಿಲ್

ಇನ್ನು ಬಿಪಿ ಲೋ ಆಗಿ ಮಗಳು ಮೃತಪಟ್ಟಿದ್ದಾಳೆ ಎಂದು ಗಂಡ ಸಾಹಿಲ್ ಬಾಲಕಿಯ ಪೋಷಕರಿಗೆ ಕರೆ ಮಾಡಿದ್ದ. ಸ್ಥಳಕ್ಕೆ ಹೋಗಿ ನೋಡಿದಾಗ ಬಾಲಕಿ ಕತ್ತಲ್ಲಿ ಕಪ್ಪು ಕಲೆಗಳು ಕಂಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಕೊಲೆ ಮಾಡಿದ ಬಳಿಕ ಬಿಪಿ ಲೋ ಆಗಿದೆ ಎಂದು ಸುಳ್ಳು ಹೇಳ್ತಿದ್ದಾರೆ ಎಂದು ಬಾಲಕಿ ಕುಟುಂಬಸ್ಥರ ಆರೋಪ ಮಾಡುತ್ತಿದ್ದಾರೆ. ಅಪ್ರಾಪ್ತ ಗರ್ಭಿಣಿ ಸಾವು ಹಿನ್ನೆಲೆ ತಹಶೀಲ್ದಾರ್ ಸಿದ್ದರಾಯ ಬೋಸಗಿ ಶವಾಗಾರಕ್ಕೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ:ಯಾದಗಿರಿ: ಕುಡಿದ ಮತ್ತಿನಲ್ಲಿ ಕೊಡಲಿಯಿಂದ ಕೊಚ್ಚಿ ಪತ್ನಿಯ ಭೀಕರ ಕೊಲೆ; ತಪ್ಪಿಸಲು ಹೋದ ಮಗನ ಮೇಲೂ ಹಲ್ಲೆ

ಗಂಡ ಸಾಹಿಲ್ ಸೇರಿ ಏಳು ಜನರ ವಿರುದ್ಧ ಕೇಸ್ ದಾಖಲು

ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸ್ ಕಾಯ್ದೆಯಡಿ ಗಂಡ ಸಾಹಿಲ್ ಸೇರಿದಂತೆ ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಮಗಳ ಮದುವೆ ಮಾಡಿದ ಹಿನ್ನೆಲೆ ಬಾಲಕಿ ತಂದೆ-ತಾಯಿ ವಿರುದ್ಧವೂ ಕೇಸ್ ದಾಖಲಾಗಿದ್ದು, ಈಗಾಗಲೇ ಗಂಡ ಸಾಹಿಲ್ ಸೇರಿ ಆರು ಜನರನ್ನ ಪೊಲೀಸರು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ