AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿ ಹೆಂಡ್ತಿಯನ್ನೇ ಹತ್ಯೆ ಮಾಡಿದನೇ ಗಂಡ, ಅಪ್ರಾಪ್ತ ಬಾಲಕಿ ಕುಟುಂಬಸ್ಥರ ಆರೋಪವೇನು?

ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ಅಪ್ರಾಪ್ತೆಯನ್ನ ಮದುವೆಯಾಗಿ ಗರ್ಭಿಣಿ ಮಾಡಿ ಗಂಡನೇ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಆದರೆ, ಬಿಪಿ ಲೋ ಆಗಿ ಮಗಳು ಮೃತಪಟ್ಟಿದ್ದಾಳೆ ಎಂದು ಗಂಡ ಸಾಹಿಲ್ ಬಾಲಕಿಯ ಪೋಷಕರಿಗೆ ಕರೆ ಮಾಡಿದ್ದ. ಸ್ಥಳಕ್ಕೆ ಹೋಗಿ ನೋಡಿದಾಗ ಬಾಲಕಿ ಕತ್ತಲ್ಲಿ ಕಪ್ಪು ಕಲೆಗಳು ಕಂಡು ಕೊಲೆಯ ಶಂಕೆ ವ್ಯಕ್ತವಾಗಿದೆ.

ಗರ್ಭಿಣಿ ಹೆಂಡ್ತಿಯನ್ನೇ ಹತ್ಯೆ ಮಾಡಿದನೇ ಗಂಡ, ಅಪ್ರಾಪ್ತ ಬಾಲಕಿ ಕುಟುಂಬಸ್ಥರ ಆರೋಪವೇನು?
ಆರೋಪಿ ಗಂಡ, ಮೃತ ಅಪ್ರಾಪ್ತ ಬಾಲಕಿ
Sahadev Mane
| Edited By: |

Updated on: Mar 15, 2024 | 4:18 PM

Share

ಬೆಳಗಾವಿ, ಮಾ.15: ಅಪ್ರಾಪ್ತೆಯನ್ನ ಮದುವೆಯಾಗಿ ಗರ್ಭಿಣಿ ಮಾಡಿ ಗಂಡನೇ ಕೊಲೆ ಮಾಡಿರುವ ಆರೋಪ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ಕೇಳಿಬಂದಿದೆ. ಹತ್ತು ತಿಂಗಳ ಹಿಂದೆ 17 ವರ್ಷದ ಅಪ್ರಾಪ್ತೆಯನ್ನ ಸಾಹಿಲ್ ಬಾಗೇವಾಡಿ ಮದುವೆ ಆಗಿದ್ದ. ಸದ್ಯ ನಾಲ್ಕು ತಿಂಗಳ ಗರ್ಭಿಣಿ ಕೂಡ ಆಗಿದ್ದಳು. ಮದುವೆ ಆದ ಬಳಿಕ ಗಂಡ ಸಾಹಿಲ್ ನಿರಂತರವಾಗಿ ಕಿರುಕುಳ ನೀಡುತ್ತಿದ್ದ. ಈ ಹಿನ್ನಲೆ ಆಕೆಯ ಗಂಡ ಮತ್ತು ಅತ್ತೆ-ಮಾವ ಸೇರಿ ರಾತ್ರಿ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ಬಾಲಕಿ ಕುಟುಂಬಸ್ಥರು ಆರೋಪಿಸಿದ್ದಾರೆ.

ಲೋ ಬಿಪಿಯಿಂದ ಮೃತಪಟ್ಟಿದ್ದಾಳೆ ಎಂದು ಕರೆ ಮಾಡಿದ್ದ ಗಂಡ ಸಾಹಿಲ್

ಇನ್ನು ಬಿಪಿ ಲೋ ಆಗಿ ಮಗಳು ಮೃತಪಟ್ಟಿದ್ದಾಳೆ ಎಂದು ಗಂಡ ಸಾಹಿಲ್ ಬಾಲಕಿಯ ಪೋಷಕರಿಗೆ ಕರೆ ಮಾಡಿದ್ದ. ಸ್ಥಳಕ್ಕೆ ಹೋಗಿ ನೋಡಿದಾಗ ಬಾಲಕಿ ಕತ್ತಲ್ಲಿ ಕಪ್ಪು ಕಲೆಗಳು ಕಂಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಕೊಲೆ ಮಾಡಿದ ಬಳಿಕ ಬಿಪಿ ಲೋ ಆಗಿದೆ ಎಂದು ಸುಳ್ಳು ಹೇಳ್ತಿದ್ದಾರೆ ಎಂದು ಬಾಲಕಿ ಕುಟುಂಬಸ್ಥರ ಆರೋಪ ಮಾಡುತ್ತಿದ್ದಾರೆ. ಅಪ್ರಾಪ್ತ ಗರ್ಭಿಣಿ ಸಾವು ಹಿನ್ನೆಲೆ ತಹಶೀಲ್ದಾರ್ ಸಿದ್ದರಾಯ ಬೋಸಗಿ ಶವಾಗಾರಕ್ಕೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ:ಯಾದಗಿರಿ: ಕುಡಿದ ಮತ್ತಿನಲ್ಲಿ ಕೊಡಲಿಯಿಂದ ಕೊಚ್ಚಿ ಪತ್ನಿಯ ಭೀಕರ ಕೊಲೆ; ತಪ್ಪಿಸಲು ಹೋದ ಮಗನ ಮೇಲೂ ಹಲ್ಲೆ

ಗಂಡ ಸಾಹಿಲ್ ಸೇರಿ ಏಳು ಜನರ ವಿರುದ್ಧ ಕೇಸ್ ದಾಖಲು

ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸ್ ಕಾಯ್ದೆಯಡಿ ಗಂಡ ಸಾಹಿಲ್ ಸೇರಿದಂತೆ ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಮಗಳ ಮದುವೆ ಮಾಡಿದ ಹಿನ್ನೆಲೆ ಬಾಲಕಿ ತಂದೆ-ತಾಯಿ ವಿರುದ್ಧವೂ ಕೇಸ್ ದಾಖಲಾಗಿದ್ದು, ಈಗಾಗಲೇ ಗಂಡ ಸಾಹಿಲ್ ಸೇರಿ ಆರು ಜನರನ್ನ ಪೊಲೀಸರು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ