AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖತರ್ನಾಕ್ ಮರ್ಡರ್ ಸ್ಟೋರಿ! ಮನೆಯಲ್ಲಿ ಯಾರೂ ಇಲ್ಲ ಬಾ ಅಂತ ಕರೆಸಿಕೊಂಡಿದ್ದ ಪ್ರೇಯಸಿ ಮಾಡಿದ್ದು ಏನು ಗೊತ್ತಾ?

ತನಿಖೆ ವೇಳೆ ನಿಶ್ಚಿತಾರ್ಥವಾಗಿದ್ದ ಯುವತಿ ಜತೆಗೆ ಸಂಬಂಧ ಇಟ್ಟುಕೊಂಡಿದ್ದಕ್ಕೆ ಕೊಲೆ ಮಾಡಿರುವುದು ಬಯಲಾಗಿದೆ. ಯುವತಿ ಜತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕ ಮತ್ತು ಯುವತಿಯ ಕುಟುಂಬಸ್ಥರು ಸೇರಿಕೊಂಡು ಈ ಹತ್ಯೆ ಮಾಡಿದ್ದಾರೆ‌.

ಖತರ್ನಾಕ್ ಮರ್ಡರ್ ಸ್ಟೋರಿ! ಮನೆಯಲ್ಲಿ ಯಾರೂ ಇಲ್ಲ ಬಾ ಅಂತ ಕರೆಸಿಕೊಂಡಿದ್ದ ಪ್ರೇಯಸಿ ಮಾಡಿದ್ದು ಏನು ಗೊತ್ತಾ?
ಮನೆಯಲ್ಲಿ ಯಾರೂ ಇಲ್ಲ ಬಾ ಅಂತ ಕರೆಸಿಕೊಂಡಿದ್ದ ಪ್ರೇಯಸಿ ಮಾಡಿದ್ದು ಏನು ಗೊತ್ತಾ?
TV9 Web
| Updated By: Digi Tech Desk|

Updated on:Nov 28, 2022 | 6:15 PM

Share

ಬೆಳಗಾವಿ: ಇದು ಬೆಳಗಾವಿಯನ್ನೇ ಬೆಚ್ಚಿ ಬೀಳಿಸಿದ್ದ ಖತರ್ನಾಕ್ ಮರ್ಡರ್ ಸ್ಟೋರಿ (Belagavi murder case). ಮನೆಯಲ್ಲಿ ಯಾರೂ ಇಲ್ಲ ಬಾ ಅಂತ ಕರೆದ ಪ್ರೇಯಸಿ ಹಿಂದೆ ಹೋದವ ಹೆಣವಾಗಿದ್ದಾನೆ. ಗೋಕಾಕ್ ಪೊಲೀಸರು (gokak police) ನವಂಬರ್ 8ರಂದು ನಡೆದ ಕೊಲೆ ಪ್ರಕರಣವನ್ನು ಭೇದಿಸಿದ್ದಾರೆ. ಪ್ರೇಯಸಿ ಕಡೆಯಿಂದಲೇ ಪೋನ್ ಮಾಡಿಸಿ ಕರೆಸಿ ಪಕ್ಕಾ ಪ್ಲ್ಯಾನ್ ಮಾಡಿ ಯುವಕನ ಬರ್ಬರ ಹತ್ಯೆ ಮಾಡಲಾಗಿದೆ. ಗೋಕಾಕ್ ತಾಲೂಕಿನ ಶಿಂಧಿಕುರಬೇಟ ಗ್ರಾಮದ ಸೋಮಲಿಂಗ್ ಕಂಬಾರ (22) ಕೊಲೆಯಾದ ಯುವಕ. ಕೊಲೆಯಾದ ಯುವಕ, ಬೇರೆ ಯುವಕನ ಜತೆ ನಿಶ್ಚಿತಾರ್ಥವಾಗಿದ್ದ ಯುವತಿಯ ಜತೆ (lover) ಲವ್ವಿ ಡವ್ವಿ ಇಟ್ಟುಕೊಂಡಿದ್ದ. ಕೊಲೆ ಮಾಡುವ ಉದ್ದೇಶದಿಂದ ಪ್ರೇಯಿಸಿ ಕಡೆಯಿಂದ ಹಂತಕರು ಪೋನ್ ಮಾಡಿಸಿದ್ದರು. ಶಿವಲಿಂಗ ತಳವಾರ್, ಸಂತೋಷ್ ತಳವಾರ್ ಬಂಧಿತ ಆರೋಪಿಗಳು.

ನ‌.12ರಂದು ಬೆಳಗಾವಿ ‌ಜಿಲ್ಲೆಯ ಗೋಕಾಕ್ ಹೊರ ವಲಯದ ಶಿಂಗಳಾಪುರ ಬ್ರಿಡ್ಜ್‌ನಲ್ಲಿ ಶವ ಪತ್ತೆಯಾಗಿತ್ತು. ಈ ಕುರಿತು ಗೋಕಾಕ್ ಶಹರ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ತನಿಖೆ ವೇಳೆ ನಿಶ್ಚಿತಾರ್ಥವಾಗಿದ್ದ ಯುವತಿ ಜತೆಗೆ ಸಂಬಂಧ ಇಟ್ಟುಕೊಂಡಿದ್ದಕ್ಕೆ ಕೊಲೆ ಮಾಡಿರುವುದು ಬಯಲಾಗಿದೆ. ಯುವತಿ ಜತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕ ಮತ್ತು ಯುವತಿಯ ಕುಟುಂಬಸ್ಥರು ಸೇರಿಕೊಂಡು ಈ ಹತ್ಯೆ ಮಾಡಿದ್ದಾರೆ‌.

ಇದನ್ನೂ ಓದಿ: ‘ನಿಮಗೆ ಮದುವೆಯಾಗಿದೆಯಾ?’ ಬೆಂಗಳೂರಿನಲ್ಲಿಯೂ ಪ್ರತೀ ಬ್ರೋಕರ್ ಕೇಳುವುದು ಇದನ್ನೇ; ಆಕ್ರೋಶಗೊಂಡ ಮಹಿಳೆ

ಕುಟುಂಬಸ್ಥರು ಯುವತಿಗೆ ಹೆದರಿಸಿ ಸೋಮಲಿಂಗನಿಗೆ ಕರೆ ಮಾಡಿಸಿದ್ದಾರೆ. ಮನೆಯಲ್ಲಿ ಯಾರು ಇಲ್ಲಾ ಬಾ ಅಂತಾ ಯುವತಿ ಕಡೆಯಿಂದ ಮನೆಗೆ ಕರೆಯಿಸಿಕೊಂಡಿದ್ದಾರೆ. ನಂತರ ಆತನನ್ನ ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಉಸಿರುಗಟ್ಟಿಸಿ ಸಾಯಿಸಿದ್ದಾರೆ. ಸಾಕ್ಷ್ಯ ನಾಶ ಮಾಡುವ ಉದ್ದೇಶದಿಂದ ಹಂತಕರು ಸಿಮೆಂಟ್ ಕಂಬಕ್ಕೆ ಮೃತದೇಹವನ್ನು ಕಟ್ಟಿ ಘಟಪ್ರಭಾ ನದಿಗೆ ಎಸೆದಿದ್ದರು. ಮೃತನ ಕೈ ಮೇಲೆ ಮಾಮ್-ಡ್ಯಾಡ್ ಅಂತಾ ಬರೆದ ಟ್ಯಾಟೋ, ಕೈಯಲ್ಲಿದ್ದ ಖಡ್ಗ ನೋಡಿ ಪೊಲೀಸರು ಗುರುತು ಪತ್ತೆ ಹಚ್ಚಿದ್ದಾರೆ.

ಈ ವೇಳೆ ಸೋಮಲಿಂಗನ ಮೊಬೈಲ್ ಕಾಲ್ ಡಿಟೈಲ್ ತೆಗೆದು ಪರಿಶೀಲನೆ ನಡೆಸಿದ್ದ ಪೊಲೀಸರು, ಕೊನೆಯ ಪೋನ್ ಯುವತಿಯದ್ದು ಬಂದಿದ್ದರಿಂದ ಪ್ರೇಯಸಿಯನ್ನು ವಶಕ್ಕೆ ಪಡೆದಿದ್ದರು. ಪ್ರೇಯಸಿಯನ್ನು ವಶಕ್ಕೆ ಪಡೆದಾಗ ನಿಶ್ಚಿತಾರ್ಥ ಮಾಡಿಕೊಂಡಿದ್ದ ಶಿವಲಿಂಗ ಮತ್ತು ಚಿಕ್ಕಪ್ಪ ಸಂತೋಷ್ ಹೆಸರು ಬಾಯಿ ಬಿಟ್ಟಿದ್ದಳು. ಆಕೆಯ ಹೇಳಿಕೆ ಆಧಾರದ ಮೇಲೆ ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿ ತಾವೇ ಕೊಲೆ ಮಾಡಿದ್ದಾಗಿ ಹಂತಕರು ಒಪ್ಪಿಕೊಂಡಿದ್ದಾರೆ.

Published On - 5:08 pm, Mon, 28 November 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ