AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲವ್​ ಜಿಹಾದ್​: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಇಸ್ಲಾಂಗೆ ಮತಾಂತರಕ್ಕೆ ಯತ್ನ

ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯನ್ನು ಬೆಳಗಾವಿಗೆ ಕರೆದುಕೊಂಡು ಹೋಗಿ, ಲೈಂಗಿಕ ದೌರ್ಜನ್ಯವೆಸಗಿ, ಬಳಿಕ ಸಂತ್ರಸ್ತ ಮಹಿಳೆಯ ಖಾಸಗಿ ಫೋಟೋಗಳನ್ನು ಸೆರೆಹಿಡಿದು ಇಸ್ಲಾಂ ಧರ್ಮಕ್ಕೆ ಮತಾಂತರವಾಗುವಂತೆ ಪೀಡುಸುತ್ತಿದ್ದ ಏಳು ಆರೋಪಿಗಳ ವಿರುದ್ಧ ಸವದತ್ತಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರನ್ನು ಬಂಧಿಸಲಾಗಿದೆ.

ಲವ್​ ಜಿಹಾದ್​: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಇಸ್ಲಾಂಗೆ ಮತಾಂತರಕ್ಕೆ ಯತ್ನ
ಸಾಂದರ್ಭಿಕ ಚಿತ್ರ
Sahadev Mane
| Edited By: |

Updated on:Apr 22, 2024 | 6:30 AM

Share

ಬೆಳಗಾವಿ, ಏಪ್ರಿಲ್​ 21: ರಾಜ್ಯದಲ್ಲಿ ಲವ್ ಜಿಹಾದ್‌ನ (Love Jihad) ಮತ್ತೊಂದು ಕರಾಳ ಮುಖ ಅನಾವರಣಗೊಂಡಿದೆ. ಹಿಂದೂ (Hindu) ಯುವತಿಯರಷ್ಟೇ ಅಲ್ಲದೆ ವಿವಾಹಿತೆಯರನ್ನೂ ಲವ್ ಜಿಹಾದ್ ಜಾಲಕ್ಕೆ ತಳ್ಳಲು ಯತ್ನಿಸಿರುವ ಘಟನೆ ನಡೆದಿದೆ. ಕೆಲಸ ಕೊಡಿಸುತ್ತೇನೆಂದು ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ, ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿದ್ದ ಆರೋಪಿಗಳನ್ನು ಬೆಳಗಾವಿ (Belagavi) ಪೊಲೀಸರು (Police) ಬಂಧಿಸಿದ್ದಾರೆ. ಆರೀಫ್ ಮತ್ತು ಆತನ ಪತ್ನಿ ಬಂಧಿತ ಆರೋಪಿಗಳು.

ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ಸಂತ್ರಸ್ತ ಮಹಿಳೆ ವಾಸವಾಗಿದ್ದಾರೆ. ಸಂತ್ರಸ್ತ ಮಹಿಳೆಯ ಪತಿ ಮುನವಳ್ಳಿ ಪಟ್ಟಣದಲ್ಲಿ ಕಿರಾಣಿ ಅಂಗಡಿ ಹೊಂದಿದ್ದಾರೆ. ಪತಿ ಇಲ್ಲದಿದ್ದಾಗ ಸಂತ್ರಸ್ತ ಮಹಿಳೆ ಆಗಾಗ ಕಿರಾಣಿ ಅಂಗಡಿಯಲ್ಲಿ ಕೂತು, ವ್ಯಾಪಾರ ಮಾಡುತ್ತಿದ್ದರು. ಈ ವಿಚಾರ ತಿಳಿದ ಆರೋಪಿ ಆರೀಫ್ ಬೇಪಾರಿ ನೆರೆ ಮನೆಯವರೆಂದು ಮಹಿಳೆಯನ್ನು ಪರಿಚಯ ಮಾಡಿಕೊಂಡು, ಅವರ ಮೊಬೈಲ್ ನಂಬರ್ ಪಡೆದುಕೊಂಡಿದ್ದಾನೆ.

ಬಳಿಕ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯನ್ನು ಬೆಳಗಾವಿಗೆ ಕರೆದುಕೊಂಡುಹೋಗಿ ನಿರಂತರವಾಗಿ ‌ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬೆಳಗಾವಿ ಬಂದ ಬಳಿಕ ಆರೀಫ್‌ಗೆ ಮತ್ತೆ ಐವರು ದುಷ್ಕರ್ಮಿಗಳು ಸಾಥ್ ನೀಡಿದ್ದಾರೆ. ದುಷ್ಕರ್ಮಿಗಳು ಲೈಂಗಿಕ ದೌರ್ಜನ್ಯದ ಮತ್ತು ಮಹಿಳೆಯ ಖಾಸಗಿ ಫೋಟೋಗಳನ್ನು ಸೆರೆಹಿಡಿದು, ಮತಾಂತರಗೊಳ್ಳುವಂತೆ ಬ್ಯ್ಲಾಕ್​ ಮೇಲ್​ ಮಾಡಿದ್ದಾರೆ.

ಇದನ್ನೂ ಓದಿ: ಅವಳು ನನ್ನ ಜೊತೆ ಮಾತಾಡಲ್ಲ ಅಂದಳು, ಅದಕ್ಕೆ ಚಾಕು ಹಾಕಿದೆ; ಆರೋಪಿ ಫಯಾಜ್​

“ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಳ್ಳು ಇಲ್ಲದಿದ್ದರೆ ಫೋಟೋ ವೈರಲ್ ಮಾಡುತ್ತೇವೆ” ಅಂತ ಬ್ಯ್ಲಾಕ್​ ಮೇಲೆ ಮಾಡಿದ್ದಾರೆ. ಹಣೆಗೆ ಕುಂಕುಮ ಹಚ್ಚುವುದನ್ನು ನಿಲ್ಲಿಸಬೇಕು, ಹಿಂದೂ ಸಂಪ್ರದಾಯ ಬಿಡಬೇಕು. ನಿತ್ಯ ಬುರ್ಖಾ ಧರಿಸುವ ಜೊತೆಗೆ ಐದು ಸಲ ನಮಾಜ್ ಮಾಡಬೇಕು ಅಂತ ಕಾಡಿದ್ದಾರೆ. ಅಲ್ಲದೆ ದುಷ್ಕರ್ಮಿಗಳು ಒತ್ತಾಯ ಪೂರ್ವಕವಾಗಿ ಮಹಿಳೆಗೆ ಬುರ್ಖಾ ಧಾರಣೆ ‌ಮಾಡಿಸಿದ್ದಾರೆ.

ಮತಾಂತರಕ್ಕೆ ಯತ್ನಿಸಿದ್ದ ದುರಳರ ಜಾಲದಿಂದ ತಪ್ಪಿಸಿಕೊಂಡ ಸಂತ್ರಸ್ತ ಮಹಿಳೆ ಏಳು ಜನ ಆರೋಪಿಗಳ ವಿರುದ್ಧ ಸವದತ್ತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮುನವಳ್ಳಿ ಪಟ್ಟಣದ ಆರೀಫ್ ‌ಬೇಪಾರಿ, ಆದೀಲ್, ಶೋಯಲ್, ಮುಕ್ತಮ್, ಉಮರ್, ಕರೆವ್ವ ಕಟ್ಟಿಮನಿ ಹಾಗೂ ಕೌಸರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೂಡಲೆ ಆರೋಪಿಗಳನ್ನು ಬಂಧಿಸಿ ನ್ಯಾಯ ಕೊಡಿಸುವಂತೆ ಸಂತ್ರಸ್ತ ಮಹಿಳೆ ಆಗ್ರಹಿಸಿದ್ದಾರೆ ಎಂದು ಟಿವಿ9ಗೆ ಎಸ್ ಪಿ ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿದ್ದಾರೆ. ಸದ್ಯ ಪೊಲೀಸರು ಪ್ರಕರಣ ಸಂಬಂಧ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:01 pm, Sun, 21 April 24

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು