AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಗೆ ಹೋಗಿದ್ದ 14 ವರ್ಷದ ಬೆಳಗಾವಿಯ ಬಾಲಕಿ ಕಿಡ್ನಾಪ್: ಗುಜರಾತ್​ಗೆ ಕರೆದೊಯ್ದು ಅತ್ಯಾಚಾರ

ಬೆಳಗಾವಿ ಮೂಲದ ಬಾಲಕಿಯನ್ನು ಅಪಹರಿಸಿ ಗುಜರಾತ್​ಗೆ ಹೊತ್ತೊಯ್ದು ಲೌಂಗಿಕ ದೌರ್ಜನ್ಯ ಎಸಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಶಾಲೆಗೆ ಹೋಗಿದ್ದ 14 ವರ್ಷದ ಬೆಳಗಾವಿಯ ಬಾಲಕಿ ಕಿಡ್ನಾಪ್: ಗುಜರಾತ್​ಗೆ ಕರೆದೊಯ್ದು ಅತ್ಯಾಚಾರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 04, 2022 | 3:10 PM

Share

ಬೆಳಗಾವಿ: ಬೆಳಗಾವಿಯ(Belagavi) ಖಾಸಗಿ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ 14 ವರ್ಷದ ಬಾಲಕಿಯನ್ನು ಯುವಕನೊಬ್ಬ ಅಪಹರಿಸಿ ಗುಜರಾತ್‌ಗೆ ಕರೆದೊಯ್ದು ಅತ್ಯಾಚಾರ(Rape) ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ 4 ದಿನಗಳ ಹಿಂದೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಇದೀಗ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶಾಲೆಗೆ ಹೋಗಿದ್ದ 14 ವರ್ಷದ ಬಾಲಕಿ ವಾಪಸ್ ಮನೆ ಬರದೇ ಕಾಣೆಯಾಗಿದ್ದಳು,.ಇದರಿಂದ ಆಂತಂಕಗೊಂಡ ಬಾಲಕಿ ತಂದೆ, ಬೆಳಗಾವಿಯ ಕ್ಯಾಂಪ್ ಠಾಣೆಯಲ್ಲಿ ಮಗಳು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದರು. ಈ ಪ್ರಕರಣದ ತನಿಖೆ ಕೈಗೊಂಡ ಪೊಲೀಸರಿಗೆ ಬಾಲಕಿ ಗುಜರಾತ್​ನ(gujarat) ಅಹಮದಾಬಾದ್​ನಲ್ಲಿರುವುದು ಮಾಹಿತಿ ಸಿಕ್ಕಿದೆ. ಕೂಡಲೇ ಕಾರ್ಯಪ್ರವೃತವಾದ ಖಡೇಬಜಾರ್ ಎಸಿಪಿ ಚಂದ್ರಪ್ಪ ನೇತೃತ್ವದ ತಂಡ, ಆರೋಪಿಯನ್ನು ಬಂಧಿಸಿ ಬಾಲಕಿಯನ್ನು ರಕ್ಷಣೆ ಮಾಡಿ ಬೆಳಗಾವಿಗೆ ಕರೆದುಕೊಂಡು ಬಂದಿದ್ದಾರೆ.

ಇದನ್ನೂ ಓದಿ: ಪತ್ನಿ ಜೊತೆ ಅನೈತಿಕ ಸಂಬಂಧ ಶಂಕೆ; ಒಡಹುಟ್ಟಿದ ಅಣ್ಣನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ ತಮ್ಮ

ಪೋಷಕರೊಂದಿಗೆ ಬೆಳಗಾವಿಯಲ್ಲಿ ವಾಸವಿದ್ದ ಗುಜರಾತ್​ ಮೂಲದ 19 ವರ್ಷದ ಆಕಾಶ್ ದೋಡಿಯಾ ಎನ್ನುವ ಯುವಕ, ಬಾಲಕಿಯನ್ನು ಅಪಹರಿಸಿ ಗುಜರಾತ್​ನ ಅಹಮದಾಬಾದ್​ನ ತಮ್ಮ ಸಂಬಂಧಿಕರ ಮನೆಗೆ ಕರೆದುಕೊಂಡು ಹೋಗಿದ್ದಾನೆ. ನಂತರ ಎರಡು ದಿನ ನಿರಂತರವಾಗಿ ಬಾಲಕಿ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದ್ದು. ಈ ಬಗ್ಗೆ ಪೊಲೀಸರು ಆಕಾಶ್ ದೋಡಿಯಾ ಪೋಕ್ಸೋ ಕಾಯ್ದೆ ದೂರು ದಾಖಲಿಸಿಕೊಂಡು ಜೈಲಿಗೆ ಕಳುಹಿಸಿದ್ದಾರೆ.

ಇನ್ನು ಸಂತ್ರಸ್ತೆ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ತನಿಖೆ ಚುರುಕುಗೊಳಿಸಿದ್ದು, ಆರೋಪಿ ಬಾಲಕಿ ಮೇಲೆ ಲೌಂಗಿಕ ದೌರ್ಜನ್ಯ ಎಸಗಿದ್ದಾನೋ ಅಥವಾ ಇಲ್ಲ ಎನ್ನುವ ಬಗ್ಗೆ ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ವರದಿ ಬಂದ ಬಳಿಕ ಸತ್ಯಾಸತ್ಯತೆ ತಿಳಿಯಲಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್