AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿ ಆರೋಪಿ ಪರಾರಿ: ಕೋರ್ಟ್​ಗೆ ಹಾಜರುಪಡಿಸಲು ಕರೆತಂದಿದ್ದಾಗ ಎಸ್ಕೇಪ್​

ಕೋರ್ಟ್​ಗೆ ಹಾಜರುಪಡಿಸಲು ಕರೆತಂದಿದ್ದಾಗ ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿ ಆರೋಪಿ ಪರಾರಿಯಾಗಿರುವಂತಹ ಘಟನೆ ಬೆಳಗಾವಿಯ JMFC ಕೋರ್ಟ್ ಆವರಣದಲ್ಲಿ ನಡೆದಿದೆ. ಆರೋಪಿ ಎಸ್ಕೇಪ್ ಆಗುತ್ತಿದ್ದಂತೆ ಪೊಲೀಸರು ಹುಡುಕಾಡಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿ ಆರೋಪಿ ಪರಾರಿ: ಕೋರ್ಟ್​ಗೆ ಹಾಜರುಪಡಿಸಲು ಕರೆತಂದಿದ್ದಾಗ ಎಸ್ಕೇಪ್​
ಅಬ್ದುಲ್ ಗನಿ ಶಬ್ಬೀರ್
Follow us
Sahadev Mane
| Updated By: ಗಂಗಾಧರ​ ಬ. ಸಾಬೋಜಿ

Updated on: Jan 11, 2024 | 6:43 PM

ಬೆಳಗಾವಿ, ಜನವರಿ 11: ಕೋರ್ಟ್​ಗೆ ಹಾಜರುಪಡಿಸಲು ಕರೆತಂದಿದ್ದಾಗ ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿ ಆರೋಪಿ ಪರಾರಿಯಾಗಿರುವಂತಹ ಘಟನೆ ಬೆಳಗಾವಿಯ JMFC ಕೋರ್ಟ್ ಆವರಣದಲ್ಲಿ ನಡೆದಿದೆ. ಅಬ್ದುಲ್ ಗನಿ ಶಬ್ಬೀರ್ ಶೇಖ್ ಪರಾರಿಯಾದ ಆರೋಪಿ. ಕಳ್ಳತನ, ದರೋಡೆ ಕೇಸ್​​ನಲ್ಲಿ ಜೈಲು ಸೇರಿದ್ದ.  ಹಿಂಡಲಗಾ ಜೈಲಿಂದ ಟಿಳಕವಾಡಿ ಪೊಲೀಸರು ಕೋರ್ಟ್​ಗೆ ಕರೆತಂದಿದ್ದರು.

ಆರೋಪಿ ಎಸ್ಕೇಪ್ ಆಗುತ್ತಿದ್ದಂತೆ ಪೊಲೀಸರು ಹುಡುಕಾಡಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

8 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ಲೆಕ್ಕಾಧಿಕಾರಿ

ಬಾಗಲಕೋಟೆ: 8 ಸಾವಿರ ರೂ. ಲಂಚ ಸ್ವೀಕರಿಸುವಾಗ ಜಮಖಂಡಿ ನಗರಸಭೆ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ನಡೆದಿದೆ. ಮಹಾವೀರ ಧ್ಯೇಯಗೊಂಡ ಬಲೆಗೆ ಬಿದ್ದ ಅಧಿಕಾರಿ.

ಇದನ್ನೂ ಓದಿ: ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ಮೇಲೆ ದಾಳಿ: ನಾಲ್ವರು ಮಹಿಳೆಯರ ರಕ್ಷಣೆ, 10 ಪುರುಷರು ವಶಕ್ಕೆ

ಪೌರಕಾರ್ಮಿಕರ ವೇತನ ಬಿಡುಗಡೆಗೆ ಪೌರಕಾರ್ಮಿಕ ಚೇತನ್ ತರತರಿ ಎಂಬುವವರಿಂದ ಲಂಚ ಸ್ವೀಕರಿಸುತ್ತಿದ್ದ. ಬಾಕಿ ವೇತನ ಬಿಡುಗಡೆಗೆ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ. ಈ ವೇಳೆ ಎಸ್‌ಪಿ ಶಂಕರ್ ರಾಗಿ, ಡಿವೈಎಸ್‌ಪಿ ಪುಷ್ಪಲತಾ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

ಜಗುಲಿ ಮೇಲೆ ದೇವರ ಮುಂದಿಟ್ಟ ದೀಪದಿಂದ ಅವಘಡ: ಸುಟ್ಟು ಭಸ್ಮವಾದ ಗುಡಿಸಲು

ವಿಜಯಪುರ: ಇಂಡಿ ತಾಲೂಕಿನ ಲಿಂಗದಳ್ಳಿ ಗ್ರಾಮದ ಬಳಿ ತೋಟದಲ್ಲಿ ದೇವರ ಮುಂದಿಟ್ಟಿದ್ದ ದೀಪದಿಂದ ಬೆಂಕಿ ತಗುಲಿ ಗುಡಿಸಲು ಸುಟ್ಟು ಭಸ್ಮವಾಗಿರುವಂತಹ ಘಟನೆ ನಡೆದಿದೆ. ಸಿದ್ದಪ್ಪ ವಾಲಿಕಾರ ಎಂಬುವವರ ಗುಡಿಸಲಿನಲ್ಲಿದ್ದ ನಿತ್ಯ ಬಳಕೆಯ ವಸ್ತುಗಳು, ನಗದು, ಚಿನ್ನಾಭರಣ ಬೆಂಕಿಗಾಹುತಿ ಆಗಿವೆ. ಇಂಡಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನೆಲಮಂಗಲದ ಎಡೇಹಳ್ಳಿಯಲ್ಲಿ ಸರಣಿ ಅಪಘಾತ

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಎಡೇಹಳ್ಳಿಯಲ್ಲಿ ಕ್ಯಾಂಟರ್‌ ವಾಹನ, ಕಾರು, ಸರ್ಕಾರಿ ಬಸ್‌ ಮಧ್ಯೆ ಸರಣಿ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ಬದುಕಿರುವವರು ಸತ್ತಂತೆ ಕನಸಿನಲ್ಲಿ ಬಂದರೆ ಏನರ್ಥ? ವಿಡಿಯೋ ನೋಡಿ
ಬದುಕಿರುವವರು ಸತ್ತಂತೆ ಕನಸಿನಲ್ಲಿ ಬಂದರೆ ಏನರ್ಥ? ವಿಡಿಯೋ ನೋಡಿ
ನೆಲಮಂಗಲ: ಹೆದ್ದಾರಿ ಜಲಾವೃತ, ನೀರಿನಲ್ಲಿ ಬಂದ ಬೈಕ್ ಸವಾರನ ಸ್ಥಿತಿ ನೋಡಿ!
ನೆಲಮಂಗಲ: ಹೆದ್ದಾರಿ ಜಲಾವೃತ, ನೀರಿನಲ್ಲಿ ಬಂದ ಬೈಕ್ ಸವಾರನ ಸ್ಥಿತಿ ನೋಡಿ!
Daily Horoscope: ಸೋಮವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
Daily Horoscope: ಸೋಮವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಬೆಂಗಳೂರು ಮಳೆ: ಸಿಸಿಬಿ ಕಚೇರಿಯೊಳಗೆ ನುಗ್ಗಿದ ನೀರು, ಅವಾಂತರ
ಬೆಂಗಳೂರು ಮಳೆ: ಸಿಸಿಬಿ ಕಚೇರಿಯೊಳಗೆ ನುಗ್ಗಿದ ನೀರು, ಅವಾಂತರ