AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಕುಡಿದು ಪೀಡಿಸುತ್ತಿದ್ದ ಮಗನನ್ನೇ ಕೊಂದ ತಂದೆ

ಕೂಲಿ ಮಾಡಿ ಬದುಕು ಕಟ್ಟಿಕೊಳ್ಳುತ್ತಿದ್ದ ಆ ದಂಪತಿಗೆ ಎರಡು ಗಂಡು ಮಕ್ಕಳು ಇದ್ದಾರೆ. ಒಬ್ಬ ಓದುತ್ತಿದ್ದರೆ, ದೊಡ್ಡ ಮಗ ಕುಡಿತದ ಚಟಕ್ಕೆ ದಾಸನಾಗಿ ಹಣಕ್ಕಾಗಿ ತಂದೆ ತಾಯಿಯನ್ನ ಪೀಡಿಸುತ್ತಿದ್ದ. ಈ ಕಿರುಕುಳ ತಾಳಲಾರದೇ ತಂದೆಯೇ ಮಗನನ್ನ ಕೊಲೆ ಮಾಡಿದ್ದಾನೆ.

ಬೆಳಗಾವಿ: ಕುಡಿದು ಪೀಡಿಸುತ್ತಿದ್ದ ಮಗನನ್ನೇ ಕೊಂದ ತಂದೆ
ತಂದೆ ಜೀನ್ನಪ್ಪ ಕಾಂಜಿ, ಮಗ ಭರತೇಶ್
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 03, 2023 | 2:57 PM

ಬೆಳಗಾವಿ: ದಿಕ್ಕು ತೋಚದ ಸ್ಥಿತಿಯಲ್ಲಿ ಕುಳಿತ ಈ ತಾಯಿಯ ಪರಿಸ್ಥಿತಿ ಯಾರಿಗೂ ಬಾರದಿರಲಿ. ಒಂದು ಕಡೆ ಗಂಡ ಜೈಲು ಸೇರಿದ್ದರೆ ಇನ್ನೊಂದು ಕಡೆ ಮಗ ಮಸಣ ಸೇರಿದ್ದಾನೆ. ಎನೂ ಮಾಡಲಿ ಅನ್ನೋದು ಕೂಡ ಗೊತ್ತಾಗದೇ ಮನದಲ್ಲಿ ಎಲ್ಲವನ್ನೂ ನುಂಗಿಕೊಂಡು ಕುಳಿತಿದ್ದಾರೆ. ಈ ತಾಯಿಯ ಹೆಸರು ಶೋಭಾ, ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಬಿ.ಕೆ ಗ್ರಾಮದ ನಿವಾಸಿ. ಅರವತ್ತರ ವಯಸ್ಸಿನಲ್ಲೂ ದುಡಿದೇ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದ ಈ ಕುಟುಂಬ ಇದೀಗ ಬೀದಿಗೆ ಬಂದಿದೆ. ಅಷ್ಟಕ್ಕೂ ಈ ಶೋಭಾರ ಗಂಡ ಜೀನ್ನಪ್ಪ ಕಾಂಜಿ ಮಗನನ್ನೇ ಕೊಲೆ ಮಾಡಿ ಜೈಲು ಸೇರಿದ್ದಾನೆ.

ನಿನ್ನೆ(ಮಾ.1) ಸಂಜೆ 30ವರ್ಷದ ಮಗ ಭರತೇಶ್ ಕಂಠಪೂರ್ತಿ ಕುಡಿದುಕೊಂಡು ಮನೆಗೆ ಬಂದಿದ್ದಾನೆ. ಹೀಗೆ ಕುಡಿದುಕೊಂಡು ಬಂದರೂ, ಇನ್ನೂ ಕುಡಿಯಲು ಹಣ ಕೊಡು ಅಂತಾ ತಂದೆಯನ್ನ ಪೀಡಿಸಿದ್ದಾನೆ. ಹಣ ಇಲ್ಲ ಎಂದು ತಂದೆ ಜೀನ್ನಪ್ಪ ಹೇಳಿದ್ರೂ ಕೇಳದ ಮಗ ಜಗಳ ತೆಗೆದಿದ್ದಾನೆ. ಈ ವೇಳೆ ಪಿತ್ತ ನೆತ್ತಿಗೇರಿಸಿಕೊಂಡ ತಂದೆ ಜೀನ್ನಪ್ಪ ಮನೆಯಲ್ಲಿದ್ದ ಕೊಡಲಿಯಿಂದ ಮಗನ ಕತ್ತಿಗೆ ಹೊಡೆದು ಸಾಯಿಸಿದ್ದಾನೆ. ನಂತರ ಕಾಗವಾಡ ಪೊಲೀಸ್ ಠಾಣೆಗೆ ಹೋಗಿ ಮಗನನ್ನ ಕೊಂದಿದ್ದೇನೆ ಎಂದು ಪೊಲೀಸರಿಗೆ ಶರಣಾಗಿದ್ದಾನೆ.

ಇದನ್ನೂ ಓದಿ:ಬೀದರ್​​​: ಪ್ರತ್ಯೇಕ ಘಟನೆಗಳಲ್ಲಿ ತಾಯಿಯ ಕಣ್ಣೆದುರೇ ಮಗನ ಕೊಲೆ, ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

ಅಷ್ಟಕ್ಕೂ ಇಲ್ಲಿ ಕೊಲೆ ಮಾಡಿದ ಜೀನ್ನಪ್ಪ 64ವರ್ಷದವನಾಗಿದ್ದು, ಈ ವಯಸ್ಸಿನಲ್ಲೂ ಕೂಲಿ ಕೆಲಸ ಮಾಡಿಕೊಂಡಿದ್ದ. ಮಗ ಮದುವೆ ವಯಸ್ಸಿಗೆ ಬಂದರೂ ಕೆಲಸ ಮಾಡದೇ ಊರಲ್ಲಿ ಉಂಡಾಡಿ ಗುಂಡನಂತೆ ಓಡಾಡಿಕೊಂಡಿದ್ದ. ದುಡಿದು ವಯಸ್ಸಾದ ತಂದೆ ತಾಯಿಯನ್ನ ಸಾಕಬೇಕಿದ್ದ ಮಗನೇ ತಂದೆ ತಾಯಿ ಮೇಲೆ ಹಲ್ಲೆ ಮಾಡಿ ಅವರು ದುಡಿಮೆಯ ಹಣವನ್ನೇ ಕಿತ್ತುಕೊಂಡು ಕುಡಿತದ ನಶೆ ಮಾಡಿಕೊಂಡು ಓಡಾಡುತ್ತಿದ್ದ.

ಕೆಲ ವರ್ಷಗಳಿಂದ ಆಗಾಗ ತಂದೆ ಜೊತೆಗೆ ಕುಡಿಯಲು ಹಣ ಕೊಡುವ ವಿಚಾರದಲ್ಲಿ ಗಲಾಟೆ ಮಾಡಿಕೊಳ್ಳುತ್ತಿದ್ದ ಈ ಪಾಪಿ ಭರತೇಶ್ ಹಣ ಕೊಟ್ಟ ಬಳಿಕ ಸುಮ್ಮನಾಗುತ್ತಿದ್ದ. ಇನ್ನೂ ಮದುವೆ ಕೂಡ ಆಗದ ಈತನಿಗೆ ತಮ್ಮನಿದ್ದು ಆತ ಇನ್ನೂ ಓದುತ್ತಿದ್ದಾನೆ ಈ ಕಾರಣಕ್ಕಾಗಿ ಕೂಲಿ ಕೆಲಸ ಮಾಡುತ್ತಿದ್ದ ತಂದೆ ತಾಯಿ ಮಗ ಜಗಳ ತೆಗೆದಾಗ ಹಣಕೊಟ್ಟು ಸುಮ್ಮನಾಗಿಸುತ್ತಿದ್ದರು. ಆದರೆ ಒಂದು ವಾರದಿಂದ ತಂದೆ ಎಲ್ಲಿಯೂ ಕೆಲಸಕ್ಕೆ ಹೋಗಿರಲಿಲ್ಲ ಆತನ ಬಳಿ ಹಣವೂ ಇರಲಿಲ್ಲ. ಈ ಕಾರಣಕ್ಕಾಗಿ ಭರತೇಶ್ ದುಡ್ಡು ಕೇಳಿದಾಗ ಕೊಟ್ಟಿರಲಿಲ್ಲ ಇದೇ ಕಾರಣಕ್ಕೆ ಅವರ ಮೇಲೆ ಹಲ್ಲೆ ಮಾಡಿ ಜಗಳ ಮಾಡಿದ್ದಾನೆ.

ನಿನ್ನೆಯೂ ಕೂಡ ಇದೇ ವಿಚಾರಕ್ಕೆ ಜಗಳವಾಗಿ ಮಗನ ಕಾಟ ತಾಳಲಾರದೇ ಭರತೇಶ್​ನನ್ನ ಕೊಲೆ ಮಾಡಿದ್ದಾನೆ. ಇನ್ನೂ ಈ ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಕಾಗವಾಡ ಪೊಲೀಸರು ಪರಿಶೀಲನೆ ನಡೆಸಿ ಶವವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಇಂದು(ಮಾ.2) ಸಂಜೆ ವೇಳೆ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಶವ ಹಸ್ತಾಂತರ ಮಾಡಲಿದ್ದಾರೆ. ಇತ್ತ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ತಂದೆ ಜೀನ್ನಪ್ಪನನ್ನ ಜೈಲಿಗೆ ಕಳುಹಿಸಿದ್ದಾರೆ.

ಇದನ್ನೂ ಓದಿ:ಬೀದರ್: ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ

ಒಟ್ಟಾರೆ ಮಕ್ಕಳು ದೊಡ್ಡವರಾದ ಬಳಿಕ ತಂದೆ ತಾಯಿಯನ್ನ ದುಡಿದು ಸಾಕುತ್ತಾರೆ ಅಂದುಕೊಂಡಿದ್ದ ದಂಪತಿಗೆ ಇಳಿ ವಯಸ್ಸಿನಲ್ಲೂ ಪಾಪಿ ಮಗ ಕಾಡಲು ಶುರು ಮಾಡಿದ್ದ. ಆತನ ಕಾಟ ತಾಳಲಾರದೇ ತಂದೆ ಕೊಲೆ ಮಾಡಿ ಜೈಲುಪಾಲಾದ್ರೇ, ಮಗ ಮಸಣ ಸೇರಿದ್ದಾನೆ. ಆದರೆ ಇಬ್ಬರನ್ನೂ ಕಳೆದುಕೊಂಡ ಆ ತಾಯಿ ಮಾತ್ರ ಇದೀಗ ಅನಾಥವಾಗಿದ್ದು ಮುಂದೇನೂ ಅನ್ನೋ ಚಿಂತೆಯಲ್ಲಿದ್ದಾರೆ. ಅದೇನೆ ಇರಲಿ ಮಗನ ಚಟ ತಂದೆಯ ಹಠದಿಂದ ಇದೀಗ ಇಡೀ ಕುಟುಂಬವೇ ಬೀದಿಗೆ ಬಂದಿದ್ದು ವಿಪರ್ಯಾಸ.

ಸಹದೇವ ಮಾನೆ ಟಿವಿ9 ಬೆಳಗಾವಿ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ