ದಪ್ಪ ಆಗುವ ಔಷಧಿ ಎಂದು ಹೇಳಿ ಪ್ರೀತಿಸಿ ಮದುವೆಯಾದವಳಿಗೆ ವಿಷ ಉಣಿಸಿದ್ನಾ ಗಂಡ?

ಬಳ್ಳಾರಿ (Ballari) ನಗರದ ಕೌಲಬಜಾರ್​ನಲ್ಲಿ ಗಂಡನೇ ಹೆಂಡತಿಗೆ ಊಟದಲ್ಲಿ ವಿಷ ಹಾಕಿ ಕೊಲೆ ಮಾಡಿದ ಆರೋಪ ಕೇಳಿಬಂದಿದೆ. ಪ್ರೀತಿಸಿ ಮದುವೆಯಾಗಿದ್ದ ಸಾಧಿಕ್ ಸಾಬ್ ಮತ್ತು ಫರ್ಜಾನಾಭಿ ಜೋಡಿ ಪ್ರೀತಿಗೆ ಕೌಲಬಜಾರ್ ಜನರು ಆಸರೆಯಾಗಿದ್ದರು. ಇಂತಹ ಸುಖ ಸಂಸಾರದಲ್ಲಿ ಎಲ್ಲವೂ ಚೆನ್ನಾಗಿದೆ ಎನ್ನುವಷ್ಟರಲ್ಲಿ ಇದೀಗ ಈ ದುರ್ಘಟನೆ ನಡೆದಿದೆ. ಈ ಕುರಿತು ಮೃತಳ ಪೋಷಕರು ಬಳ್ಳಾರಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

ದಪ್ಪ ಆಗುವ ಔಷಧಿ ಎಂದು ಹೇಳಿ ಪ್ರೀತಿಸಿ ಮದುವೆಯಾದವಳಿಗೆ ವಿಷ ಉಣಿಸಿದ್ನಾ ಗಂಡ?
ಮೃತ ಮಹಿಳೆ, ಆರೋಪಿ ಗಂಡ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 28, 2024 | 3:22 PM

ಬಳ್ಳಾರಿ, ಫೆ.29: ಗಂಡನೇ ಹೆಂಡತಿಗೆ ಊಟದಲ್ಲಿ ವಿಷ ಹಾಕಿ ಕೊಲೆ ಮಾಡಿದ ಆರೋಪ ಬಳ್ಳಾರಿ (Ballari) ನಗರದ ಕೌಲಬಜಾರ್​ನಲ್ಲಿ ಕೇಳಿಬಂದಿದೆ. ಈ ಕುರಿತು ಮೃತಳ ಪೋಷಕರು ಆರೋಪಿಸಿದ್ದಾರೆ. ಹೆಂಡತಿ ದಪ್ಪ ಆಗಲಿ ಎಂದು ಔಷಧೀಯ ನೆಪದಲ್ಲಿ ಗಂಡ ಸಾಧಿಕ ಸಾಬ್ (25) ವಿಷ ಬೆರಸಿದ್ದನಂತೆ. ಈ ಹಿನ್ನಲೆ ಮೂರು ದಿನಗಳ ಕಾಲ ವಿಮ್ಸ್ ಆಸ್ಪತ್ರೆಯಲ್ಲಿ ಮೃತ ಫರ್ಜಾನಾಭಿ (22) ಚಿಕಿತ್ಸೆಗೆ ದಾಖಲಾಗಿದ್ದರು. ಇಂದು(ಫೆ.28) ಚಿಕಿತ್ಸೆ ಫಲಿಸದೆ ಫರ್ಜಾನಾಭಿ ಮೃತರಾಗಿದ್ದಾರೆ.

ಪ್ರೀತಿಸಿ ಮದುವೆಯಾಗಿದ್ದ ಸಾಧಿಕ್ ಸಾಬ್ ಮತ್ತು ಫರ್ಜಾನಾಭಿ

ಮೃತ ಮಹಿಳೆ ಶವದ ಮುಂದೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಪ್ರೀತಿಸಿ ಮದುವೆಯಾಗಿದ್ದ ಸಾಧಿಕ್ ಸಾಬ್ ಮತ್ತು ಫರ್ಜಾನಾಭಿ ಜೋಡಿ ಪ್ರೀತಿಗೆ ಕೌಲಬಜಾರ್ ಜನರು ಆಸರೆಯಾಗಿದ್ದರು. ಸಾರ್ವಜನಿಕರೆ ಹಣ ಹೊಂದಿಸಿ ಈ ಪ್ರೀತಿಗೆ ಬೆಂಬಲಿಸಿ ಮದುವೆ ಮಾಡಿದ್ದರು. ಮದುವೆಯಾಗಿ ಐದು ವರ್ಷ ಸಂಸಾರ ಮಾಡಿದ್ದ ಇವರಿಗೆ ಎರಡು ಹೆಣ್ಣು ಮಕ್ಕಳನ್ನು ಕೂಡ ಇದ್ದರು. ಇಂತಹ ಸುಖ ಸಂಸಾರದಲ್ಲಿ ಎಲ್ಲವೂ ಚೆನ್ನಾಗಿದೆ, ಎನ್ನುವಷ್ಟರಲ್ಲಿ ಪತಿ, ಕಿರುಕುಳ ನೀಡಲು ಪ್ರಾರಂಭಿಸಿದ್ದ.

ಇದನ್ನೂ ಓದಿ:ಬೆಂಗಳೂರು: 12 ಗಂಟೆಗೂ ಅಧಿಕ ಕಾಲ ಮನೆಯಲ್ಲೇ ಶವ ಇಟ್ಟುಕೊಂಡು ವೃದ್ಧೆಯ ದೇಹವನ್ನ ತುಂಡರಿಸಿದ ಹಂತಕ, ಕೊಲೆ ಹಿಂದಿನ ಕಾರಣ ರಿವಿಲ್​

ಹೌದು, ಪದೇ ಪದೇ ಪರ್ಜಾನಾಭಿಗೆ ಗಂಡ ಸಾಧಿಕ್​ ಕಿರುಕುಳ ನೀಡುತ್ತಿದ್ದನಂತೆ. ಪರ್ಜಾನಿಭಿಗೆ ತಂದೆ ಇಲ್ಲ, ಬಡತನದ ಕುಟುಂಬದಿಂದ ಬಂದ ಹೆಣ್ಣು ಮಗಳು, ಬಡತನ ಇರುವ ಹಿನ್ನೆಲೆ ಗಂಡನಿಗೆ ಹೆದರಿ ಜೀವನ ನಡೆಸುತ್ತಿದ್ದಳು. ಆದರೂ ಕೂಡ ಕರಗದ ಗಂಡನ ಮನಸ್ಸು, ಪ್ರೀತಿಸಿದ ಹೆಂಡತಿಯನ್ನ ಕೊಂದನಾ? ಎಂಬ ಪ್ರಶ್ನೆ ಮೂಡಿದೆ. ಇನ್ನು ಮೃತಳ ಪೋಷಕರು, ಆರೋಪಿಗೆ ತಕ್ಕ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿ, ಬಳ್ಳಾರಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!