Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಪ್ಪ ಆಗುವ ಔಷಧಿ ಎಂದು ಹೇಳಿ ಪ್ರೀತಿಸಿ ಮದುವೆಯಾದವಳಿಗೆ ವಿಷ ಉಣಿಸಿದ್ನಾ ಗಂಡ?

ಬಳ್ಳಾರಿ (Ballari) ನಗರದ ಕೌಲಬಜಾರ್​ನಲ್ಲಿ ಗಂಡನೇ ಹೆಂಡತಿಗೆ ಊಟದಲ್ಲಿ ವಿಷ ಹಾಕಿ ಕೊಲೆ ಮಾಡಿದ ಆರೋಪ ಕೇಳಿಬಂದಿದೆ. ಪ್ರೀತಿಸಿ ಮದುವೆಯಾಗಿದ್ದ ಸಾಧಿಕ್ ಸಾಬ್ ಮತ್ತು ಫರ್ಜಾನಾಭಿ ಜೋಡಿ ಪ್ರೀತಿಗೆ ಕೌಲಬಜಾರ್ ಜನರು ಆಸರೆಯಾಗಿದ್ದರು. ಇಂತಹ ಸುಖ ಸಂಸಾರದಲ್ಲಿ ಎಲ್ಲವೂ ಚೆನ್ನಾಗಿದೆ ಎನ್ನುವಷ್ಟರಲ್ಲಿ ಇದೀಗ ಈ ದುರ್ಘಟನೆ ನಡೆದಿದೆ. ಈ ಕುರಿತು ಮೃತಳ ಪೋಷಕರು ಬಳ್ಳಾರಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

ದಪ್ಪ ಆಗುವ ಔಷಧಿ ಎಂದು ಹೇಳಿ ಪ್ರೀತಿಸಿ ಮದುವೆಯಾದವಳಿಗೆ ವಿಷ ಉಣಿಸಿದ್ನಾ ಗಂಡ?
ಮೃತ ಮಹಿಳೆ, ಆರೋಪಿ ಗಂಡ
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 28, 2024 | 3:22 PM

ಬಳ್ಳಾರಿ, ಫೆ.29: ಗಂಡನೇ ಹೆಂಡತಿಗೆ ಊಟದಲ್ಲಿ ವಿಷ ಹಾಕಿ ಕೊಲೆ ಮಾಡಿದ ಆರೋಪ ಬಳ್ಳಾರಿ (Ballari) ನಗರದ ಕೌಲಬಜಾರ್​ನಲ್ಲಿ ಕೇಳಿಬಂದಿದೆ. ಈ ಕುರಿತು ಮೃತಳ ಪೋಷಕರು ಆರೋಪಿಸಿದ್ದಾರೆ. ಹೆಂಡತಿ ದಪ್ಪ ಆಗಲಿ ಎಂದು ಔಷಧೀಯ ನೆಪದಲ್ಲಿ ಗಂಡ ಸಾಧಿಕ ಸಾಬ್ (25) ವಿಷ ಬೆರಸಿದ್ದನಂತೆ. ಈ ಹಿನ್ನಲೆ ಮೂರು ದಿನಗಳ ಕಾಲ ವಿಮ್ಸ್ ಆಸ್ಪತ್ರೆಯಲ್ಲಿ ಮೃತ ಫರ್ಜಾನಾಭಿ (22) ಚಿಕಿತ್ಸೆಗೆ ದಾಖಲಾಗಿದ್ದರು. ಇಂದು(ಫೆ.28) ಚಿಕಿತ್ಸೆ ಫಲಿಸದೆ ಫರ್ಜಾನಾಭಿ ಮೃತರಾಗಿದ್ದಾರೆ.

ಪ್ರೀತಿಸಿ ಮದುವೆಯಾಗಿದ್ದ ಸಾಧಿಕ್ ಸಾಬ್ ಮತ್ತು ಫರ್ಜಾನಾಭಿ

ಮೃತ ಮಹಿಳೆ ಶವದ ಮುಂದೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಪ್ರೀತಿಸಿ ಮದುವೆಯಾಗಿದ್ದ ಸಾಧಿಕ್ ಸಾಬ್ ಮತ್ತು ಫರ್ಜಾನಾಭಿ ಜೋಡಿ ಪ್ರೀತಿಗೆ ಕೌಲಬಜಾರ್ ಜನರು ಆಸರೆಯಾಗಿದ್ದರು. ಸಾರ್ವಜನಿಕರೆ ಹಣ ಹೊಂದಿಸಿ ಈ ಪ್ರೀತಿಗೆ ಬೆಂಬಲಿಸಿ ಮದುವೆ ಮಾಡಿದ್ದರು. ಮದುವೆಯಾಗಿ ಐದು ವರ್ಷ ಸಂಸಾರ ಮಾಡಿದ್ದ ಇವರಿಗೆ ಎರಡು ಹೆಣ್ಣು ಮಕ್ಕಳನ್ನು ಕೂಡ ಇದ್ದರು. ಇಂತಹ ಸುಖ ಸಂಸಾರದಲ್ಲಿ ಎಲ್ಲವೂ ಚೆನ್ನಾಗಿದೆ, ಎನ್ನುವಷ್ಟರಲ್ಲಿ ಪತಿ, ಕಿರುಕುಳ ನೀಡಲು ಪ್ರಾರಂಭಿಸಿದ್ದ.

ಇದನ್ನೂ ಓದಿ:ಬೆಂಗಳೂರು: 12 ಗಂಟೆಗೂ ಅಧಿಕ ಕಾಲ ಮನೆಯಲ್ಲೇ ಶವ ಇಟ್ಟುಕೊಂಡು ವೃದ್ಧೆಯ ದೇಹವನ್ನ ತುಂಡರಿಸಿದ ಹಂತಕ, ಕೊಲೆ ಹಿಂದಿನ ಕಾರಣ ರಿವಿಲ್​

ಹೌದು, ಪದೇ ಪದೇ ಪರ್ಜಾನಾಭಿಗೆ ಗಂಡ ಸಾಧಿಕ್​ ಕಿರುಕುಳ ನೀಡುತ್ತಿದ್ದನಂತೆ. ಪರ್ಜಾನಿಭಿಗೆ ತಂದೆ ಇಲ್ಲ, ಬಡತನದ ಕುಟುಂಬದಿಂದ ಬಂದ ಹೆಣ್ಣು ಮಗಳು, ಬಡತನ ಇರುವ ಹಿನ್ನೆಲೆ ಗಂಡನಿಗೆ ಹೆದರಿ ಜೀವನ ನಡೆಸುತ್ತಿದ್ದಳು. ಆದರೂ ಕೂಡ ಕರಗದ ಗಂಡನ ಮನಸ್ಸು, ಪ್ರೀತಿಸಿದ ಹೆಂಡತಿಯನ್ನ ಕೊಂದನಾ? ಎಂಬ ಪ್ರಶ್ನೆ ಮೂಡಿದೆ. ಇನ್ನು ಮೃತಳ ಪೋಷಕರು, ಆರೋಪಿಗೆ ತಕ್ಕ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿ, ಬಳ್ಳಾರಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ