AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿಯಲ್ಲಿ ಮಾಜಿ ಮೇಯರ್ ಮಗನ ಅಟ್ಟಹಾಸ: ದಾರಿ ಬಿಡಿ ಎಂದಿದ್ದಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

ಹುಟ್ಟು ಹಬ್ಬ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಡಿಜೆ ಹಾಕಿಕೊಂಡು ಬಳ್ಳಾರಿ ಮಾಜಿ ಮೇಜರ್ ಮಗ ರಘು ಮತ್ತು ಆತನ ಸಹಚರರು ಕುಣಿಯುತ್ತಿದ್ದರು. ಈ ವೇಳೆ ದಾರಿ ಬಿಡಿ ಎಂದು ಯುವಕ ತಿಪ್ಪೇಸ್ವಾಮಿ ಪ್ರಶ್ನಿಸಿದ್ದಕ್ಕೆ ಆತನ ಮೇಲೆ ರಘು ಹಾಗೂ ಆತನ ಸಹಚರರು ಹಲ್ಲೆ ಮಾಡಿದ್ದಾರೆ. ​

ಬಳ್ಳಾರಿಯಲ್ಲಿ ಮಾಜಿ ಮೇಯರ್ ಮಗನ ಅಟ್ಟಹಾಸ: ದಾರಿ ಬಿಡಿ ಎಂದಿದ್ದಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 05, 2024 | 2:54 PM

Share

ಬಳ್ಳಾರಿ, ಮಾರ್ಚ್​​ 05: ಬಳ್ಳಾರಿ (Bellari) ಮಾಜಿ ಮೇಯರ್ ಮಗ ಅಟ್ಟಹಾಸ ಮೆರೆದಿದ್ದಾನೆ. ಮಾಜಿ ಮೇಯರ್ ಮಗ ರಘು ಮತ್ತವರ ಗ್ಯಾಂಗ್ ಹುಟ್ಟು ಹಬ್ಬದ ಸಂಭ್ರಮಾಚರಣೆ ನಿಮಿತ್ತ ರಸ್ತೆಯಲ್ಲಿ ಡಿಜೆ ಹಾಕಿ, ತಲವಾರು ಹಿಡಿದು ಡ್ಯಾನ್ಸ್ ಮಾಡುತ್ತಿದ್ದರು. ಈ ವೇಳೆ ದಾರಿ ಬಿಡಿ ಎಂದು ಯುವಕ ತಿಪ್ಪೇಸ್ವಾಮಿ ಹೇಳಿದರು. ಇದಕ್ಕೆ ರಘು ಹಾಗೂ ಅವನ ಸ್ನೇಹಿತರು ತಿಪ್ಪೇಸ್ವಾಮಿ ಅವರ ಮೇಲೆ ಮಾರಣಾಂತಿಕ ಹಲ್ಲೆ (Attack) ಮಾಡಿದರು. ಇದರಿಂದ ತಿಪ್ಪೇಸ್ವಾಮಿ ತೀವ್ರ ಗಾಯಗಳಾಗಿವೆ. ಇನ್ನು ಪ್ರಕರಣ ಸಂಬಂಧ ಬಳ್ಳಾರಿ ಗಾಂಧಿನಗರ ಠಾಣೆಯಲ್ಲಿ ರಘಾವೇಂದ್ರ ಸೇರಿ ಎಂಟು ಜನರ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಪ್ರಮುಖ ಆರೋಪಿ ರಾಘವೇಂದ್ರ ಸೇರಿದಂತೆ ಈತನ ಸಹಚರರಾದ ರಾಜು, ರಾಜಶೇಖರ, ಬಾಲು ಅನಿಲ್ ಕುಮಾರ್, ಭಾಸ್ಕರ್ ಏಳು ಜನರ ಬಂಧನವಾಗಿದೆ.

ನಿಧಿ ಶೋಧಿಸುತ್ತಿದ್ದನನ್ನು ಪ್ರಶ್ನಿಸಿದ್ದಕ್ಕೆ ಮಾರಣಾಂತಿಕ ಹಲ್ಲೆ

ಕೋಲಾರ: ನಿಧಿ ಶೋಧಿಸುತ್ತಿದ್ದನ್ನನ್ನು ಪ್ರಶ್ನಿಸಿದ್ದಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಕೋಲಾರ ತಾಲೂಕಿನ ತ್ಯಾವನಹಳ್ಳಿಯ ಗಂಗಮ್ಮ ದೇಗುಲದಲ್ಲಿ ನಡೆದಿದೆ. ತ್ಯಾವನಹಳ್ಳಿಯ ಆನಂದ್ ಮತ್ತು ಗ್ಯಾಂಗ್​ ಹಲ್ಲೆ ಮಾಡಿದ ಆರೋಪಿಗಳು. ಮಂಜುನಾಥ್ ಥಳಿತಕ್ಕೆ ಒಳಗಾದ ಮಹಿಳೆ. ಆನಂದ್ ಮತ್ತು ಗ್ಯಾಂಗ್ ಮಂಜುನಾಥ ಅವರ ತಲೆಗೆ ಕಲ್ಲಿನಿಂದ ಹೊಡೆದಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗ್ರಾಮಸ್ಥರು ಬರುತ್ತಿದ್ದಂತೆ ಆನಂದ್ ಮತ್ತು ಗ್ಯಾಂಗ್ ಕಾಲ್ಕಿತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲೊಂದು ಅಮಾನುಷ ಕೃತ್ಯ, ಹೆತ್ತ ತಾಯಿಯಿಂದಲೇ ಮಗುವಿನ ಮೇಲೆ ಹಲ್ಲೆ

ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಮಂಜುನಾಥ್​ ಪ್ರಜ್ಞಾಹೀನ ಸ್ಥಿತಿ ತಲುಪಿದ್ದು, ಕೂಡಲೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸ್ನೇಹಿತರ ಗಲಾಟೆಯಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಸಾವು

ಕಲಬುರಗಿ: ಸ್ನೇಹಿತರ ಗಲಾಟೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಅಭಿಷೇಕ್ (18) ಮೃತ ಯುವಕ. ಮಾರ್ಚ್ 3ರಂದು ಕಲಬುರಗಿ ನಗರದ ಸರಸ್ವತಿಪುರಂನಲ್ಲಿ ಸ್ನೇಹಿತರ ಮಧ್ಯೆ ಜಗಳವಾಗಿ ಅಭಿಷೇಕ್​ನನ್ನು ಥಳಿಸಲಾಗಿತ್ತು. ಈ ಗಲಾಟೆಯಲ್ಲಿ ಗಾಯಗೊಂಡು ಅಭಿಷೇಕ ಜಿಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು (ಮಾ.05) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ವಿಶ್ವವಿದ್ಯಾಲಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:32 pm, Tue, 5 March 24

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ