AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಕನಿಂದ ಮಾನಹಾನಿ ಮೆಸೇಜ್ ರವಾನೆ; ಎಸ್​ಡಿಎಂ ಶಾಲೆಯಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ, ಸಾವು

ಶಿಕ್ಷಕರೊಬ್ಬರು ತನ್ನ ಕುರಿತು ಮತ್ತೊಬ್ಬ ವಿದ್ಯಾರ್ಥಿನಿಗೆ ಮಾನಹಾನಿ ಮೆಸೇಜ್ ಮಾಡಿದ ಹಿನ್ನೆಲೆ ಮನನೊಂದ ಎಸ್​ಡಿಎಂ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. SDM ಶಾಲೆಯ ಚಿತ್ರಕಲಾ ಶಿಕ್ಷಕ ರೂಪೇಶ್ ಪೂಜಾರಿ ಮೆಸೇಜ್ ಕಳುಹಿಸಿದ ಶಿಕ್ಷಕನಾಗಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿಕ್ಷಕನಿಂದ ಮಾನಹಾನಿ ಮೆಸೇಜ್ ರವಾನೆ; ಎಸ್​ಡಿಎಂ ಶಾಲೆಯಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ, ಸಾವು
ಶಿಕ್ಷಕನಿಂದ ಮೆಸೇಜ್ ರವಾನೆ; ಎಸ್​ಡಿಎಂ ಶಾಲೆಯಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ, ಸಾವು
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: Rakesh Nayak Manchi|

Updated on:Feb 13, 2024 | 2:41 PM

Share

ಮಂಗಳೂರು, ಫೆ.12: ತನ್ನ ಬಗ್ಗೆ ಶಿಕ್ಷಕ ಮಾನಹಾನಿ ಮೆಸೇಜ್ ರವಾನಿಸಿದ ಹಿನ್ನೆಲೆ ಮನನೊಂದ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಎಸ್​ಡಿಎಸ್​ ಶಾಲೆಯ (SDM School) 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ನಡೆದಿದೆ. ಪ್ರಕರಣ ಸಂಬಂಧ ಚಿತ್ರಕಲಾ ಶಿಕ್ಷಕ ರೂಪೇಶ್ ಪೂಜಾರಿ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತನ್ನ ಬಗ್ಗೆ ಮತ್ತೊಬ್ಬ ವಿದ್ಯಾರ್ಥಿನಿಗೆ ಚಿತ್ರಕಲಾ ಶಿಕ್ಷಕ ರೂಪೇಶ್ ಪೂಜಾರಿ ಮಾನಹಾನಿ ಮೆಸೇಜ್ ಮಾಡಿ ವಿಚಾರ ತಿಳಿದ 10ನೇ ತರಗತಿ ವಿದ್ಯಾರ್ಥಿನಿ ತನ್ನ ಪೋಷಕರಿಗೆ ತಿಳಿಸಿದ್ದಳು. ಅದರಂತೆ ಶಾಲೆಗೆ ತೆರಳಿ ವಿಚಾರಿಸಲಾಗಿತ್ತು. ಫೆಬ್ರವರಿ 7 ರಂದು ಎಂದಿನಂತೆ ಶಾಲೆಗೆ ಹೋಗುತ್ತಿದ್ದಾಗ ವಿದ್ಯಾರ್ಥಿನಿ ಬಿಸ್ಕೆಟ್ ಪ್ಯಾಕೇಟ್ ಜೊತೆಗೆ ಇಲಿ ಪಾಷಾಣ ಕೂಡ ಖರೀದಿಸಿ ಕೊಂಡು ಹೋಗಿದ್ದಳು.

ಇದನ್ನೂ ಓದಿ: ಹಿಮಾಚಲ ಪ್ರದೇಶ: ಏಮ್ಸ್​ನ ನಾಲ್ಕನೇ ಮಹಡಿಯಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

ಬಳಿಕ, ಶಾಲೆಯಲ್ಲಿ ಬಿಸ್ಕೇಟ್​ಗೆ ಇಲಿ ಪಾಷಾಣ ಲೇಪಿಸಿ ಸೇವನೆ ಮಾಡಿದ್ದಾಳೆ. ಇದರಿಂದ ಆಕೆ ಅಸ್ವಸ್ಥಗೊಂಡಿದ್ದು, ಕೂಡಲೇ ಶಿಕ್ಷಕರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಕಿಡ್ನಿ, ಲಿವರ್ ನಿಷ್ಕ್ರಿಯಗೊಂಡ ಹಿನ್ನೆಲೆ ಇಂದು ಚಿಕಿತ್ಸೆ ಫಲಿಸದೆ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.

ಪ್ರಕರಣ ಸಂಬಂಧ ಮೃತ ವಿದ್ಯಾರ್ಥಿನಿಯ ತಾಯಿ ನೀಡಿದ ದೂರಿನ ಅನ್ವಯ ಧರ್ಮಸ್ಥಳ ಠಾಣಾ ಪೊಲೀಸರು ಆರೋಪಿ ರೂಪೇಶ್ ಪೂಜಾರಿ ವಿರುದ್ಧ ಐಪಿಸಿ 354D, 509, POSO Act 12, 75JJ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:57 pm, Mon, 12 February 24

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ